ಜಿಲ್ಲೆಗೊಬ್ಬ ನೋಡೆಲ್ ಅಧಿಕಾರಿ ನೇಮಕ
Team Udayavani, Dec 6, 2017, 7:45 AM IST
ಬೆಂಗಳೂರು: ಸರ್ಕಾರ, ಸಾರ್ವಜನಿಕ ಶಿಕ್ಷಣ ಇಲಾಖೆಯ ಶೈಕ್ಷಣಿಕ ಕಾರ್ಯಕ್ರಮವನ್ನು ರಾಜ್ಯದ ಶೈಕ್ಷಣಿಕ ಜಿಲ್ಲೆಗಳಲ್ಲಿ
ರಚನಾತ್ಮಕವಾಗಿ ಅನುಷ್ಠಾನಗೊಳಿಸಲು ಜಿಲ್ಲೆಗೊಬ್ಬ ನೋಡೆಲ್ ಅಧಿಕಾರಿಯನ್ನು ನೇಮಿಸಿ ಇಲಾಖೆ ಸುತ್ತೋಲೆ ಹೊರಡಿಸಿದೆ.
ಸರ್ಕಾರದ ಎಲ್ಲಾ ಕಾರ್ಯಕ್ರಮದ ಪ್ರಗತಿ ಪರಿಶೀಲನೆ, ಅಧಿಕಾರಿಗಳ ಜಿಲ್ಲಾ ಪ್ರವಾಸದ ಮಾಹಿತಿ ಸಭೆ, ಜಿಲ್ಲಾಮಟ್ಟದ ಕಾರ್ಯಕ್ರಮ ಅನುಷ್ಠಾನದ ಉಸ್ತುವಾರಿಯನ್ನು ಈ ಅಧಿಕಾರಿಗಳಿಗೆ ವಹಿಸಲಾಗಿದೆ. ಇಲಾಖೆ ಆಯುಕ್ತರು, ಬೆಂಗಳೂರು ಉತ್ತರ ಮತ್ತು ದಕ್ಷಿಣ ಜಿಲ್ಲೆಯ ನೋಡಲ್ ಅಧಿಕಾರಿಯಾಗಿ ಸೇವೆ ಸಲ್ಲಿಸಲಿದ್ದಾರೆ. ಎಸ್ಎಸ್ಎ ನಿರ್ದೇಶಕರಿಗೆ ಬೆಳಗಾವಿ, ಧಾರವಾಡ ಮತ್ತು ಕಲಬುರಗಿ
ವಿಭಾಗದ ಅಪರ ಆಯುಕ್ತರಿಗೆ ಕ್ರಮವಾಗಿ ಬೀದರ್, ವಿಜಯಪುರ, ನಿರ್ದೇಶಕರ ವರ್ಗಕ್ಕೆ ಹಾಸನ, ಮಂಡ್ಯ, ಮೈಸೂರು ಹೀಗೆ ಇಲಾಖೆ ಹಿರಿಯ ಅಧಿಕಾರಿಗಳಿಗೆ ಒಂದೊಂದು ಜಿಲ್ಲೆಯ ಹಂಚಿಕೆ ಮಾಡಲಾಗಿದೆ.
ಆರ್ಟಿಐ ಪ್ರಕರಣದ ವಿಲೇವಾರಿಯ ನಿರ್ವಹಣೆ, ಶುಲ್ಕ ಜಮಾ ಮಾಡಿರುವ ದಾಖಲೆ, ಸಾರ್ವಜನಿಕ ಕುಂದುಕೊರತೆ, ಮಹಿಳಾ ಆಯೋಗ ಸೇರಿದಂತೆ ವಿವಿಧ ಆಯೋಗದಿಂದ ಬರುವ ಅರ್ಜಿಗಳ ನಿರ್ವಹಣೆಯ ಪರಿಶೀಲನೆ ಮಾಡಲು ಈ ಅಧಿಕಾರಿಗಳಿಗೆ ತಿಳಿಸಲಾಗಿದೆ. ಎಸ್ಸೆಸ್ಸೆಲ್ಸಿ ಫಲಿತಾಂಶದ ವಿಶ್ಲೇಷಣೆ ಹಾಗೂ ಕ್ರಿಯಾ ಯೋಜನೆಯ ಅನುಷ್ಠಾನ ಜತೆಗೆ 32 ಅಂಶಗಳ ಬಗ್ಗೆ ಗಮನ ಹರಿಸಲು ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ