ಉಪ ಚುನಾವಣೆ ಕಣದಲ್ಲಿ  ಕಾಂಚಾಣದ್ದೇ ಸದ್ದು


Team Udayavani, Apr 7, 2017, 3:45 AM IST

money.jpg

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ನಂಜನಗೂಡು ಹಾಗೂ ಗುಂಡ್ಲುಪೇಟೆ ಉಪ ಚುನಾವಣೆಯಲ್ಲಿ ನಾಯಕರ ಮಾತಿನ ಸಮರಕ್ಕಿಂತ ಕಾಂಚಾಣದ ಸದ್ದು ಹೆಚ್ಚಾಗಿದೆ. ಬಹಿರಂಗ ಪ್ರಚಾರಕ್ಕೆ ಶುಕ್ರವಾರ ತೆರೆ ಬೀಳಲಿದ್ದು ಅದಕ್ಕೆ ಮುನ್ನ ಎರಡೂ ಕ್ಷೇತ್ರಗಳಲ್ಲಿ ಹಣ, ಮದ್ಯ, ಉಡುಗೊರೆ ಹಂಚಿಕೆಯದ್ದೇ
ಕಾರುಬಾರು ಆಗಿದ್ದು ಎರಡೂ ಪಕ್ಷಗಳು ಇದರ ಬಗ್ಗೆಯೇ ಹೆಚ್ಚು ವಾಕ್ಸಮರಕ್ಕಿಳಿದಿವೆ.

ಗುರುವಾರ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಲಕ್ಷ್ಮೀ ಹೆಬ್ಟಾಳ್ಕರ್‌ ಅವರು ಗುಂಡ್ಲುಪೇಟೆಯ ಮನೆಯೊಂದರಲ್ಲಿ ಹಣ ಹಂಚಿಕೆ ಮಾಡಿದ್ದಾರೆನ್ನಲಾದ ವಿಡಿಯೋ ಇದೀಗ ವೈರಲ್‌ ಆಗಿ ಸುದ್ದಿಯಾಗಿದೆ. ಈ ಬಗ್ಗೆ ಬಿಜೆಪಿ ನಾಯಕರು ಕಾಂಗ್ರೆಸ್‌ ವಿರುದ್ಧ
ಹರಿಹಾಯ್ದಿದ್ದರೆ, ಕಾಂಗ್ರೆಸ್‌ನವರು ನಾವು ಹಣ ಹಂಚಿಕೆ ಮಾಡಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

ಇಂಧನ ಸಚಿವ ಡಿ.ಕೆ.ಶಿವಕುಮಾರ್‌ ಆವರು, ಲಕ್ಷ್ಮೀ ಹೆಬ್ಟಾಳ್ಕರ್‌ ಮಹಿಳೆ ಎಂಬ ಕಾರಣಕ್ಕಾಗಿ ಟಾರ್ಗೆಟ್‌ ಮಾಡಲಾಗಿದೆ ಎಂದು ಹೇಳಿದ್ದಾರೆ. ಎರಡೂ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಹಣ ಹಾಗೂ ಮದ್ಯ ಹಂಚಿಕೆ ಬಗ್ಗೆ ರಾಜ್ಯಾದ್ಯಂತ ಸುದ್ದಿಯಾಗಿ ಗಮನ ಸೆಳೆದಿದೆ. ಕಾಂಗ್ರೆಸ್‌ನವರು ಹಣ ಹಂಚಿದ್ದಾರೆ ಎಂದು ಬಿಜೆಪಿಯವರು ವಿಡಿಯೋ ರೆಕಾರ್ಡ್‌
ಮಾಡಿರುವುದು, ಬಿಜೆಪಿಯವರು ಹಣ ಹಂಚಿದ್ದಾರೆ ಎಂದು ಕಾಂಗ್ರೆಸ್‌ನವರು ಆರೋಪಿಸಿರುವುದು ಇದೀಗ ವಿವಾದವೂ ಆಗಿದೆ.

ಈ ಮಧ್ಯೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೈಸೂರು ನಿವಾಸಕ್ಕೆ ಆಗಮಿಸಿದ್ದ ಗುಂಪೊಂದು ಪ್ರಚಾರಕ್ಕಾಗಿ ಹಣ ಕೊಡಿ ಎಂದು ಮನವಿ ಮಾಡಿದ ವಿಡಿಯೋ ದೃಶ್ಯಗಳು ಮಾಧ್ಯಮಗಳಲ್ಲಿ ಪ್ರಸಾರವಾಗಿ ಮುಜುಗರ ಸೃಷ್ಟಿಸಿದೆ. ಆಡಳಿತಾರೂಢ ಕಾಂಗ್ರೆಸ್‌ ಇಡೀ ಸಚಿವ ಸಂಪುಟದೊಂದಿಗೆ ಮುಖ್ಯಮಂತ್ರಿ ಸಹಿತ ಠಿಕಾಣಿ ಹೂಡಿದ್ದರೆ, ಬಿಜೆಪಿಯು ರಾಷ್ಟ್ರ ಮಟ್ಟದಿಂದ ಜಿಲ್ಲಾ ಮಟ್ಟದವರೆಗಿನ ಎಲ್ಲ ನಾಯಕರು ಎರಡೂ ಕ್ಷೇತ್ರಗಳಲ್ಲೇ ಬೀಡು ಬಿಟ್ಟಿದ್ದಾರೆ. 

ಲಕ್ಷ್ಮೀ ಹೆಬ್ಟಾಳ್ಕರ್‌ರಿಂದ ಹಣ ಹಂಚಿಕೆ?
ಗುಂಡ್ಲುಪೇಟೆ: ಸಚಿವ ಯು.ಟಿ.ಖಾದರ್‌ ಅವರ ಕಾರು ಚಾಲಕ ವ್ಯಕ್ತಿಯೋರ್ವನಿಗೆ ಹಣ ಹಂಚಿದ ಪ್ರಕರಣ, ಕಾಂಗ್ರೆಸ್‌ ಜಿಪಂ ಸದಸ್ಯ ಚನ್ನಪ್ಪ ಬಳಿ 1.26 ಲಕ್ಷ ರೂ.ಹಣ ಪತ್ತೆಯಾದ ನಂತರ, ಇದೀಗ ಕೆಪಿಸಿಸಿ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಟಾಳ್ಕರ್‌ ಅವರೇ ಸ್ವತಃ ಕಾಂಗ್ರೆಸ್‌ ಮಹಿಳಾ ಕಾರ್ಯಕರ್ತರಿಗೆ ಹಣ ಹಂಚಿಕೆ ಮಾಡುತ್ತಿರುವ ದೃಶ್ಯಗಳು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ.

ಕೆಪಿಸಿಸಿ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಟಾಳ್ಕರ್‌ ಅವರು ತಾಲೂಕಿನ ಅಣ್ಣೂರುಕೇರಿಯಲ್ಲಿ ಹಣ ಹಂಚುತ್ತಿರುವ ವಿಡಿಯೋ
ಮಾಧ್ಯಮಗಳಿಗೆ ಲಭ್ಯವಾಗಿದೆ. ಮಹಿಳಾ ಕಾರ್ಯಕರ್ತೆಯರೊಂದಿಗೆ ಮಾತನಾಡುತ್ತ, ಪಕ್ಕದಲ್ಲಿ ಕುಳಿತ ಇನ್ನೊಬ್ಬ ಮಹಿಳೆಯ ಬಳಿ ಹೆಸರುಗಳನ್ನು ಬರೆಸಿಕೊಂಡ ಹೆಬ್ಟಾಳ್ಕರ್‌ 2000 ರೂ. ನೋಟಿನ ಕಂತೆಯನ್ನು ಮಹಿಳಾ ಕಾರ್ಯಕರ್ತರಿಗೆ ನೀಡುತ್ತಿರುವ ದೃಶ್ಯ ಲಭ್ಯವಾಗಿದೆ.

ಇನ್ನೊಂದು ಪ್ರಕರಣದಲ್ಲಿ ಕನಕಪುರ ಮೂಲದ ಮೂವರು ಮಹಿಳೆಯರು ಹಾಗೂ ಒಬ್ಬ ಪುರುಷ ಹಣ ಹಂಚಲು
ಹೋಗಿದ್ದಾಗ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದಿರುವ ಘಟನೆ ತಾಲೂಕಿನ ಹೊರೆಯಾಲ ಗ್ರಾಮದಲ್ಲಿ ನಡೆದಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.