ಜೆಡಿಎಸ್ನ ಯಾವ ಶಾಸಕರೂ ಪಕ್ಷ ಬಿಡಲ್ಲ
Team Udayavani, Sep 14, 2019, 3:04 AM IST
ಬಳ್ಳಾರಿ: ಜೆಡಿಎಸ್ನ ಐದಾರು ಶಾಸಕರು ಪಕ್ಷವನ್ನು ಬಿಟ್ಟು ಹೋಗುತ್ತಿದ್ದಾರೆ ಎಂಬುದೆಲ್ಲ ಕಪೋಲಕಲ್ಪಿತ. ಒಂದಷ್ಟು ಭಿನ್ನಾಭಿಪ್ರಾಯ ಇರಬಹುದು. ಆದರೆ, ಯಾರೂ ಪಕ್ಷ ಬಿಟ್ಟು ಹೋಗಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ, ಶಾಸಕ ಎಚ್.ಕೆ. ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಈಗಾಗಲೇ ಪಕ್ಷ ಬಿಟ್ಟು ಹೋದವರ ಪರಿಸ್ಥಿತಿ ಏನಾಗಿದೆ ಎಂಬುದು ಗೊತ್ತಾಗಿದೆ. ಪಕ್ಷ ಬಿಟ್ಟವರೆಲ್ಲ ಕೋಮಾ ಸ್ಥಿತಿಯಲ್ಲಿದ್ದಾರೆ. ಪಕ್ಷದ ಶಾಸಕರಲ್ಲಿ ಕೆಲವರಿಗೆ ಸಚಿವ ಸ್ಥಾನ ಸಿಕ್ಕರೂ ಅಸಮಾಧಾನಗೊಂಡಿರುವುದು ದೊಡ್ಡ ದುರಂತ. ಪಕ್ಷದ ಟಿಕೆಟ್ ಪಡೆದು ಶಾಸಕರಾಗಿ ಅಧಿಕಾರ ಪಡೆದ ಬಳಿಕ ಸುಮ್ಮನೆ ಇರಬೇಕು. ಈ ರೀತಿ ಇಲ್ಲ ಸಲ್ಲದ ಹೇಳಿಕೆ ನೀಡಬಾರದು.
ಈ ರೀತಿ ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದು ಕಂಡು ಬಂದಲ್ಲಿ ಕೂಡಲೇ ಪಕ್ಷದ ವರಿಷ್ಠರಾದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು. ಆಪರೇಷನ್ ಕಮಲದ ಮೂಲಕ ಬಿಜೆಪಿ ಬೆಂಬಲಿಸಿದ ಕಾಂಗ್ರೆಸ್-ಜೆಡಿಎಸ್ನ 17 ಅನರ್ಹ ಶಾಸಕರಿಗೆ ಬಿಜೆಪಿಯವರು ಮೊದಲು ನ್ಯಾಯ ಕೊಡಿಸಲಿ. ನಂತರ, ಮತ್ತೂಂದಿಷ್ಟು ಶಾಸಕರನ್ನು ಪಕ್ಷಕ್ಕೆ ಕರೆದುಕೊಳ್ಳಲಿ ಎಂದು ತಿರುಗೇಟು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ