‘ನೀರಾವರಿ ಎಂದರೆ ಕೇವಲ ಕೃಷ್ಣಾ ಮೇಲ್ದಂಡೆಯೇ?’ ಎಂದ ಶಿವಲಿಂಗೇಗೌಡಗೆ ಉ.ಕ ಶಾಸಕರ ತರಾಟೆ
Team Udayavani, Mar 28, 2022, 4:53 PM IST
ಬೆಂಗಳೂರು: ನೀರಾವರಿ ಎಂದರೆ ಕೇವಲ ಕೃಷ್ಣಾ ಮೇಲ್ದಂಡೆ ಮಾತ್ರವೇ? ಎಂದು ಜೆಡಿಎಸ್ ಶಾಸಕ ಶಿವಲಿಂಗೇಗೌಡ ಪ್ರಶ್ನೆ ಮಾಡಿರುವುದು ವಿಧಾನಸಭೆಯಲ್ಲಿ ಉತ್ತರ ಕರ್ನಾಟಕ ಹಾಗೂ ಹಳೆ ಮೈಸೂರು ಭಾಗದ ಶಾಸಕರ ಮಧ್ಯೆ ಕೆಲ ಕಾಲ ವಾಗ್ವಾದ ನಡೆಯುವುದಕ್ಕೆ ಕಾರಣವಾಯಿತು.
ಜಲಸಂಪನ್ಮೂಲ ಇಲಾಖೆ ಬೇಡಿಕೆಯ ಚರ್ಚೆಗೆ ಸಚಿವ ಗೋವಿಂದ ಕಾರಜೋಳ ಅವರು ಉತ್ತರ ನೀಡುವ ಸಂದರ್ಭದಲ್ಲಿ ಶಿವಲಿಂಗೇಗೌಡ ಈ ಪ್ರಶ್ನೆ ಕೇಳಿದರು.
ಇದಕ್ಕೆ ಉತ್ತರ ಕರ್ನಾಟಕ ಭಾಗದ ಶಾಸಕರು ಪಕ್ಷಾತೀತವಾಗಿ ವಿರೋಧ ವ್ಯಕ್ತಪಡಿಸಿದರು. ಬಿಜೆಪಿಯ ಬಸನಗೌಡ ಪಾಟೀಲ್ ಯತ್ನಾಳ್, ಕಾಂಗ್ರೆಸ್ ನ ಶಿವಾನಂದ ಪಾಟೀಲ್ ಏರಿದ ಸ್ವರದಲ್ಲಿ ತರಾಟೆಗೆ ತೆಗೆದುಕೊಂಡಾಗ ಶಿವಲಿಂಗೇಗೌಡರು ಮೌನಕ್ಕೆ ಶರಣಾದರು.
ಇದನ್ನೂ ಓದಿ:ಅಂಕೆ ತಪ್ಪಿದ ಹೇಳಿಕೆ ಸಿದ್ದರಾಮಯ್ಯನವರಿಗೆ ತುಟ್ಟಿಯಾಯ್ತೇ?
“ಗೌಡರೇ ರಾಜ್ಯದ ಒಟ್ಟು ನೀರಾವರಿ ಯೋಜನೆಯ ಶೇ.57 ರಷ್ಟು ಕೃಷ್ಣಾ ಭಾಗ್ಯ ಜಲ ನಿಗಮದ ವ್ಯಾಪ್ತಿಯಲ್ಲಿ ಬರುತ್ತದೆ. ಮೈಸೂರು ಮಹಾರಾಜರು ಕನ್ನಂಬಾಡಿ ಕಟ್ಟಿ ಹೋಗಿದ್ದಕ್ಕೆ ನೀವು ಬದುಕಿದ್ದೀರಿ” ಎಂದು ಟೀಕಿಸಿದರು.
ಆಗ ಮಧ್ಯ ಪ್ರವೇಶ ಮಾಡಿದ ಕಾರಜೋಳ, ಗೌಡರೇ ನಮ್ಮದು ಎಲ್ಲ ಭಾಗವನ್ನೂ ಸಮಾನವಾಗಿ ನೋಡುತ್ತದೆ. ಕೃಷ್ಣಾ ಮೇಲ್ದಂಡೆ ಯೋಜನೆಗೆ ಈ ಬಾರಿ 5000, ಭದ್ರಾ ಮೇಲ್ದಂಡೆಗೆ 3000, ಎತ್ತಿನಹೊಳೆಗೆ 3000, ಮೇಕೆದಾಟು 1000, ಮಹದಾಯಿಗೆ 1000 ಕೋಟಿ ರೂ. ಅನುದಾನ ನೀಡಲಾಗಿದೆ ಎಂದು ಸ್ಪಷ್ಟನೆ ನೀಡಿದರು.
ಆದರೆ ಇದಕ್ಕೆ ಒಪ್ಪದ ಬಸನಗೌಡ ಪಾಟೀಲ್, ಕೃಷ್ಣೆಯ ಕಣ್ಣೀರಿಗೆ ಕೊನೆ ಎಂದು? ಈ ಯೋಜನೆ ಪೂರ್ಣಗೊಳಿಸುವುದಕ್ಕೆ ಎಷ್ಟು ಶತಮಾನ ಬೇಕು? ಪ್ರಧಾನಿ ನರೇಂದ್ರ ಮೋದಿಯವರು ಗುಜರಾತ್ ನಲ್ಲಿ ಮಾಡಿದ ರೀತಿ ಕೃಷ್ಣಾ ಯೋಜನೆ ಅಭಿವೃದ್ಧಿ ಮಾಡಬೇಕು. ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?