ಕೆಲಸಗಳಾಗುತ್ತಿಲ್ಲ: ಸ್ವಪಕ್ಷೀಯರಿಂದಲೇ ಅಸಮಾಧಾನ


Team Udayavani, Jun 20, 2020, 7:40 AM IST

kateel self

ಬೆಂಗಳೂರು: ಬಿಜೆಪಿ ಸರ್ಕಾರವಿದ್ದರೂ ಕ್ಷೇತ್ರಗಳಿಗೆ ಅನುದಾನ ಬಿಡುಗಡೆಯಾಗುತ್ತಿಲ್ಲ , ವರ್ಗಾವಣೆ ಸೇರಿದಂತೆ ಇತರೆ ಕೆಲಸ ಕಾರ್ಯಗಳು ನಡೆಯುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಸ್ವಪಕ್ಷೀಯ ಶಾಸಕರಿಗೆ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರು ಸದ್ಯದಲ್ಲೇ ಸಿಎಂ ಯಡಿಯೂರಪ್ಪ ಅವರೊಂದಿಗೆ ವಿಭಾಗವಾರು ಶಾಸಕರ ಸಭೆ ನಡೆಸಲು ಪ್ರಯತ್ನಿಸುವ ಭರವಸೆ ನೀಡಿ ಸಮಾಧಾನಪಡಿಸಿದ್ದಾರೆ.

ಎಚ್‌.ವಿಶ್ವನಾಥ್‌ ಅಸಮಾಧಾನಹೊರತುಪಡಿಸಿದರೆ ಪರಿಷತ್‌ಗೆ ಬಿಜೆಪಿಯ 4 ಮಂದಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಬಳಿಕ ಗುರುವಾರ ಎಲ್ಲವೂ ಸುಖಾಂತ್ಯವಾಯಿತು ಎಂಬ ವಾತಾವರಣವಿತ್ತು. ಆದರೆ ಸಂಜೆ ಹೊತ್ತಿಗೆ ಅತೃಪ್ತ ಶಾಸಕರು ಕಟೀಲ್‌ ಅವರನ್ನು ಭೇಟಿಯಾಗಿ ಸರ್ಕಾರದಲ್ಲಿ ತಮ್ಮ ಕೆಲಸ ಕಾರ್ಯಗಳು ನಡೆಯುತ್ತಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ. ಶಾಸಕರಾದ ಬಸನಗೌಡ ಪಾಟೀಲ್‌ ಯತ್ನಾಳ್‌, ಅರವಿಂದ ಬೆಲ್ಲದ್‌, ಅನಿಲ್‌ ಬೆನಕೆ, ಅಭಯ್‌ ಪಾಟೀಲ್‌,  ಕರಾವಳಿ ಭಾಗದ ಶಾಸಕರು ಸೇರಿದಂತೆ ಹಲವರು ಕಟೀಲ್‌ ಅವರನ್ನು ಭೇಟಿಯಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಸ್ಪಂದಿಸಿದ ನಳಿನ್‌ ಕುಮಾರ್‌ ಕಟೀಲ್‌, ಈ ರೀತಿಯ ಸಮಸ್ಯೆಗಳಿದ್ದರೆ ಚರ್ಚಿಸಿ ಬಗೆಹರಿಸಲು ಕ್ರಮ  ವಹಿಸಲಾಗುವುದು. ಅಗತ್ಯ ಬಿದ್ದರೆ ಮುಖ್ಯಮಂತ್ರಿಗಳನ್ನು ಪಕ್ಷದ ಕಚೇರಿಗೆ ಕರೆಸಿ ಗೊಂದಲಗಳನ್ನು ಬಗೆಹರಿಸಿಕೊಳ್ಳೋಣ. ಈ ಬಗ್ಗೆ ಬಹಿರಂಗ ಚರ್ಚೆ ಬೇಡ ಎಂದು ಕಿವಿಮಾತು ಹೇಳಿದ್ದಾರೆ ಎಂದು ನಿಯೋಗದಲ್ಲಿದ್ದ ಶಾಸಕರೊಬ್ಬರು ತಿಳಿಸಿದರು. ಸದ್ಯದಲ್ಲೇ  ಮುಖ್ಯಮಂತ್ರಿಗಳ ವತಿಯಿಂದ ಕಂದಾಯ  ವಿಭಾಗವಾರು ಶಾಸಕರ ಸಭೆ ನಡೆಸಲು ಪ್ರಯತ್ನಿಸಲಾಗುವುದು. ಆಗ ಶಾಸಕರು ಮುಕ್ತವಾಗಿ ಸಮಸ್ಯೆಗಳನ್ನು ಹೇಳಿಕೊಳ್ಳಬಹುದು ಎಂದು ತಿಳಿಸಿದ್ದಾರೆ ಎಂದು ಹೇಳಿದರು.

ಅತೃಪ್ತ ಶಾಸಕರ  ನಿಯೋಗದಲ್ಲಿ ಕರಾವಳಿ ಭಾಗದ ಕೆಲ ಶಾಸಕರು ಇದ್ದರು ಎಂಬ ಮಾತುಗಳಿವೆ. ಆದರೆ ಇದನ್ನು ಅಲ್ಲಗಳೆದಿರುವ ಕೆಲ ಶಾಸ  ಕರು, ಪಕ್ಷದ ರಾಜ್ಯಾಧ್ಯಕ್ಷರು ದಕ್ಷಿಣ ಕನ್ನಡ ಜಿಲ್ಲೆಯ ಸಂಸದರೂ ಆಗಿರುವುದರಿಂದ ಪಕ್ಷ ಸಂಘಟನೆ ಹಾಗೂ  ಸ್ಥಳೀಯ ವಿಚಾರಗಳ ಬಗ್ಗೆ ಆಗಾಗೆ ಚರ್ಚೆ ಮಾಡುತ್ತಿರುತ್ತೇವೆ. ಈ ನಡುವೆ ಬೇರೆ ಭಾಗದ ಕೆಲ ಶಾಸಕರು ತಮ್ಮ ಕ್ಷೇತ್ರದ ಸಮಸ್ಯೆಗಳು, ವೈಯಕ್ತಿಕ ವಿಚಾರಗಳನ್ನು ಪ್ರಸ್ತಾಪಿಸಿದರೆ ಅದಕ್ಕೂ ನಮಗೂ ಸಂಬಂಧವಿಲ್ಲ ಎಂದು ತಿಳಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.