ಕಾಂಗ್ರೆಸ್ ತೊರೆಯಲ್ಲ, ಒತ್ತಡಕ್ಕೆ ಮಣಿಯಲ್ಲ: ರಾಜೇಗೌಡ
Team Udayavani, Jul 11, 2019, 3:05 AM IST
ಬೆಳ್ತಂಗಡಿ: “ನಾನು ಯಾವುದೇ ಕಾರಣಕ್ಕೂ ಪಕ್ಷ ಬಿಟ್ಟು ಹೋಗುವುದಿಲ್ಲ. ನನ್ನ ಕ್ಷೇತ್ರದ ಗೌರವ ಉಳಿಸುವ ದೃಷ್ಟಿಯಿಂದ ಆಮಿಷಕ್ಕೆ, ಒತ್ತಡಕ್ಕೆ ಒಳಗಾಗಲಾರೆ’ ಎಂದು ಕಾಂಗ್ರೆಸ್ ಶಾಸಕ ರಾಜೇಗೌಡ ಪ್ರತಿಕ್ರಿಯಿಸಿದ್ದಾರೆ. ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು “ಉದಯವಾಣಿ’ ಜೊತೆ ಮಾತನಾಡಿದರು.
“ನನಗೆ ರಾಜ್ಯದ ಪ್ರಸ್ತುತ ರಾಜಕೀಯ ಬೆಳೆವಣಿಗೆ ಕುರಿತು ಮಾಹಿತಿ ಇರಲಿಲ್ಲ. ಶನಿವಾರ ಕಾರ್ಯಕ್ರಮ ನಿಮಿತ್ತ ಬಂದು ಪ್ರಕೃತಿ ಚಿಕಿತ್ಸೆಗೆ ದಾಖಲಾಗಿದ್ದೆ. ಬಳಿಕ ಇಷ್ಟೊಂದು ಹೈಡ್ರಾಮಾ ನಡೆದಿದೆ. ಬಿ.ಎಸ್.ಯಡಿಯೂರಪ್ಪ ಅವರು ದೂರವಾಣಿ ಮೂಲಕ ನನ್ನನ್ನು ಸಂಪರ್ಕಿಸಿದ್ದು, ನನಗೂ ಒತ್ತಡಗಳು ಬಂದಿದೆ. ಆದರೆ, ಇದಾವುದಕ್ಕೂ ನಾನು ತಲೆಕೆಡಿಸಿಕೊಂಡಿಲ್ಲ. ಅಧಿಕಾರದ ದುರಾಸೆ ನನಗಿಲ್ಲ. ಹಲವರಿಂದ ಆಮಿಷದ ಕರೆಗಳೂ ಬರುತ್ತಿವೆ’ ಎಂದರು.
“ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ನನ್ನನ್ನು ಸಂಪರ್ಕಿಸಿದ್ದು, ಮುಂದಿನ ನಡೆ ಕುರಿತು ವಿಚಾರಿಸಿದ್ದಾರೆ. ಆದರೂ ಯಾವುದೇ ಕಾರಣಕ್ಕೂ ಪಕ್ಷ ಬಿಟ್ಟು ಹೋಗುವುದಿಲ್ಲ. ಪಕ್ಷದ ತತ್ವ-ಸಿದ್ಧಾಂತಗಳಿಗೆ ಬದ್ಧನಾಗಿದ್ದೇನೆ ಎಂದು ತಿಳಿಸಿದ್ದೇನೆ. ಶೃಂಗೇರಿಯಿಂದ ಪ್ರಥಮ ಬಾರಿಗೆ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಪಕ್ಷ ನನಗೆ ಅವಕಾಶ ಕೊಟ್ಟಿದೆ. ಸರಕಾರ ಸಹಕಾರ ನೀಡಿದೆ’ ಎಂದರು.
“ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳಬಹುದಿತ್ತು ಏಕಾಏಕಿ ಸರಕಾರವನ್ನು ಅಸ್ಥಿರಗೊಳಿಸುತ್ತಿರುವ ರಾಜಕೀಯ ನಡೆ ಸರಿಯಲ್ಲ. ಶುಕ್ರವಾರ ಅಧಿವೇಶನವಿದೆ. ಸೋಮವಾರ ತೆರಳಬೇಕೆಂದಿದ್ದೇನೆ. ಶುಕ್ರವಾರ ಬರಲೇಬೇಕು ಎನ್ನುವ ಆದೇಶ ಪಕ್ಷದಿಂದ ಬಂದಲ್ಲಿ ಶುಕ್ರವಾರ ತೆರಳುತ್ತೇನೆ. ಆ ಮೂಲಕ ನಾನು ಕಾಂಗ್ರೆಸ್ ಪಕ್ಷದಲ್ಲೇ ಮುಂದುವರಿವ ದೃಢಸಂಕಲ್ಪ ತೊಟ್ಟಿದ್ದೇನೆ’ ಎಂದು ಸ್ಪಷ್ಟ ಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
MUST WATCH
ಹೊಸ ಸೇರ್ಪಡೆ
Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ