ರಾಜ್ಯಾಧ್ಯಕ್ಷ ಸ್ಥಾನಕ್ಕೆ ‘ರಾಜೀನಾಮೆ ಕೊಟ್ಟಿಲ್ಲ’: ನಳಿನ್ ಕುಮಾರ್ ಸ್ಪಷ್ಟನೆ
Team Udayavani, Jun 24, 2023, 12:49 PM IST
ಬೆಂಗಳೂರು: ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ. ಈ ಕುರಿತಂತೆ ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮಾಧ್ಯಮ ಪ್ರಕಟಣೆಯಲ್ಲಿ ಸ್ಪಷ್ಟ ಪಡಿಸಿದ್ದಾರೆ.
ಬಳ್ಳಾರಿಯಲ್ಲಿ ವಿ. ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷೆಯನ್ನು ಪ್ರಕಟಿಸಿದ ಕುರಿತ ಪ್ರಶ್ನೆಗೆ ಉತ್ತರಿಸುವ ವೇಳೆ ಸೋಲಿನ ನೈತಿಕ ಹೊಣೆ ಹೊರುತ್ತೇನೆ. ಸೋಲಿನ ಕಾರಣಗಳ ಕುರಿತಂತೆ ಪಕ್ಷದ ಹಿರಿಯರಿಗೆ ಮಾಹಿತಿ ನೀಡಿದ್ದೇನೆ. 4 ವರ್ಷಗಳಿಂದ ನಾನು ಅಧ್ಯಕ್ಷ ಸ್ಥಾನದಲ್ಲಿದ್ದೇನೆ ಎಂದು ತಿಳಿಸಿದ್ದಾಗಿ ಅವರು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ:ಕಾರ್ಕಳ ಮಿಯ್ಯಾರು ಬಳಿ ತೆಲಂಗಾಣ ಶಾಸಕ ಪ್ರಯಾಣಿಸುತ್ತಿದ್ದ ಜೀಪು ಡಿಕ್ಕಿ
ಪಕ್ಷದ ರಾಜ್ಯಾಧ್ಯಕ್ಷರ ನೇಮಕ ಕುರಿತಂತೆ ಪಕ್ಷವು ಸೂಕ್ತ ಸಂದರ್ಭದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾಗಿ ನಾನು ಹೇಳಿಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿ ಸುದ್ದಿ ಬಿತ್ತರಿಸಲಾಗುತ್ತಿದೆ ಎಂದು ಹೇಳಿಕೆಯಲ್ಲಿ ವಿವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು