ಹಣ ಕೊಡುವೆ ನಿಲ್ಲಿಸು ಎಂದರೂ ಬೋಟ್ ನಿಲ್ಲಿಸಲಿಲ್ಲ!


Team Udayavani, Jan 23, 2019, 1:10 AM IST

5.jpg

ಕಾರವಾರ: ‘ನಾನು ಹದಿನೈದು ವರ್ಷದಿಂದ ಫಿಶಿಂಗ್‌ ಬೋಟ್‌ನಲ್ಲಿ ಕೆಲಸ ಮಾಡುತ್ತಿದ್ದೇನೆ. ಪರ್ಶಿಯನ್‌ ಬೋಟ್‌ನಲ್ಲಿ ಕೆಲಸ ಮಾಡಿದ ಅನುಭವವಿದೆ. ಸಂಬಂಧಿಕರಾದ ಪರುಶುರಾಮ ಮತ್ತು ಪತ್ನಿ ಭಾರತಿ, ಸಹೋದರನ ಪತ್ನಿ ನಿರ್ಮಿಲಾ ತಮ್ಮ ಮಕ್ಕಳೊಂದಿಗೆ ಆಗಮಿಸಿದ್ದರು. ಎಲ್ಲರೂ ಸೇರಿ ಹತ್ತು ಜನ. ಜೊತೆಗೆ ನಾನು, ನನ್ನ ಪತ್ನಿ ಸೌಭಾಗ್ಯ ಇದ್ದೆವು. ಆದರೆ ನಾನು, ಪತ್ನಿ ಹಾಗೂ ಸಂಬಂಧಿ ಪರುಶುರಾಮ್‌ ಅವರ ಮಗ ಗಣೇಶ್‌ ಬಿಟ್ಟರೆ ಉಳಿದವರ್ಯಾರೂ ಬದುಕಿ ಉಳಿಯಲಿಲ್ಲ’ ಎಂದು ಮೃತ ಪರುಶುರಾಮ ಅವರ ಅತ್ತೆ ಮಗ ಕನಕ್ಕಪ್ಪ ಬಾಳಲಕೊಪ್ಪ ಕಣ್ಣೀರಾದರು.

‘ನನ್ನ ಕಣ್ಣೆದುರೇ ಎಲ್ಲರೂ ತೇಲಿ ಹೋದರು. ಪರುಶುರಾಮ ಅವರ ಪತ್ನಿ ಭಾರತಿ ನೀರಲ್ಲಿ ಮುಳುಗಿ ಮೃತಪಟ್ಟರು. ಏನೂ ಮಾಡಲಾಗದ ಸ್ಥಿತಿಯಲ್ಲಿ ನಾವಿದ್ದೆವು. ಸಮುದ್ರದ ಅಲೆಯ ರಭಸಕ್ಕೆ ನಾವು ಬದುಕಿ ಉಳಿದದ್ದೇ ಹೆಚ್ಚು’ ಎಂದು ಕರಾಳ ಘಟನೆ ವಿವರಿಸಿದರು.

ಹೆಚ್ಚು ಜನರನ್ನು ಹಾಕಿದ್ದೇ ಕಾರಣ: ‘ನಾವು ಕೂರ್ಮಗಡ ನರಸಿಂಹ ದೇವರ ಜಾತ್ರೆಗೆ ಬೈತಖೋಲದಿಂದ ತೆರಳಿದ್ದೆವು. ದೇವರ ದರ್ಶನದ ನಂತರ ಕಾರವಾರಕ್ಕೆ ಮರಳಲು ದೋಣಿಗಾಗಿ ಕಾಯುತ್ತಿದ್ದೆವು. ಸಣ್ಣ ಡಿಂಗಿಯಲ್ಲಿ 15 ಜನ ಹತ್ತಿರುವುದು ಕಂಡ ನನ್ನ ಅತ್ತಿಗೆ ಭಾರತಿ ಅವರು ಸಣ್ಣ ಮಕ್ಕಳಿದ್ದಾರೆ. ಚಿಕ್ಕ ದೋಣಿ ಬೇಡ ಎಂದರು. ಅಷ್ಟರಲ್ಲಿ ಯಾಂತ್ರಿಕೃತ ಬೋಟ್ ಬಂತು. ಅದರಲ್ಲಿ ಸೀಟ್ ಕುಳಿತುಕೊಳ್ಳುವಂತೆ ಇದ್ದ ಕಾರಣ ಕುಟುಂಬದವರೆಲ್ಲಾ ದೇವಭಾಗ ಅಡ್ವೆಂಚರ್‌ ಬೋಟಿಂಗ್‌ ಸೆಂಟರ್‌ ಎಂದು ಬರೆದಿರುವ ಬೋಟ್ ಹತ್ತಿದೆವು. ಅದರಲ್ಲಿ 12ಕ್ಕೂ ಹೆಚ್ಚು ಜನ ಇದ್ದರು. ಆ ಬೋಟ್ ಕೋಡಿಭಾಗ ಧಕ್ಕೆಗೆ ಹೋಗುವುದಿತ್ತು. ನಾವು ಬೈತಖೋಲ್‌ಗೆ ಬರಬೇಕಿತ್ತು.’

‘ನಾನು ಬೋಟ್ ಇಳಿಯುವಂತೆ ಪರುಶುರಾಮ ಮತ್ತು ಭಾರತಿ ಅವರಿಗೆ ಹೇಳಿದೆ. ಆದರೆ ಬೋಟ್ ಚಾಲಕ ಕೆಲವು ಪ್ರಯಾಣಿಕರನ್ನು ಕೋಡಿಭಾಗದಲ್ಲಿ ಇಳಿಸಿ, ಬೈತಖೋಲ್‌ಕ್ಕೆ ಬಿಡುವುದಾಗಿ ಹೇಳಿದ. ಸ್ವಲ್ಪ ದೂರ ಬೋಟ್ ಚಲಿಸಿದ ನಂತರ ಬೈತಖೋಲ್‌ಗೆ ಹೋಗುವ ದೊಡ್ಡ ಬೋಟ್ ಬಂತು. ಆಗ ಹಣ ಕೊಡುವೆ. ಬೋಟ್ ನಿಲ್ಲಿಸಿ, ನಾವು ಬೈತಖೋಲ್‌ಕ್ಕೆ ಹೋಗುವ ಬೋಟ್ ಹತ್ತುವುದಾಗಿ ವಿನಂತಿಸಿದೆ. ಆದರೂ ಬೋಟ್ ಚಾಲಕ ಕೇಳಲಿಲ್ಲ. ನಾನೇ ಬಿಡುತ್ತೇನೆ ಎನ್ನುತ್ತಾ ದೋಣಿಯನ್ನು ವೇಗವಾಗಿ ಚಲಾಯಿಸಿದ. ಸಮುದ್ರದ ಅಲೆ ರಭಸವಿದ್ದ ಕಾರಣ ದೊಡ್ಡ ಅಲೆಗೆ ಸಿಕ್ಕ ಬೋಟ್ ಪಲ್ಟಿಯಾಯಿತು. ಬೋಟ್ ಮೇಲ್ಛಾವಣಿಗೆ ಕಟ್ಟಿದ ರೂಫ್‌ ಭಾರತಿ ಅವರ ತಲೆಗೆ ಬಡಿಯಿತು. ಮಕ್ಕಳು ಸಮುದ್ರದಲ್ಲಿ ಮುಳುಗಿದರು. ಕ್ಷಣಾರ್ಧದಲ್ಲಿ ಎಲ್ಲವೂ ದುರಂತಮಯವಾಯಿತು. ಮಕ್ಕಳನ್ನು ಬದುಕಿಸಲು ಯತ್ನಿಸಿದೆ. ಆದರೆ, ಆಗಲಿಲ್ಲ. ಇನ್ನೊಂದು ಬೋಟ್‌ನವರು ಗಣೇಶ್‌ ಹಾಗೂ ನನ್ನ ಪತ್ನಿ ಸೌಭಾಗ್ಯಳನ್ನು ರಕ್ಷಿಸಿದ್ದರು. ನಾನು ಸಹ ಸೋತು ಹೋಗಿದ್ದೆ. ಬೋಟ್ನಿಂದ ಬೀಸಿದ ಹಗ್ಗ ಹಿಡಿದು ಬದುಕಿಕೊಂಡೆ’ ಎಂದು ಕರಾಳ ಘಟನೆಯನ್ನು ನೆನಪು ಮಾಡಿಕೊಂಡರು.

ನಾಗರಾಜ್‌ ಹರಪನಹಳ್ಳಿ

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.