ಶಾಲಾ-ಕಾಲೇಜು, ಮದರಸಗಳಲ್ಲಿ ಧ್ವಜಾರೋಹಣ ಅಭಿಯಾನಕ್ಕೆ ಸೂಚನೆ
Team Udayavani, Jul 18, 2022, 7:42 PM IST
ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳು, ಪಿಯು ಕಾಲೇಜುಗಳು ಹಾಗೂ ಮದರಸಗಳಲ್ಲಿ ಆ.11ರಿಂದ 17ರ ವರೆಗೆ ರಾಷ್ಟ್ರ ಧ್ವಜಾರೋಹಣ ಅಭಿಯಾನ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಇಲಾಖಾ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ದೇಶ ಸ್ವಾತಂತ್ರ್ಯ ಪಡೆದು 75 ವರ್ಷಗಳು ಕಳೆದಿದ್ದು ದೇಶದ ಭವ್ಯ ಸಂಸ್ಕೃತಿ, ಇತಿಹಾಸ ಮತ್ತು ಸಾಧನೆಗಳ ಸಂಭ್ರಮಾಚರಣೆ ಮಾಡುವ ಉದ್ದೇಶದಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಕೇಂದ್ರ ಸರ್ಕಾರ ಆರಂಭಿಸಿದೆ. ಇದರ ಅಂಗವಾಗಿ “ಪ್ರತಿ ಮನೆಯಲ್ಲೂ ತ್ರಿವರ್ಣಧ್ವಜ’ ಕಾರ್ಯಕ್ರಮವನ್ನು ರೂಪಿಸಿದ್ದು, ಯಶಸ್ವಿಗೊಳಿಸಬೇಕು.
ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ರಾಜ್ಯದ ಎಲ್ಲಾ ಪ್ರಾಥಮಿಕ, ಪ್ರೌಢ ಶಾಲೆಗಳು, ಪದವಿ ಪೂರ್ವ ಕಾಲೇಜುಗಳು ಹಾಗೂ ಮದರಸಗಳಲ್ಲಿ ಧ್ವಜಾರೋಹಣ ಅಭಿಯಾನದ ಜೊತೆಗೆ ರಾಷ್ಟ್ರಭಕ್ತಿ ಮೂಡಿಸುವ ಸ್ವಾತಂತ್ರ್ಯದ ತ್ಯಾಗ, ಬಲಿದಾನ ಸ್ಮರಣೆಯ ಗೀತ ಗಾಯನ, ಕ್ವಿಜ್, ಪ್ರಬಂಧ ಸ್ಪರ್ಧೆ, ಸ್ವಾತಂತ್ರ್ಯ ಹೋರಾಟ, ಸ್ವಾತಂತ್ರ್ಯ ಹೋರಾಟಗಾರರ ಚಿತ್ರಬಿಡಿಸುವ ಸ್ಪರ್ಧೆಗಳನ್ನು ಆಯೋಜಿಸಲು ಸೂಕ್ರ ಕ್ರಮ ಕೈಗೊಳ್ಳಬೇಕು.
ಎಲ್ಲ ಬೋಧಕರು ಹಾಗೂ ಬೋಧಕೇತರ ಸಿಬ್ಬಂದಿ ತಮ್ಮ ಮನೆಗಳ ಮೇಲೆ ಧ್ವಜಾರೋಹಣ ಮಾಡುವಂತೆ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು
Temperature; ರಾಜ್ಯದಲ್ಲಿ ಮತ್ತೆ ದಿಢೀರ್ ಏರಿದ ತಾಪಮಾನ
ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?