ಸಾಂಖ್ಯಿಕ ಅಧಿಕಾರಿಗಳಾಗಿರುವ ಶಿಕ್ಷಕರ ವರ್ಗಾವಣೆಗೆ ಸೂಚನೆ
Team Udayavani, Sep 23, 2022, 6:52 AM IST
ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಾಗಿ ನೇಮಕವಾಗಿ ಹತ್ತಾರು ವರ್ಷಗಳಿಂದ ಇಲಾಖೆ ಕಚೇರಿಗಳಲ್ಲಿ ಬೋಧಕೇತರ ಸಿಬಂದಿಯಾಗಿ ಕಾರ್ಯನಿರ್ವಹಿಸುತ್ತಿರುವ ಸಹಾಯಕ ಸಾಂಖ್ಯಿಕ ಅಧಿಕಾರಿಗಳಿಗೆ ಶಿಕ್ಷಣ ಇಲಾಖೆ ಬಿಸಿ ಮುಟ್ಟಿಸಿದೆ. ಅವರನ್ನು ಕೂಡಲೇ “ಸಿ’ ವಲಯಕ್ಕೆ ವರ್ಗಾಯಿಸಲು ಸೂಚಿಸಿದೆ.
ಡಯಟ್, ಸಿಟಿಇ ಮತ್ತು ಉಪ ನಿರ್ದೇಶಕರ ಕಚೇರಿಗಳಲ್ಲಿ ಸಹಾಯಕ ಸಾಂಖ್ಯಿಕ ಅಧಿಕಾರಿಗಳಾಗಿರುವ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರನ್ನು ಕೂಡಲೇ ವರ್ಗಾಯಿ ಸುವಂತೆ ಇಲಾಖೆ ಆಯುಕ್ತರು ಸಂಬಂಧಪಟ್ಟ ವಿಭಾಗೀಯ ಜಂಟಿ ನಿರ್ದೇಶಕರು ಹಾಗೂ ಉಪ ನಿರ್ದೇಶಕರಿಗೆ ಸೂಚಿಸಿದ್ದಾರೆ.
ಸಹಾಯಕ ಸಾಂಖ್ಯಿಕ ಅಧಿಕಾರಿ ಹುದ್ದೆಯು ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಗೆ ಸಂಬಂಧಿಸಿದ್ದಾಗಿವೆ. ಈ ಹುದ್ದೆಗಳಲ್ಲಿ ತಜ್ಞ ಸಿಬಂದಿ ಕಾರ್ಯನಿರ್ವಹಿಸಬೇಕಾಗಿದ್ದು, ಶಿಕ್ಷಕರು ಕಾರ್ಯನಿರ್ವಹಿಸುತ್ತಿರುವುದು ಸರಿಯಲ್ಲ. ಇಲ್ಲಿರುವ ಶಿಕ್ಷಕರು ಈಗಾಗಲೇ “ಸಿ’ ವಲಯದಲ್ಲಿ 10 ಸೇವೆ ಸಲ್ಲಿಸಿದ್ದಲ್ಲಿ ಎ, ಬಿ, ಸಿ ವಲಯದ ಯಾವುದಾದರೂ ಶಾಲೆಗೆ ಅವರ ಇಚ್ಛೆಗೆ ಅನುಸಾರವಾಗಿ ನಿಯುಕ್ತಿಗೊಳಿಸಬೇಕು. ಈ ಸಂಬಂಧ ಕೈಗೊಂಡ ಕ್ರಮದ ಬಗ್ಗೆ 3 ದಿನಗಳೊಳಗೆ ವರದಿ ಸಲ್ಲಿಸಬೇಕು ಎಂದು ಎಲ್ಲ ಜಿಲ್ಲಾ ಉಪ ನಿರ್ದೇಶಕರಿಗೆ ಸೂಚಿಸಲಾಗಿದೆ. ಒಂದು ವೇಳೆ ವರದಿ ನೀಡದಿದ್ದರೆ ಸಂಬಂಧಪಟ್ಟ ಉಪ ನಿರ್ದೇಶಕರ ವಿರುದ್ಧವೇ ಶಿಸ್ತುಕ್ರಮ ಜರಗಿಸಲು ಶಿಫಾರಸು ಮಾಡಲಾಗುತ್ತದೆ ಎಂಬ ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ