ಪ್ರಾಥಮಿಕ ಶಿಕ್ಷಣ ಮುಗಿಯುವರೆಗೂ ಮುಂದುವರಿಸಲು ಸೂಚನೆ
Team Udayavani, Apr 24, 2019, 3:23 AM IST
ಬೆಂಗಳೂರು: ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆ 2009ರ ಅಡಿಯಲ್ಲಿ ಪ್ರವೇಶ ಪಡೆದಿರುವ ಮಕ್ಕಳನ್ನು ಎಲಿಮೆಂಟರಿ ಶಿಕ್ಷಣ ಮುಗಿಸುವವರೆಗೂ ಅದೇ ಶಾಲೆಯಲ್ಲಿ ಮುಂದುವರಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸಿಬಿಎಸಿ ಹಾಗೂ ಐಸಿಎಸಿ ಪಠ್ಯ ಕ್ರಮ ಬೋಧಿಸುತ್ತಿರುವ ಕೆಲವು ಖಾಸಗಿ ಅನುದಾನ ರಹಿತ ಶಾಲೆಗಳು ವಿವಿಧ ಕಾರಣ ನೀಡಿ, ಉಚಿತ ಶಿಕ್ಷಣ ಕಾಯಿದೆ ಅಡಿ ಪ್ರವೇಶ ಪಡೆದ ವಿದ್ಯಾರ್ಥಿಗಳು ಎಲಿಮೆಂಟರಿ (ಪ್ರಾಥಮಿಕ) ಶಿಕ್ಷಣ ಪೂರೈಸುವ ಮುನ್ನವೇ ವರ್ಗಾವಣೆ ಪ್ರಮಾಣ ಪತ್ರ ನೀಡಿ ಹೊರ ಹಾಕುತ್ತಿರುವ ಬಗ್ಗೆ ಪೊಷಕರು ಸರ್ಕಾರಕ್ಕೆ ದೂರು ನೀಡಿದ ಹಿನ್ನೆಲೆಯಲ್ಲಿ ಸರ್ಕಾರ ಈ ಆದೇಶ ಹೊರಡಿಸಿದೆ.
ಕೇಂದ್ರ ಸರ್ಕಾರ 2009ರ ಕಡ್ಡಾಯ ಹಾಗೂ ಉಚಿತ ಕಾಯ್ದೆಗೆ 2019ರ ಜನವರಿಯಲ್ಲಿ ತಿದ್ದುಪಡಿ ಮಾಡಿದ್ದು, ಸೆಕ್ಷನ್ 16(4) ತಿದ್ದುಪಡಿ ಅನ್ವಯ ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆಯನ್ವಯ ದಾಖಲಾದ ಮಕ್ಕಳನ್ನು ಪ್ರಾಥಮಿಕ ಶಿಕ್ಷಣ ಪೂರೈಸುವವರೆಗೂ ಹೊರ ಹಾಕಲು ಅವಕಾಶ ಇರುವುದಿಲ್ಲ ಎಂದು ಸರ್ಕಾರದ ಜ್ಞಾಪನಾ ಪತ್ರದಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ