ಶೂನ್ಯ ಫ‌ಲಿತಾಂಶದ ಪಿಯು ಕಾಲೇಜುಗಳಿಗೆ ನೋಟಿಸ್‌


Team Udayavani, Jul 16, 2017, 3:50 AM IST

pu.jpg

ಬೆಂಗಳೂರು: ದ್ವಿತೀಯ ಪಿಯುಸಿಯಲ್ಲಿ ಶೂನ್ಯ ಫ‌ಲಿತಾಂಶ ದಾಖಲಿಸಿರುವ ಕಾಲೇಜುಗಳಿಗೆ ನೋಟಿಸ್‌ ಜಾರಿ ಮಾಡಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ, ವಾರದೊಳಗೆ ಉತ್ತರ ನೀಡುವಂತೆ ಗಡುವು ನೀಡಿದೆ. ಜತೆಗೆ ಕಳಪೆ
ಸಾಧನೆ ಮಾಡಿದ ಕಾಲೇಜುಗಳ ಮಾನ್ಯತೆ ರದ್ದುಪಡಿಸುವ ಎಚ್ಚರಿಕೆ ನೀಡಿದೆ.

ರಾಜ್ಯದ 127 ಖಾಸಗಿ, 3 ಸರ್ಕಾರಿ ಹಾಗೂ ತಲಾ ಒಂದೊಂದು ಅನುದಾನಿತ ಹಾಗೂ ಸಂಯುಕ್ತ ಪದವಿ ಪೂರ್ವ ಕಾಲೇಜು ಸೇರಿದಂತೆ 132 ಪಿಯು ಕಾಲೇಜುಗಳು 2017ರ ದ್ವಿತೀಯ ಪಿಯುಸಿ ಫ‌ಲಿತಾಂಶದಲ್ಲಿ ಶೂನ್ಯ ಸಾಧನೆ ಮಾಡಿದೆ. ಬೆಂಗಳೂರಿನ ಒಂದು ಸಂಯುಕ್ತ ಪದವಿ ಪೂರ್ವ ಕಾಲೇಜು ಸೇರಿ 12, ಕಲಬುರಗಿಯ 25, ವಿಜಯಪುರದ
21, ಬೆಳಗಾವಿಯ 13, ಬೀದರ್‌ನ 10, ದಾವಣಗೆರೆಯ 6, ಬಳ್ಳಾರಿ ಹಾಗೂ ಬಾಗಲಕೋಟೆಯಲ್ಲಿ ತಲಾ 5, ಹಾವೇರಿ,
ಧಾರವಾಡ, ಮೈಸೂರು, ರಾಯಚೂರಿನಲ್ಲಿ ತಲಾ 4, ಗದಗ ಹಾಗೂ ತುಮಕೂರಿನಲ್ಲಿ ತಲಾ 3, ಚಿತ್ರದುರ್ಗ, ಕೊಪ್ಪಳ ಹಾಗೂ ಯಾದಗಿರಿಯಲ್ಲಿ ತಲಾ 2, ಚಿಕ್ಕಬಳ್ಳಾಪುರ, ಮಂಡ್ಯ, ರಾಮನಗರ, ಮಂಗಳೂರು, ಶಿವಮೊಗ್ಗ, ಕೊಡಗು ಹಾಗೂ ಕೋಲಾರದಲ್ಲಿ ತಲಾ 1 ಪಿಯು ಕಾಲೇಜುಗಳು ಶೂನ್ಯ ಫ‌ಲಿತಾಂಶ ಪಡೆದಿದೆ.

ಖಾಸಗಿ ವಿದ್ಯಾರ್ಥಿಗಳಿಗೆ ಕುಮ್ಮಕ್ಕು: ಕಲಬುರಗಿಯಲ್ಲಿ 25 ಹಾಗೂ ವಿಜಯಪುರ ಜಿಲ್ಲೆಯಲ್ಲಿ 21 ಕಾಲೇಜುಗಳು ಶೂನ್ಯ ಫ‌ಲಿತಾಂಶ ಪಡೆದಿವೆ. ಖಾಸಗಿ ಕಾಲೇಜಿನ ಹೆಸರಿನಲ್ಲಿ ಖಾಸಗಿ ವಿದ್ಯಾರ್ಥಿಗಳನ್ನು ದಾಖಲಿಸಿಕೊಂಡು, ದ್ವಿತೀಯ
ಪಿಯುಸಿ ಪರೀಕ್ಷೆಗೆ ಅವಕಾಶ ನೀಡುತ್ತಿರುವುದು ಶೂನ್ಯ ಫ‌ಲಿತಾಂಶಕ್ಕೆ ಕಾರಣ. ಪಿಯುಸಿ ಪಾಸು ಮಾಡಲು ವಿದ್ಯಾರ್ಥಿಗಳಿಗೆ ತರಬೇತಿ ನೀಡುವುದಿಲ್ಲ ಮತ್ತು ಕಾಲೇಜಿಗೆ ಕಡ್ಡಾಯವಾಗಿ ಬರಬೇಕು ಎಂಬ ನಿಯಮವೂ ಇಲ್ಲ.
ಆದರೆ, ಇಲಾಖೆಯ ದಾಖಲೆಗಾಗಿ ವಿದ್ಯಾರ್ಥಿ ಗಳ ಶೇ.75 ಹಾಜರಾತಿ ತೋರಿಸಲಾಗುತ್ತದೆ.

ಅರ್ಹ ಉಪನ್ಯಾಸಕರು, ಸಮರ್ಥ ಆಡಳಿತ ಮಂಡಳಿ ಇರುವುದಿಲ್ಲ. ಹಣ ವಸೂಲಿ ಮಾಡುವುದಕ್ಕಾಗಿಯೇ ಇಂಥ ಕಾಲೇಜುಗಳು ತಲೆ ಎತ್ತಿರುತ್ತವೆ. ಪಾಲಕರು ಅಥವಾ ಪೋಷಕರು ಇಂತಹ ಕಾಲೇಜುಗಳಿಗೆ ಮಕ್ಕಳನ್ನು ಸೇರಿಸುವಾಗ ಎಚ್ಚರ ವಹಿಸಬೇಕು ಎಂಬ ಕಾರಣಕ್ಕಾಗಿ ಶೂನ್ಯ ಫ‌ಲಿತಾಂಶದ ಕಾಲೇಜುಗಳ ಹೆಸರನ್ನು ಬಹಿರಂಗಪಡಿಸಲಾಗಿದೆ ಎಂದು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು “ಉದಯವಾಣಿ’ಗೆ ಮಾಹಿತಿ ನೀಡಿದರು.

ಕಾರಣ ಕೇಳಿ ನೋಟಿಸ್‌: ಶೂನ್ಯ ಫ‌ಲಿತಾಂಶ ಬಂದಿರುವ ಎಲ್ಲಾ ಕಾಲೇಜುಗಳಿಗೂ ಕಾರಣ ಕೇಳಿ ಪಿಯು ಇಲಾಖೆಯಿಂದ ನೋಟಿಸ್‌ ಜಾರಿ ಮಾಡಿದ್ದು, ಉತ್ತರ ನೀಡಲು ಒಂದು ವಾರ ಸಮಯ ನೀಡಲಾಗಿದೆ. ಉತ್ತರ ನೀಡದ ಕಾಲೇಜುಗಳ ಶೈಕ್ಷಣಿಕ ನವೀಕರಣ ರದ್ದು ಮಾಡಲಾಗುತ್ತದೆ. ಈ ಶೈಕ್ಷಣಕ ವರ್ಷದಿಂದ ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳದಂತೆ
ಎಚ್ಚರಿಕೆಯನ್ನು ನೀಡಲಾಗುತ್ತದೆ. ಶಿಕ್ಷಣ ಸಂಸ್ಥೆಯ ಹೆಸರಿನಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಡುವ ಚೆಲ್ಲಾಟಕ್ಕೆ ಸಂಪೂರ್ಣವಾಗಿ ತೆರೆ ಬೀಳಲಿದೆ.

ಟಾಪ್ ನ್ಯೂಸ್

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.