ಉಮೇಶ್ ಜಾಧವ್ಗೆ ನೋಟಿಸ್ ಜಾರಿ ಮಾರ್ಚ್ 12 ರಂದು ವಿಚಾರಣೆ
Team Udayavani, Mar 9, 2019, 2:12 AM IST
ಬೆಂಗಳೂರು: ಕಾಂಗ್ರೆಸ್ ಶಾಸಕತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ ಉಮೇಶ್ ಜಾಧವ್ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ಮಾರ್ಚ್ 12 ರಂದು 12 ಗಂಟೆಗೆ ವಿಚಾರಣೆಯಿದೆ ಎಂದು ಸ್ಪೀಕರ್ ರಮೇಶ್ಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, “ಉಮೇಶ್ ಜಾಧವ್ ಅವರು ಮಾರ್ಚ್ 4 ರಂದು ನನ್ನ ಹಳ್ಳಿಗೆ ಬಂದು ರಾಜೀನಾಮೆ ನೀಡಿದ್ದರು. ಆವತ್ತು ಶಿವರಾತ್ರಿ ರಜೆ ಇತ್ತು. ಅವರಿಗೆ ಕೆಲವು ವಿವರಣೆ ಕೇಳಿ ಈಗ ಪತ್ರ ಬರೆದಿದ್ದೇನೆ. ವಿಪ್ ಉಲ್ಲಂಘನೆಯದು ಬೇರೆ ವಿಚಾರ. ಉಮೇಶ್ ಜಾಧವ್ ಸೇರಿ ನಾಲ್ವರು ಕಾಂಗ್ರೆಸ್ ಶಾಸಕರ ವಿರುದಟಛಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರು ದೂರು ನೀಡಿದ್ದರು. ಆ ದೂರಿನ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದೆ. ಈ ಪ್ರಕರಣದಲ್ಲಿ ಕಾನೂನು ಹೇಗೆ ಹೇಳುತ್ತೋ ಹಾಗೆ ಮಾಡುತ್ತೇವೆ. ರೂಲ್ಸ್ಬುಕ್ ಪ್ರಕಾರ ನಡೆಯುತ್ತೇವೆ. ನಾಲ್ವರಿಗೂ ನೋಟಿಸ್ ನೀಡಿದ್ದೇವೆ. ಅವರು ಸಮಜಾಯಿಷಿ ನೀಡುತ್ತಿದ್ದಾರೆ. ಒಬ್ಬರು ರಾಜೀನಾಮೆ ನೀಡಿದ್ದಾರೆ. ಯಾರೇ ರಾಜೀನಾಮೆ ಕೊಟ್ಟರೂ ಸ್ವೀಕರಿಸುತ್ತೇನೆ ಎಂದಿದ್ದೆ. ಆದರೆ, ಹಾಗೆಯೇ ಅಂಗೀಕರಿಸಲಾಗುವುದಿಲ್ಲ. ಸ್ವೀಕಾರ
ಮಾಡುವುದು ಬೇರೆ, ಅಂಗೀಕರಿಸುವುದು ಬೇರೆ’ ಎಂದು ತಿಳಿಸಿದರು.
ನನಗೆ ಸಂಬಂಧಪಟ್ಟಿದ್ದಲ್ಲ: ಆಪರೇಷನ್ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ರಚನೆ ವಿಳಂಬವಾಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, “ಆ ಬಗ್ಗೆ ಯಾರು ತಲೆಕೆಡಿಸಿಕೊಂಡರೂ, ಕೆಡಿಸಿಕೊಳ್ಳದಿದ್ದರೂ ನನಗೆ
ಸಂಬಂಧಪಟ್ಟಿದ್ದಲ್ಲ. ನಾನು ಪೀಠದಿಂದ ಒಂದು ಸಲಹೆ ಕೊಟ್ಟಿದ್ದೇನೆ. ಆ ಕುರಿತಂತೆ ಅವರಿಗೆ ಇಂದು ಮತ್ತೆ ಪತ್ರ
ಬರೆಯುತ್ತೇನೆ. ಎಸ್ಐಟಿ ರಚಿಸಬಾರದು ಎಂದೇನೂ ಇಲ್ಲ. ಚುನಾವಣೆ ಇರುವುದರಿಂದ ಸರ್ಕಾರವೂ ಬ್ಯುಸಿ
ಇರಬಹುದು’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ