ಹೋಟೆಲ್ನಲ್ಲಿ ಹಣ ಸಿಕ್ಕ ಪ್ರಕರಣ: ನಾರಾಯಣಗೌಡಗೆ ನೋಟಿಸ್?
Team Udayavani, Mar 17, 2019, 12:30 AM IST
ಬೆಂಗಳೂರು/ಹಾವೇರಿ: ಇಲ್ಲಿನ ಹೋಟೆಲ್ವೊಂದರಲ್ಲಿ ಸಿಕ್ಕ ಕೋಟ್ಯಂತರ ರೂ.ಗಳ ಮೂಲ ಯಾವುದು ಎಂಬ ಮಾಹಿತಿ ನೀಡುವಂತೆ ಗ್ರಾಮೀಣಾಭಿವೃದ್ಧಿ ಇಲಾಖೆಯ ಪ್ರಥಮ ದರ್ಜೆ ಲೆಕ್ಕ ಸಹಾಯಕ ನಾರಾಯಣಗೌಡ ಬಿ.ಪಾಟೀಲ್ಗೆ ನೋಟಿಸ್ ನೀಡಲು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ಸೋಮವಾರವೇ ಈ ನೋಟಿಸ್ ಜಾರಿಯಾಗುವ ಸಾಧ್ಯತೆ ಇದೆ ಎಂದು ಐಟಿ ಇಲಾಖೆ ಮೂಲಗಳು ಹೇಳಿವೆ.
ಈ ಬೆಳವಣಿಗೆಯ ಮಧ್ಯೆ ನಗರದ ಉದ್ಯಮಿಯೊಬ್ಬರು, ನಾರಾಯಣಗೌಡ ಬಳಿ ಪತ್ತೆಯಾಗಿರುವ ಹಣ ತಮ್ಮದೇ ಎಂದು ಐಟಿ ಅಧಿಕಾರಿಗಳ ಮುಂದೆ ಹೇಳಿದ್ದಾರೆ. ಇದಕ್ಕೆ ಸಂಬಂಧಿಸಿದ ದಾಖಲೆಗಳನ್ನೂ ನೀಡುತ್ತೇವೆ ಎಂದೂ ಹೇಳಿದ್ದಾರೆ ಎನ್ನಲಾಗಿದೆ. ಆದರೆ, ಇದನ್ನು ಐಟಿ ಅಧಿಕಾರಿಗಳು ನಿರಾಕರಿಸಿದ್ದಾರೆ. ಶುಕ್ರವಾರವಷ್ಟೇ ನಾರಾಯಣಗೌಡ ತಂಗಿದ್ದ ನಗರದ ಖಾಸಗಿ ಹೋಟೆಲ್ನ ಕೊಠಡಿ ಮೇಲೆ ದಾಳಿ ನಡೆಸಿದ್ದ ಐಟಿ ಅಧಿಕಾರಿಗಳು, 1.75 ಕೋಟಿ ರೂ.ಗೂ ಅಧಿಕ ಹಣ ವಶಕ್ಕೆ ತೆಗೆದುಕೊಂಡಿದ್ದರು.
ನಾರಾಯಣಗೌಡ ಅಮಾನತು
ಐಟಿ ದಾಳಿಗೆ ಒಳಗಾಗಿರುವ ನಾರಾಯಣಗೌಡ ಪಾಟೀಲ್ ರನ್ನು ಅಮಾನತು ಮಾಡಿ ಹಾವೇರಿ ಜಿಲ್ಲಾ ಪಂಚಾಯತ್ ಸಿಇಒ ಕೆ. ಲೀಲಾವತಿ ಆದೇಶ ಹೊರಡಿಸಿದ್ದಾರೆ. ಆದರೆ, ಅನಧಿಕೃತವಾಗಿ ಗೈರು ಹಾಜರಾಗಿರುವ ಕಾರಣದಿಂದಾಗಿ ಈ ಶಿಸ್ತು ಕ್ರಮ ತೆಗದುಕೊಳ್ಳಲಾಗಿದೆ. ಕಳೆದ ಎಂಟು ದಿನಗಳಿಂದ ಕಚೇರಿಗೆ ಗೈರು ಹಾಜರಾಗಿರುವ ಕುರಿತು ಪಾಟೀಲಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿತ್ತು. ಆದರೆ, ಅದಕ್ಕೆ ಉತ್ತರಿಸದ ಹಿನ್ನೆಲೆಯಲ್ಲಿ ಶಿಸ್ತು ಕ್ರಮ ಕೈಗೊಳ್ಳುವಂತೆ ವರದಿ ಸಲ್ಲಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK