ಈಶ್ವರಪ್ಪ ಮಾಜಿ ಸಲಹೆಗಾರ ವಿನಯ್ ಅಪಹರಣ ಯತ್ನ: ಸೆರೆ
Team Udayavani, Apr 1, 2022, 6:30 AM IST
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಮಾಜಿ ಮಾಧ್ಯಮ ಸಲಹೆಗಾರ ಎನ್.ಎಸ್.ವಿನಯ್ ಅಪಹರಣ ಯತ್ನ ಪ್ರಕರಣದಲ್ಲಿ ಕೋರ್ಟ್ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ರೌಡಿಶೀಟರ್ ಎಲೆಕ್ಟ್ರಾನಿಕ್ ಸಿಟಿ ಠಾಣೆ ರೌಡಿಶೀಟರ್ ಅಯ್ಯಪ್ಪ (35) ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
2017ರಲ್ಲಿ ಮಹಾಲಕ್ಷ್ಮೀಲೇಔಟ್ ಠಾಣೆ ವ್ಯಾಪ್ತಿಯಲ್ಲಿ ಈಶ್ವರಪ್ಪ ಆಪ್ತ ಸಹಾಯಕರಾಗಿದ್ದ ವಿನಯ್ ಕಾರಿನಲ್ಲಿ ಹೋಗುವಾಗ ಮತ್ತೂಂದು ಕಾರಿನಲ್ಲಿ ಬಂದಿದ್ದ ಐದಾರು ಮಂದಿ ಆರೋಪಿಗಳು, ವಿನಯ್ ಕಾರಿಗೆ ಡಿಕ್ಕಿ ಹೊಡೆದು ನಿಲ್ಲಿಸಿದ್ದರು. ಬಳಿಕ ಕಾರಿಗೆ ಏನಾಗಿದೆ ಎಂದು ನೋಡುವಾಗ ಕಾರಿನಲ್ಲಿ ಅಪಹರಣಕ್ಕೆ ಯತ್ನಿಸಿದ್ದರು. ಆದರೆ, ವಿನಯ್ ಪ್ರತಿರೋಧ ವ್ಯಕ್ತಪಡಿಸಿ, ಆರೋಪಿಗಳನ್ನು ಪಕ್ಕಕ್ಕೆ ತಳ್ಳಿ ಓಡಿದ್ದರು. ಸಾರ್ವಜನಿಕರು ಹೆಚ್ಚಾಗುತ್ತಿದ್ದಂತೆ ಆರೋಪಿಗಳು ಪರಾರಿಯಾಗಿದ್ದರು. ಈ ಪ್ರಕರಣದಲ್ಲಿ ರೌಡಿಶೀಟರ್ ಪ್ರಶಾಂತ್ ಸೇರಿ ಆರು ಮಂದಿಯನ್ನು ಯಶವಂತರ ಉಪವಿಭಾಗದ ಅಂದಿನ ಎಸಿಬಿ ಬಡಿಗೇರ್ ನೇತೃತ್ವದ ತಂಡ ಬಂಧಿಸಿತ್ತು. ನಂತರ ಆರೋಪಿಗಳು ಜಾಮೀನು ಪಡೆದುಕೊಂಡು ಹೊರಬಂದಿದ್ದರು.
ಈ ವೇಳೆ ಅಯ್ಯಪ್ಪ ಹಾಗೂ ಇತರರಿಗೆ ನಿರಂತರವಾಗಿ ಕೋರ್ಟ್ಗೆ ಹಾಜರಾಗುವಂತೆ ಸೂಚಿಸಿತ್ತು. ಆದರೆ, ಅಯ್ಯಪ್ಪ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈತನ ವಿರುದ್ಧ ಕೋರ್ಟ್ ವಾರೆಂಟ್ ಜಾರಿಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಆರೋಪಿ ಆರೋಪಿಯನ್ನು ಬಂಧಿಸಿದ್ದು, ತನಿಖೆ ಮುಂದುವರಿಸಿದ್ದಾರೆ.
ವಿನಯ್ ಅಪಹರಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಪ್ತ ಎನ್.ಆರ್.ಸಂತೋಷ್ ಕಾರಣ ಎಂದು ಹೇಳಲಾಗಿತ್ತು. ಸಂತೋಷ್ ಮತ್ತು ವಿನಯ್ ನಡುವೆ ಸಿಡಿಯೊಂದರ ವಿಚಾರಕ್ಕೆ ಜಗಳವಾಗಿತ್ತು. ಈ ಹಿನ್ನೆಲೆಯಲ್ಲಿ ಕೃತ್ಯ ನಡೆದಿದೆ ಎಂದು ಹೇಳಲಾಗಿತ್ತು. ಈ ಮಧ್ಯೆ ಈಶ್ವರಪ್ಪ ಅವರು ವಿನಯ್ಗೂ ತಮಗೂ ಯಾವುದೇ ಸಂಬಂಧವಿಲ್ಲ. ಆತ ತನ್ನ ಆಪ್ತ ಅಲ್ಲ ಎಂದು ಸ್ಪಷ್ಟಪಡಿಸಿದ್ದರು.
ದರೋಡೆಗೆ ಯತ್ನ-ರೌಡಿಶೀಟರ್ ಬಂಧನ :
ಮತ್ತೂಂದು ಪ್ರಕರಣದಲ್ಲಿ ಒಂಟಿಯಾಗಿ ಓಡಾಡುವ ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ದರೋಡೆಗೆ ಸಂಚು ರೂಪಿಸಿದ್ದ ರೌಡಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಜೀವನ್ ಭೀಮಾನಗರ ನಿಲಾಸಿ ಸುರೇಶ್ ಅಲಿಯಾಸ್ ಸೂರಿ (34) ಬಂಧಿತ. ಆರೋಪಿ ಜೆ.ಬಿ.ನಗರ ಠಾಣೆ ವ್ಯಾಪ್ತಿಯ ಎನ್ಜಿಬಿಆರ್ ಆರ್ಡೆಡ್ ಬಿಲ್ಡಿಂಗ್ ರಸ್ತೆಯಲ್ಲಿ ಮಾರಕಾಸ್ತ್ರಗಳನ್ನು ಇಟ್ಟುಕೊಂಡು ಸಾರ್ವಜನಿಕರ ದರೋಡೆಗೆ ಸಿದ್ದತೆ ನಡೆಸಿದ್ದ. ಈ ಮಾಹಿತಿ ಮೇರೆಗೆ ದಾಳಿ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ. ಈತನ ವಿರುದ್ಧ ಜೀವನ್ ಭೀಮಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ತನಿಖೆ ಮುಂದುವರಿದಿದೆ ಎಂದು ಸಿಸಿಬಿ ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
MUST WATCH
ಹೊಸ ಸೇರ್ಪಡೆ
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ