ಸಚಿವ ಡಾ.ಕೆ.ಸಿ ನಾರಾಯಣ ಗೌಡ ಅವರಿಂದ ಎನ್ಎಸ್ಎಸ್ ರಾಜ್ಯ ಪ್ರಶಸ್ತಿ ಪ್ರದಾನ
Team Udayavani, Oct 12, 2021, 3:39 PM IST
ಬೆಂಗಳೂರು: ಇಂದು ಯವನಿಕದಲ್ಲಿ ನಡೆದ ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ 2017-18, 2018-19, 2019-20 ನೇ ಸಾಲಿನ ಎನ್ಎಸ್ಎಸ್ ರಾಜ್ಯ ಪ್ರಶಸ್ತಿಯನ್ನು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವರಾದ ಡಾ. ಕೆಸಿ ನಾರಾಯಣ ಗೌಡ ಅವರು ಪ್ರದಾನ ಮಾಡಿದರು.
ಎನ್ಎಸ್ಎಸ್ ಚಟುವಟಿಕೆಗಳಲ್ಲಿ ಉತ್ತಮ ಸಾಧನೆ ಮಾಡಿದ 36 ಕಾಲೇಜುಗಳು, 36 ಕಾರ್ಯಕ್ರಮ ಅಧಿಕಾರಿಗಳು ಹಾಗೂ 36 ಸ್ವಯಸೇವಕರಿಗೆ ಎನ್ಎಸ್ ಎಸ್ ರಾಜ್ಯ ಪ್ರಶಸ್ತಿಯನ್ನು ಸಚಿವ ನಾರಾಯಣ ಗೌಡ ಅವರು ವಿತರಿಸಿದರು.
ಇದೆ ವೇಳೆ ಎನ್ಎಸ್ಎಸ್ ಸ್ವಯಂ ಸೇವಕರ ನೋಂದಣಿ ಜಾಲತಾಣ(ವೆಬ್ ಸೈಟ್), ಯುವ ಸಹಾಯವಾಣಿ ಕೇಂದ್ರವನ್ನು ಸಚಿವ ನಾರಾಯಣ ಗೌಡ ಮತ್ತು ಉನ್ನತ ಶಿಕ್ಷಣ ಸಚಿವರಾದ ಡಾ.ಸಿ ಎನ್ ಅಶ್ವಥ್ ನಾರಾಯಣ ಅವರು ಲೋಕಾರ್ಪಣೆಗೊಳಿಸಿದರು.
ಎನ್ಎಸ್ಎಸ್ ರಾಜ್ಯ ಪ್ರಶಸ್ತಿಯನ್ನು ಪ್ರದಾನ ಮಾಡುತ್ತಿರುವುದು ಸಂತೋಷದ ವಿಷಯವಾಗಿದೆ. ಈ ಪ್ರಶಸ್ತಿಗೆ ಭಾಜನರಾಗಿರುವವರು ಸೇವಾ ಮನೋಭಾವದಿಂದ ಕೆಲಸ ಮಾಡುತ್ತಿರುವವರು. ಎನ್ಎಸ್ಎಸ್ ಸ್ವಯಂ ಸೇವಕರಿಗೆ ಇವರೆಲ್ಲಾ ಪ್ರೇರಣೆ ಆಗಬೇಕು. ಸ್ವಯಂ ಸೇವಕರ ನೋಂದಣಿಗೆ ವೆಬ್ಸೈಟ್ನಲ್ಲಿ ಅವಕಾಶ ಕಲ್ಪಿಸಲಾಗಿದ್ದು, ಯುವಜನತೆ ಇದರ ಸದುಪಯೋಗ ಪಡೆಯಬೇಕು. ಯುವ ಸ್ಪಂದನೆಗಾಗಿ ಮೊಟ್ಟಮೊದಲ ಬಾರಿಗೆ ಸಹಾಯವಾಣಿ ಕೇಂದ್ರ ತೆಗೆಯಲಾಗಿದ್ದು, ಯುವ ಜನತೆ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಚಿವ ನಾರಾಯಣ ಗೌಡ ಅವರು ಕರೆ ನೀಡಿದರು.
ನಿಮ್ಹಾನ್ಸ್ ಮೂಲಕ ಎನ್ಎಸ್ಎಸ್ ಸ್ವಯಂ ಸೇವಕರರಿಗೆ ಕೌನ್ಸೆಲಿಂಗ್ ತರಬೇತಿ ನೀಡಲಾಗುತ್ತಿದೆ. ಇದುವರೆಗೆ 2,31,000 ಯುವ ಜನರಿಗೆ ಆನ್ಲೈನ್ ಕೌನ್ಸೆಲಿಂಗ್ ತರಬೇತಿ ನೀಡಲಾಗಿದೆ. ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಎನ್ಎಸ್ಎಸ್ ಚಟುವಟಿಕೆ ಕಡ್ಡಾಯಗೊಳಿಸಲು ತೀರ್ಮಾನಿಸಿದ್ದು, ನಿಟ್ಟಿನಲ್ಲಿ ಪ್ರಕ್ರಿಯೆಗಳು ಸಾಗಿವೆ ಎಂದರು.
ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಎನ್ಎಸ್ಎಸ್ ಸಹಯೋಗದೊಂದಿಗೆ ಹಲವು ಕಾರ್ಯಕ್ರಮಗಳನ್ನ ಹಮ್ಮಿಕೊಳ್ಳಲಾಗಿದೆ. ಸ್ವಚ್ಛ ಭಾರತ್ ಕಾರ್ಯಕ್ರಮದ ಅಡಿಯಲ್ಲಿ ಇದುವರೆಗೂ 1 ಲಕ್ಷ ಟನ್ ತ್ಯಾಜ್ಯ ಸಂಗ್ರಹಿಸಲಾಗಿದ್ದು, ಅಕ್ಟೋಬರ್ 1 ರಿಂದ 31ರವರೆಗೆ 75 ಲಕ್ಷ ಟನ್ ತ್ಯಾಜ್ಯ ಸಂಗ್ರಹಿಸಿ, ಸಮರ್ಪಕ ನಿರ್ವಹಣೆ ಮಾಡುವ ಗುರಿ ಹೊಂದಲಾಗಿದೆ ಎಂದರು.
ಸನ್ಮಾನ್ಯ ಮುಖ್ಯಮಂತ್ರಿಗಳು ಘೋಷಿಸಿದ ಅಮೃತ ಸಮುದಾಯದ ಅಭಿವೃದ್ಧಿ ಯೋಜನೆಯ ಜವಾಬ್ದಾರಿಯನ್ನು ಎನ್ಎಸ್ಎಸ್ಗೆ ನೀಡಲಾಗಿದ್ದು, 750 ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ. ಈ ಗ್ರಾಮಗಳ ಸಂಪೂರ್ಣ ಚಿತ್ರಣವನ್ನು ಎನ್ಎಸ್ಎಸ್ ಯಶಸ್ವಿಯಾಗಿ ದಾಖಲಿಸಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಇತರೆ ಇಲಾಖೆಗಳೊಂದಿಗೆ ಜೋಡಿಸಲಿದೆ ಎಂದು ಸಚಿವ ನಾರಾಯಣ ಗೌಡ ಅವರು ತಿಳಿಸಿದರು.
ಇದನ್ನೂ ಓದಿ: 2023 ರ ಚುನಾವಣೆಯಲ್ಲಿ ಸ್ವತಂತ್ರ ಸರ್ಕಾರ ನಡೆಸಲು ನಮ್ಮ ಪಕ್ಷವನ್ನು ಬೆಂಬಲಿಸಿ: ಹೆಚ್ ಡಿಕೆ
ಇದೇ ಮೊದಲ ಬಾರಿಗೆ ಕರ್ನಾಟಕದ ನಾಲ್ವರಿಗೆ ರಾಷ್ಟ್ರಮಟ್ಟದ ಎನ್ಎಸ್ಎಸ್ ಪ್ರಶಸ್ತಿ ಲಭಿಸಿರೋದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿ. ಕೋವಿಡ್ ಸಂಕಷ್ಟದಲ್ಲೂ ಮಹಾಮಾರಿ ವಿರುದ್ಧ ಕೋರೋನಾ ವಾರಿಯರ್ ಆಗಿ ಸೇವೆ ಸಲ್ಲಿಸಿದ ಎನ್ಎಸ್ಎಸ್ ಸೇವಕ ಅಪಾರವಾದದ್ದು. ಸಮಾಜದ ಏಳಿಗೆಗೆ ಎನ್ಎಸ್ಎಸ್ ಕೊಡುಗೆ ತುಂಬಾ ದೊಡ್ಡದಿದೆ. ಇನ್ನಷ್ಟು ಸಮಾಜಮುಖಿ ಯುವಜನರ ಅನುಕೂಲವಾದ ಯೋಜನೆಗಳನ್ನು ರೂಪಿಸಿ ಯಶಸ್ವಿಯಾಗಿ ಅನುಷ್ಠಾನಕ್ಕೆ ಅಗತ್ಯಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವ ನಾರಾಯಣ ಗೌಡ ಅವರು ತಿಳಿಸಿದರು.
ಯುವ ಸಹಾಯವಾಣಿ ಆರಂಭಿಸಿರುವುದು ಯುವ ಜನತೆಗೆ ಬಹಳ ಅನುಕೂಲ ಅಗಲಿದೆ. ಯುವ ಜನತೆಯಲ್ಲಿರುವ ಮಾನಸಿಕ ತೋಳಲಾಟ ಹೇಳಿಕೊಳ್ಳಲು ಇದು ಅನುಕೂಲಾಗಲಿದೆ. ಈ ಸಹಾಯವಾಣಿ ಸಂಖ್ಯೆಯನ್ನು ಹೆಚ್ಚು ಹೆಚ್ಚು ಪ್ರಚಾರಪಡಿಸುವ ಮೂಲಕ ಎಲ್ಲರಿಗೂ ಅನುಕೂಲ ಆಗುವ ನಿಟ್ಟಿನಲ್ಲಿ ಕಾರ್ಯನ್ಮುಖರಾಗಬೇಕು ಎಂದು ಸಚಿವ ಅಶ್ವಥ್ ನಾರಾಯಣ್ ಅವರು ಕರೆ ನೀಡಿದರು.
ಎನ್ಎಸ್ಎಸ್ ಸ್ಥಾಪನೆ ಮಾಡಿರುವ ಉದ್ದೇಶವನ್ನ ಯಶಸ್ವಿಗೊಳಿಸಬೇಕು. ಇಷ್ಟು ದಿನ ಎನ್ಎಸ್ಎಸ್ ಪಠೇತ್ಯರ ಚಟುವಟಿಕೆ ಆಗಿತ್ತು. ಆದರೀಗ ರಾಷ್ಟ್ರೀಯ ನೂತನ ಶಿಕ್ಷಣ ನೀತಿಯಲ್ಲಿ ಎನ್ಎಸ್ಎಸ್ ಹಾಗೂ ಎನ್ಸಿಸಿಯನ್ನು ಪಠ್ಯದಲ್ಲಿ ಸೇರ್ಪಡೆ ಮಾಡಲಾಗಿದೆ. ಇದರಿಂದ ಎನ್ಎಸ್ಎಸ್ಗೆ ಸೇರಿಸಿಕೊಳ್ಳಲು ಅನುಕೂಲ ಆಗಲಿದೆ. ಬಜೆಟ್ನಲ್ಲಿ ಹೆಚ್ಚಿನ ಹಣವನ್ನು ಕ್ರೀಡಾ ಇಲಾಖೆಗೆ ಕೊಡಬೇಕು ಎಂದು ಕೇಳಿಕೊಳ್ಳುತ್ತೇನೆ. ಕ್ರೀಡೆ ಇದ್ದರೇ ಎಲ್ಲವೂ ಸಿಗಲಿದೆ. ಉನ್ನತ ಶಿಕ್ಷಣ ಇಲಾಖೆಯಿಂದ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಗೆ ಬೇಕಾದ ಎಲ್ಲಾ ರೀತಿಯ ನೆರವು ನೀಡಲಾಗುವುದು ಎಂದು ಅಶ್ವಥ್ ನಾರಾಯಣ್ ಹೇಳಿದರು.
ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಸಚಿವರಾದ ಡಾ.ಸಿ ಎನ್ ಅಶ್ವಥ್ ನಾರಾಯಣ ಅವರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಲವು ಗಣ್ಯರು, ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ