ಕರ್ನಾಟಕಕ್ಕೆ ವಿದ್ಯುತ್‌ ಪೂರೈಕೆ ನಿಯಂತ್ರಿಸಲಿರುವ ಎನ್‌ಟಿಪಿಸಿ


Team Udayavani, Feb 6, 2019, 1:12 AM IST

90.jpg

ನವದೆಹಲಿ: ಕಳೆದ 60 ದಿನಗಳಿಂದಲೂ ವಿದ್ಯುತ್‌ ಬಿಲ್‌ ಪಾವತಿ ಮಾಡದ ಕರ್ನಾ ಟಕಕ್ಕೆ ವಿದ್ಯುತ್‌ ಸರಬರಾಜು ನಿಯಂತ್ರಿಸಲು ಎನ್‌ಟಿಪಿಸಿ ನಿರ್ಧರಿಸಿದೆ. ಇದೇ ವೇಳೆ ತೆಲಂಗಾಣ ಮತ್ತು ಆಂಧ್ರಪ್ರದೇಶಕ್ಕೂ ವಿದ್ಯುತ್‌ ನಿಯಂತ್ರಣ ಕ್ರಮ ಜಾರಿಗೆ ಬರಲಿದೆ. ಸುಮಾರು 4138 ಕೋಟಿ ರೂ. ಬಾಕಿಯನ್ನು ರಾಜ್ಯಗಳು ಉಳಿಸಿಕೊಂಡಿದ್ದು, ವಿದ್ಯುತ್‌ ವಿತರಣೆ ಕಂಪನಿಗಳಿಂದ ಈ ಮೊತ್ತ ಪಾವತಿಯಾಗಬೇಕಿತ್ತು. ಹೀಗಾಗಿ 3470 ಮೆ.ವ್ಯಾ ವಿದ್ಯುತ್‌ ಕಡಿಮೆ ಒದಗಿಸಲು ಎನ್‌ಟಿಪಿಸಿ ನಿರ್ಧರಿಸಿದೆ. ಸಿಇಆರ್‌ಸಿ ಮಾರ್ಗಸೂಚಿಯ ಪ್ರಕಾರ ವಿದ್ಯುತ್‌ ಪೂರೈಕೆಯನ್ನು ನಿಯಂತ್ರಿಸಲು ನಿರ್ಧರಿಸ ಲಾಗಿದೆ ಎಂದು ಎನ್‌ಟಿಪಿಸಿ ತಿಳಿಸಿದೆ. ಸಂಪೂರ್ಣ ಮೊತ್ತ ಪಾವತಿ ನಂತರ ವಿದ್ಯುತ್‌ ಪೂರೈಕೆ ಸಹಜ ಸ್ಥಿತಿಗೆ ಮರಳಲಿದೆ. ಸೌರ ಹಾಗೂ ಜಲವಿದ್ಯುತ್‌ ಬಿಲ್‌ ಪಾವತಿ ಬಾಕಿ ಇದ್ದು, ಈ ಸಂಬಂಧ ಈಗಾಗಲೇ ನೋಟಿಸ್‌ ನೀಡಲಾಗಿದೆ.

ರಾಮಗುಂಡಂ, ಸಿಂಹಾದ್ರ, ತಲಚೇರಿ ಮತ್ತು ಕೂಡಗಿ ವಿದ್ಯುತ್‌ ಘಟಕಗಳಿಂದ ಮೂರೂ ರಾಜ್ಯಗಳಿಗೆ ವಿದ್ಯುತ್‌ ಸರಬ ರಾಜಾಗುತ್ತಿದ್ದು, ಒಟ್ಟು 3470 ಮೆ.ವ್ಯಾ ವಿದ್ಯುತ್‌ ಕಡಿಮೆ ಮಾಡಲಾಗುತ್ತದೆ. ಇದು ಫೆ.6 ರಂದು ಜಾರಿಗೆ ಬರಲಿದೆ. ಬಾಕಿ ಪಾವತಿಯವರೆಗೆ ಅಥವಾ ಮುಂದಿನ 3 ತಿಂಗಳ ಕಾಲ ಇದು ಜಾರಿಯಲ್ಲಿರಲಿದೆ.

ಟಾಪ್ ನ್ಯೂಸ್

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.