ತಿಂಗಳಿಗೊಂದು ಸಸಿ ನೆಟ್ಟು ಪೋಷಿಸಿ: ಅನಂತ್
Team Udayavani, Jan 1, 2018, 11:10 AM IST
ಬೆಂಗಳೂರು: ಪ್ರತಿಯೊಬ್ಬರು ತಿಂಗಳಿಗೆ ಕನಿಷ್ಠ ಒಂದು ಗಿಡ ನೆಟ್ಟು, ಅದನ್ನು ಪೋಷಿಸುವ ಸಂಕಲ್ಪ ಮಾಡಬೇಕು ಎಂದು
ಕೇಂದ್ರ ಸಚಿವ ಅನಂತಕುಮಾರ್ ಹೇಳಿದ್ದಾರೆ.
ಕಿಮ್ಸ್ ಕಾಲೇಜಿನ ಆವರಣದಲ್ಲಿ “ಹಸಿರು ಬೆಂಗಳೂರು’ ಧ್ಯೇಯದ ಅಡಿಯಲ್ಲಿ ಅದಮ್ಯ ಚೇತನ ಸಂಸ್ಥೆ ನಡೆಸಿದ 105ನೇ ಹಸಿರು
ಭಾನುವಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸುಸ್ಥಿರ ಅಭಿವೃದ್ಧಿಗಾಗಿ ಪ್ರತಿಯೊಬ್ಬರು ಪರಿಸರ ಸ್ನೇಹಿ ಜೀವನ ಶೈಲಿ ಅಳವಡಿಸಿಕೊಳ್ಳುವ ಅಗತ್ಯವಿದೆ. ಈ ನಿಟ್ಟಿನಲ್ಲಿ ತಿಂಗಳಿಗೊಂದು ಗಿಡ ನೆಟ್ಟು ಅದನ್ನು ಸಮೃದ್ಧವಾಗಿ ಪೋಷಿಸಲು ಸಂಕಲ್ಪ ತೊಡಬೇಕು. ಜತೆಗೆ ಸಸ್ಯ ಸತ್ಯಾಗ್ರಹ ರೂಪದಲ್ಲಿ ಹಸಿರೀಕರಣ ನಡೆಯಬೇಕು. ಇದಕ್ಕಾಗಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಿ, ಅದರ ಬದಲು ಸ್ಟೀಲ್, ಬಟ್ಟೆ ಬ್ಯಾಗ್ಗಳು ಸೇರಿದಂತೆ ಮರುಬಳಕೆ ಮಾಡಬಹುದಾದ ವಸ್ತುಗಳನ್ನು ಹೆಚ್ಚು ಬಳಸುವ ಅಗತ್ಯವಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಅದಮ್ಯ ಚೇತನ ಟ್ರಸ್ಟ್ನ ಡಾ. ತೇಜಸ್ವಿನಿ ಅನಂತಕುಮಾರ್, ಚಿತ್ರನಿರ್ದೇಶಕ ಟಿ.ಎಸ್
ನಾಗಾಭರಣ, ಮಾಜಿ ಶಾಸಕ ರಾಜಶೇಖರ್ ಶೀಲವಂತ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್
ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು
ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…
MUST WATCH
ಹೊಸ ಸೇರ್ಪಡೆ
OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್ ರೋಲ್ ನಲ್ಲಿ ಫಾಫಾ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ