ಪುಟಾಣಿ ಮಕ್ಕಳ ಗ್ರಂಥಾಲಯ ಬಳಕೆಗಾಗಿ “ಓದುವ ಬೆಳಕು’
ಗ್ರಾಮೀಣಾಭಿವೃದ್ದಿ ಮತ್ತು ಪಂ.ರಾಜ್, ಗ್ರಂಥಾಲಯ ಇಲಾಖೆ ಜತೆಗೂಡಿ ಕಾರ್ಯಕ್ರಮ
Team Udayavani, Apr 10, 2022, 8:05 AM IST
ಬೆಂಗಳೂರು: ಮಕ್ಕಳಲ್ಲಿ ಓದುವ ಹವ್ಯಾಸ ಮೂಡಿಸಲು, ಓದುವ ಚಟುವಟಿಕೆಗಳನ್ನು ರೂಪಿಸಿ ಅವರ ಮುಂದಿನ ಕಲಿಕೆ ಸುಗಮಗೊಳಿಸಲು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಹಾಗೂ ಗ್ರಂಥಾಲಯ ಇಲಾಖೆ ಜತೆಗೂಡಿ “ಓದುವ ಬೆಳಕು’ ಕಾರ್ಯಕ್ರಮ ರೂಪಿಸಿದೆ.
ಮೂರನೇ ತರಗತಿಯ ಹಂತದಲ್ಲೆ ವಿದ್ಯಾರ್ಥಿಗಳು ದಿನಪತ್ರಿಕೆ ಹಾಗೂ ಪುಸ್ತಕಗಳನ್ನು ಓದಿ ಅರ್ಥೈಸಿಕೊಳ್ಳುವುದು ಮತ್ತು ಕೌಶಲ ಹೆಚ್ಚಿಸಿಕೊಳ್ಳಲು ಸಹಕಾರಿಯಾಗುವುದು ಇದರ ಉದ್ದೇಶವಾಗಿದೆ. ಓದುವ ಬೆಳೆಕು ಕಾರ್ಯಕ್ರಮಕ್ಕೆ ಈಗಾಗಲೇ ಗ್ರಾಮ ಪಂಚಾಯತ್ಗಳಲ್ಲಿ ಸ್ಥಾಪಿಸಲಾಗಿರುವ ಗ್ರಂಥಾಲಯಗಳನ್ನು ಮಕ್ಕಳು ಮತ್ತು ಶಾಲಾ ಶಿಕ್ಷಕರು ಬಳಸಿಕೊಳ್ಳುವಂತೆ ಗ್ರಾಮೀಣ ಮತ್ತು ಪಂಚಾಯತ್ರಾಜ್ ಇಲಾಖೆ ಸೂಚಿಸಿದೆ. ಈ ಸಂಬಂಧ ಶಾಲಾ ಎಸ್ಡಿಎಂಸಿ ಅಧ್ಯಕ್ಷರು, ಶಾಲಾ ಮುಖ್ಯ ಶಿಕ್ಷಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಜತೆಗೆ ರಾಜ್ಯದ ಎಲ್ಲ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಪಿಡಿಒಗಳಿಗೆ ಸೂಚನೆ ನೀಡಲಾಗಿದೆ.
ಕಲಿಕೆಗೆ ನಾಂದಿಯಾಗುವ ಆಶಯ
1ರಿಂದ 12ನೇ ತರಗತಿ ವಿದ್ಯಾರ್ಥಿಗಳಲ್ಲಿ ಓದಿ ಅರ್ಥೈಸಿಕೊಳ್ಳುವ ಸಾಮರ್ಥ್ಯವನ್ನು ವಿದ್ಯಾರ್ಥಿ ಸಮುದಾಯದಲ್ಲಿ ಬೆಳೆಸುವುದು ಕೂಡ ರಾಷ್ಟ್ರೀಯ ಶಿಕ್ಷಣ ನೀತಿಯ ಗುರಿಯಾಗಿದೆ. ಜತೆಗೆ ಶಾಲಾ ವಿದ್ಯಾರ್ಥಿಗಳು ಗ್ರಾಮ ಪಂಚಾಯತ್ ಹಾಗೂ ನಗರ ವ್ಯಾಪ್ತಿಯಲ್ಲಿರುವ ನಗರ ಕೇಂದ್ರ ಗ್ರಂಥಾಲಯಗಳಿಗೆ ಭೇಟಿ ನೀಡಿ ಕಥಾ ಪುಸ್ತಕಗಳು, ಪುರವಣಿಗಳು, ನಿಯತಕಾಲಿಕೆಗಳು, ವಾರ್ತಾ ಪತ್ರಿಕೆಗಳು, ವಾರ ಪತ್ರಿಕೆಗಳನ್ನು ಓದಿ ಅರ್ಥೈಯಿಸಿಕೊಂಡು ಮುಂದಿನ ಕಲಿಕೆಗೆ ನಾಂದಿಯಾಗಲಿ ಎನ್ನುವ ಆಶಯ ಇದರಲ್ಲಿ ಸೇರಿದೆ ಎಂದು ಪಂಚಾಯತ್ ಇಲಾಖೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಶೇ. 100 ಗುರಿ
ಈ ಕಾರ್ಯ ಸಾಧನೆಗಾಗಿ ಗುರಿ ಹೊಂದಲಾಗಿದೆ. 2026-27ರ ಒಳಗೆ 3ನೇ ತರಗತಿಯ ಶೇ. 100ರಷ್ಟು ವಿದ್ಯಾರ್ಥಿಗಳು ಅರ್ಥೈಸಿಕೊಂಡು ಓದುವ ಕೌಶಲವನ್ನು ಹೊಂದುವಂತೆ ಮಾಡುವ ಗುರಿ ಹೊಂದಲಾಗಿದೆ. ಈ ನಿಟ್ಟಿನಲ್ಲಿ ರಾಜ್ಯದ ವಿದ್ಯಾರ್ಥಿಗಳೊಂದಿಗೆ ಶಾಲೆಗಳು, ಶಿಕ್ಷಕರು ಹಾಗೂ ಸಮುದಾಯ ಕೂಡ ಕೈ ಜೋಡಿಸಿ ಗುರಿ ಮಟ್ಟಲು ಶ್ರಮಿಸಬೇಕಾಗಿದೆ ಎಂದು ಅಧಿಕಾರಿಗಳು ಹೇಳುತ್ತಾರೆ.
ಶಿಕ್ಷಕರ ಭೇಟಿ ಕಡ್ಡಾಯ
ಶಾಲಾ ಮಕ್ಕಳು ವಾರದಲ್ಲಿ ಒಮ್ಮೆ ಕಡ್ಡಾಯವಾಗಿ ಗ್ರಂಥಾಲಯಕ್ಕೆ ಶಾಲಾ ಶಿಕ್ಷಕರೊಂದಿಗೆ ಭೇಟಿ ನೀಡುವುದು ಕೂಡ ಇದರಲ್ಲಿ ಸೇರಿದೆ. ಜತೆಗೆ 1ರಿಂದ 5ನೇ ತರಗತಿ ವಿದ್ಯಾರ್ಥಿಗಳನ್ನು ಹಿರಿಯ ತರಗತಿ ವಿದ್ಯಾರ್ಥಿಗಳೊಡನೆ ಒಗ್ಗೂಡಿಸಿ ಜಂಟಿ ಓದುವಿಕೆಯಲ್ಲಿ ತೊಡಗಿಸಿಕೊಳ್ಳುವುದು. ಹಾಗೂ 4ರಿಂದ 6ರ ವಯೋಮಾನದ ಮಕ್ಕಳು ಸಹ ಗ್ರಂಥಾಲಯಗಳಿಗೆ ಭೇಟಿ ನೀಡಲು ಪ್ರೇರೇಪಿಸಿ ಅವರಿಗೆ ಪುಸ್ತಕಗಳನ್ನು ಓದುವ ಹಾಗೂ ಅವುಗಳನ್ನು ಬಳಸುವ ಬಗ್ಗೆ ಅರಿವು ಮೂಡಿಸಲು ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಮಕ್ಕಳಲ್ಲಿ ಪುಟ್ಟವಯಸ್ಸಿನಲ್ಲೆ ಓದಿನ ಅಭಿರುಚಿ ಬೆಳೆಸುವುದರ ಜತೆಗೆ ಅರ್ಥೈಸಿಕೊಂಡು ಓದುವುದಕ್ಕೆ ಈ ಕಾರ್ಯಕ್ರಮ ಸಹಕಾರಿಯಾಗಲಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯ ರೂಪಿತ ಈ ಕಾರ್ಯಕ್ರಮ ವಿದ್ಯಾರ್ಥಿಗಳಲ್ಲಿ ಜ್ಞಾನದ ಅಭಿರುಚಿ ಬಿತ್ತಲಿದೆ.
– ಡಾ| ಸತೀಶ ಕುಮಾರ್ ಹೊಸಮನಿ, ನಿರ್ದೇಶಕರು ಗ್ರಂಥಾಲಯ ಇಲಾಖೆ
-ದೇವೇಶ ಸೂರಗುಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ