ಸಾಕ್ಷ್ಯ ನಾಶಕ್ಕಾಗಿ ಅಧಿಕಾರಿಗಳ ಯತ್ನ? 32 ಕೈದಿಗಳ ಎತ್ತಂಗಡಿ


Team Udayavani, Jul 17, 2017, 3:30 AM IST

agrahara.jpg

ಬೆಂಗಳೂರು: ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಬಗ್ಗೆ ನಿವೃತ್ತ ಐಎಎಸ್‌
ಅಧಿಕಾರಿ ವಿನಯ್‌ಕುಮಾರ್‌ ನೇತೃತ್ವದ ತಂಡ ತನಿಖೆ ಆರಂಭಿಸುವ ಮುನ್ನವೇ, ಜೈಲಿನಲ್ಲಿ ಕೈದಿಗಳ ಎತ್ತಂಗಡಿ
ಕಾರ್ಯ ನಡೆಸಲಾಗಿದೆ. ಇದು ಸಾಕ್ಷ್ಯ ನಾಶಪಡಿಸುವ ಪ್ರಯತ್ನವೆಂದೇ ಹೇಳಲಾಗುತ್ತಿದ್ದು, ಡಿಐಜಿ ರೂಪಾ ಅವರಿಗೆ
ಜೈಲಿನ ಅಕ್ರಮಗಳ ಬಗ್ಗೆ ಮಾಹಿತಿ ನೀಡಿದ ಶಂಕೆ ಮೇರೆಗೆ ರಾತ್ರೋರಾತ್ರಿ ಸುಮಾರು 32 ಮಂದಿ ಕೈದಿಗಳನ್ನು ಬೇರೆ
ಜೈಲುಗಳಿಗೆ ಸ್ಥಳಾಂತರ ಮಾಡಲಾಗಿದೆ.

ಸೋಮವಾರದಿಂದ ವಿನಯ್‌ಕುಮಾರ್‌ ಅವರು ತನಿಖೆ ಆರಂಭಿಸಲಿದ್ದಾರೆ. ಈ ಸಂದರ್ಭದಲ್ಲಿ ಕೈದಿಗಳು ಅವ್ಯವಹಾರದ
ಬಗ್ಗೆ ಮಾಹಿತಿ ನೀಡಬಾರದು ಎನ್ನುವ ಉದ್ದೇಶದಿಂದ ಸಂದೇಹಾಸ್ಪದ ಕೈದಿಗಳನ್ನ ಮೈಸೂರು, ಬೆಳಗಾವಿ ಮತ್ತು
ಬಳ್ಳಾರಿ ಬಂದೀಖಾನೆ ಗಳಿಗೆ ಕಳುಹಿಸಲಾಗಿದೆ ಎಂದು ಹೇಳಲಾಗುತ್ತಿದೆ. ಕೈದಿಗಳಾದ ಅನಂತ ಮೂರ್ತಿ, ಚಂದ್ರು,
ರಾಮ ಮೂರ್ತಿ ವರ್ಗಾವಣೆಗೊಂಡ ವರಲ್ಲಿ ಪ್ರಮುಖರಾಗಿದ್ದಾರೆ. ಮೈಸೂರಿಗೆ ನಾಲ್ವರು, ಬೆಳಗಾವಿಯ ಹಿಂಡಲಗ ಜೈಲಿಗೆ ಎಂಟು ಮಂದಿ ಹಾಗೂ ಇನ್ನುಳಿದವರನ್ನು ಬಳ್ಳಾರಿಯ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ ಎಂದು
ಮೂಲಗಳು ತಿಳಿಸಿವೆ. ವಿಚಾರಣಾಧೀನ ಹಾಗೂ ಸಜಾಬಂಧಿ ಕೈದಿಗಳನ್ನು ಸ್ಥಳಾಂತರ ಮಾಡಿರುವುದು ತನಿಖೆಯ ದಿಕ್ಕು ತಪ್ಪಿಸುವ ಒಂದು ಪ್ರಯತ್ನ ಎಂದು ವಿಶ್ಲೇಷಿಸಲಾಗುತ್ತಿದೆ.

ಜೈಲಿನ ಮುಖ್ಯ ಅಧೀಕ್ಷಕ ಕೃಷ್ಣಕುಮಾರ ವಿರುದ್ಧವೂ ಗಂಭೀರ ಆರೋಪಗಳಿದ್ದು, ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದಲೇ ವಿಶೇಷ ಭದ್ರತೆಯೊಂದಿಗೆ ಕೈದಿಗಳನ್ನು ಸ್ಥಳಾಂತರಿಸಲಾಗಿದೆ ಎನ್ನಲಾಗಿದೆ. ಆದರೆ, ಜೈಲಿನ
ಅಧಿಕಾರಿಗಳು ಕೈದಿಗಳ ಸ್ಥಳಾಂತರಕ್ಕೆ ನೀಡುವ ಕಾರಣವೇ ಬೇರೆಯಾಗಿದೆ. ಅಕ್ರಮ ಆರೋಪದ ಬಗ್ಗೆ ಡಿಐಜಿ ರೂಪಾ
ಮತ್ತು ಡಿಜಿ ಸತ್ಯನಾರಾಯಣರಾವ್‌ ಪ್ರತ್ಯೇಕವಾಗಿ ಜೈಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕೈದಿಗಳು ಪರ-ವಿರೋಧ
ಗುಂಪು ಕಟ್ಟಿಕೊಂಡು ಗಲಾಟೆ ಮಾಡಿದ್ದರ ಹಿನ್ನೆಲೆಯಲ್ಲಿ ಭದ್ರತೆ ದೃಷ್ಠಿಯಿಂದ ಬೇರೆ ಕಾರಾಗೃ‌ೃಹಕ್ಕೆ ಸ್ಥಳಾಂತರ ಮಾಡಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಮಾವನ ಸಾವಿನ ಸುದ್ದಿ ತಿಳಿಸಲು ಬಿಡಲಿಲ್ಲ!
ಜೈಲಿನಲ್ಲಿರುವ ವಿಚಾರಣಾಧೀನ ಕೈದಿಯೊಬ್ಬರ ತಂದೆಯ ಸಾವಿನ ಸುದ್ದಿ ತಿಳಿಸಲು ಬಂದ ಪತ್ನಿಯನ್ನು ಒಳಗಡೆ ಬಿಡದೇ ಕಾರಾಗೃಹ ಸಿಬ್ಬಂದಿ ಅಮಾನವೀಯವಾಗಿ ನಡೆದುಕೊಂಡ ಘಟನೆ ಭಾನುವಾರ ಪರಪ್ಪನ ಅಗ್ರಹಾರ ಜೈಲಿನ ಬಳಿ ನಡೆದಿದೆ. ಪ್ರಕರಣವೊಂದರಲ್ಲಿ ತುಮಕೂರಿನ ಬೆಳ್ಳಾವಿ ಗ್ರಾಮದ ನಿವಾಸಿ ರಾಜಣ್ಣ ಎಂಬವರು ವಿಚಾರಣಾಧೀನ ಕೈದಿ ಯಾಗಿ ಜೈಲಿನಲ್ಲಿ¨ªಾರೆ. ಶನಿವಾರ ರಾಜಣ್ಣರ ತಂದೆ ಸಾವನ್ನಪ್ಪಿದ್ದು, ಈ ಸಂಬಂಧ ರಾಜಣ್ಣ ಪತ್ನಿ ಅರುಣಾ ಮತ್ತು ನಾದಿನಿ ಪ್ರೇಮಾ ಭಾನುವಾರ ಜೈಲಿಗೆ ಆಗಮಿಸಿದ್ದರು. ಬೆಳಗ್ಗೆಯಿಂದ ಅರುಣಾ ಅವರು ಪತಿಯನ್ನು ಭೇಟಿ 
ಯಾಗಲು ಸಾಕಷ್ಟು ಪ್ರಯತ್ನಿಸಿದ್ರೂ ಸಾಧ್ಯವಾಗಿಲ್ಲ.

ಕೊನೆ ಪಕ್ಷ ನೀವಾದ್ರೂ ರಾಜಣ್ಣನಿಗೆ ತಂದೆಯ ಸಾವಿನ ಸುದ್ದಿಯನ್ನು ತಿಳಿಸಿ ಎಂದು ಮನವಿ ಮಾಡಿಕೊಂಡರೂ,
ಸಿಬ್ಬಂದಿ ಸ್ಪಂದಿಸಿಲ್ಲ. ಕಳೆದ ಎರಡು ದಿನದಿಂದ ಜೈಲಿನಲ್ಲಿ ಗಲಾಟೆ ನಡಿತಿದ್ದು, ಭಾನುವಾರವಾದ್ದರಿಂದ ಕೈದಿಗಳನ್ನು
ನೋಡಲು ಸಾಧ್ಯ ವಿಲ್ಲ ಎಂದು ಉತ್ತರಿಸಿ ದ್ದಾರೆ. ಕೊಡಿಗೆಹಳ್ಳಿ ಪೊಲೀ ಸರು ರಾಜಣ್ಣನನ್ನ ವಶಕ್ಕೆ ಪಡೆದು ಬಂಧಿಸಿದ್ದರು. ಮಾಧ್ಯಮಗಳಲ್ಲಿ ಈ ಸುದ್ದಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತ ಜೈಲಿನ ಸಿಬ್ಬಂದಿ, ಪತ್ನಿ ಅರುಣಾ ಅವರಿಗೆ ರಾಜಣ್ಣ ಭೇಟಿಗೆ ಅವಕಾಶ ನೀಡಿದ್ದಾರೆ. 

ಹಿಗ್ಗಾಮುಗ್ಗಾ ಥಳಿತ?
ಜೈಲಿನಲ್ಲಿ ಡಿಐಜಿ ರೂಪಾ ಪರ ಮತ್ತು ವಿರೋಧವಾಗಿ ಪ್ರತಿಭಟನೆ ನಡೆಸಿದ ಕೈದಿಗಳಿಗೆ ಜೈಲಿನ ಸಿಬ್ಬಂದಿ ಹಿಗ್ಗಾಮುಗ್ಗಾ
ಥಳಿಸಿದ್ದಾರೆ ಎನ್ನಲಾಗಿದೆ. ಅವರ ಲಾಠಿ ಏಟಿನ ತೀವ್ರತೆ ಎಷ್ಟಿತ್ತೆಂದರೆ ಕೈದಿಗಳು ಸ್ಥಳಾಂತರಗೊಳ್ಳುತ್ತಿರುವ ವೇಳೆ ನಡೆಯಲು ಸಹ ಸಾಧ್ಯವಾಗುತ್ತಿರಲಿಲ್ಲ. ಬೇರೆ ಜೈಲಿಗೆ ಕರೆದೊಯ್ಯುವಾಗ ಮಾರ್ಗಮಧ್ಯದಲ್ಲೂ ಸಹ ಲಾಠಿ ಏಟು
ಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.