ಮಂಗಳೂರು ಮೂಲದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ: ಓಲಾ ಚಾಲಕನ ಸೆರೆ
Team Udayavani, Jun 6, 2018, 6:00 AM IST
ಬೆಂಗಳೂರು: ಮಹಿಳಾ ಪ್ರಯಾಣಿಕರೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಓಲಾ ಕ್ಯಾಬ್ ಚಾಲಕನನ್ನು ಜೀವನ್ಭೀಮಾ ನಗರ ಠಾಣೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಚಿಕ್ಕಬಾಣಾವರ ಮೂಲದ ಕಾಡುಗೋಡಿ ನಿವಾಸಿ ವಿ.ಅರುಣ್(32) ಬಂಧಿತ. ಮಂಗಳೂರು ಮೂಲದ ಮಹಿಳೆಯನ್ನು ಕೆಂಪೇಗೌಡ ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರೆದೊಯ್ಯುವ ಮಾರ್ಗ ಮಧ್ಯೆ ಲೈಂಗಿಕ ಕಿರುಕುಳ ನೀಡಿದ್ದ. ಈ ಸಂಬಂಧ ಸಂತ್ರಸ್ತೆ ನಗರ ಪೊಲೀಸ್ ಆಯುಕ್ತರಿಗೆ ಈ-ಮೇಲ್ ಮೂಲಕ ದೂರು ನೀಡಿದ್ದರು.
ಸಂತ್ರಸ್ತೆ ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರು. ಜೂ. 1ರಂದು ಬೆಳಗ್ಗೆ 5 ಗಂಟೆಯ ಇಂಡಿಗೋ ಏರ್ಲೈನ್ಸ್ ವಿಮಾನದ ಮೂಲಕ ಮುಂಬಯಿಗೆ ತೆರಳಲು ಟಿಕೆಟ್ ಕಾಯ್ದಿರಿಸಿದ್ದರು. ವಿಮಾನ ನಿಲ್ದಾಣಕ್ಕೆ ಹೋಗಲು ಮೇ 31ರ ತಡರಾತ್ರಿ 2.15ರಲ್ಲಿ ಓಲಾ ಕ್ಯಾಬ್ ಬುಕ್ ಮಾಡಿದ್ದರು. ಆರೋಪಿ ಅರುಣ್ ವಿಮಾನ ನಿಲ್ದಾಣಕ್ಕೆ ಕರೆದೊಯ್ಯುವಾಗ ಮಾರ್ಗ ಬದಲಿಸಿ ಬೇರೆಡೆ ಕರೆದೊಯ್ದ. ನಿರ್ಜನ ಪ್ರದೇಶ ಕಡೆ ಹೋಗುತ್ತಿದ್ದಂತೆ ಎಚ್ಚೆತ್ತ ಮಹಿಳೆ ಪ್ರಶ್ನಿಸಿದ್ದಾರೆ. ಕೂಡಲೇ ಕಾರು ನಿಲ್ಲಿಸಿದ್ದ ಆರೋಪಿ ಸಂತ್ರಸ್ತೆಯ ಕುತ್ತಿಗೆ ಹಿಡಿದು ಅಸಭ್ಯವಾಗಿ ವರ್ತಿಸಿದ್ದ. ಇಬ್ಬರ ನಡುವೆ ಚಕಮಕಿ ನಡೆದಿದ್ದು, ಹೆದರಿದ ಆರೋಪಿ ಸಂತ್ರಸ್ತೆಯನ್ನು ವಿಮಾನ ನಿಲ್ದಾಣಕ್ಕೆ ಬಿಟ್ಟು ಹೊರಗಡೆ ಹೇಳದಂತೆ ಎಚ್ಚರಿಕೆ ನೀಡಿ ಪರಾರಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…