ಒಮಿಕ್ರಾನ್ ಭೀತಿ: ರಾಜ್ಯದಲ್ಲಿ ಇಂದಿನಿಂದ ಹಲವು ಕಠಿಣ ನಿಯಮಗಳು ಜಾರಿ
Team Udayavani, Dec 3, 2021, 3:43 PM IST
ಬೆಂಗಳೂರು: ದೇಶದಲ್ಲೇ ಮೊದಲ ಬಾರಿ ರಾಜ್ಯದಲ್ಲಿ ಒಮಿಕ್ರಾನ್ ರೂಪಾಂತರಿ ಕೋವಿಡ್ ಸೋಂಕಿತರು ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೆಲವು ಕಠಿಣ ನಿಯಮಗಳನ್ನು ಜಾರಿಗೆ ತಂದಿದೆ.
ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಹಲವು ಸಚಿವರು ಮತ್ತು ತಜ್ಞರೊಂದಿಗೆ ಸಭೆ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಆರ್.ಅಶೋಕ್, ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದೆ. ವರದಿಯ ಪ್ರಕಾರ ಒಮಿಕ್ರಾನ್ ಹೆಚ್ಚಿನ ತೀವ್ರತೆ ಹೊಂದಿಲ್ಲ. ಇದಿರಂದ ಯಾವುದೇ ಸಾವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ ಎಂದರು.
ಇದನ್ನೂ ಓದಿ:ಸೋಂಕಿತರ ಮಾದರಿ ಪುಣೆಗೆ: ಗೋವಾದಲ್ಲಿಯೂ ಒಮಿಕ್ರಾನ್ ಆತಂಕ
ನಿಯಮಗಳು:
ವಿಮಾನ ನಿಲ್ದಾಣದಲ್ಲಿ ಪ್ರತಿ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಪರೀಕ್ಷೆ ನಡೆಸಲಾಗುತ್ತದೆ. ಆದರೆ ಪರೀಕ್ಷೆ ವರದಿ ಬಂದ ನಂತರವೇ ಪ್ರಯಾಣಿಕರನ್ನು ಹೊರಗೆ ಬಿಡಲಾಗುವುದು.
ಸಿನಿಮಾ ಹಾಲ್, ಮಾಲ್ ಗಳಿಗೆ ಪ್ರವೇಶಿಸಲು ಎರಡು ಡೋಸ್ ವ್ಯಾಕ್ಸಿನ್ ಕಡ್ಡಾಯ.
ಶಾಲೆಗೆ ಹೋಗುವ ಮಕ್ಕಳಿರುವ ಹೆತ್ತವರು ಕಡ್ಡಾಯವಾಗಿ ಎರಡು ಡೋಸ್ ವ್ಯಾಕ್ಸಿನ್ ಪಡೆದಿರಬೇಕು. ಇಲ್ಲದಿದ್ದಲ್ಲಿ ಶಾಲೆಗೆ ಮಕ್ಕಳನ್ನು ಕಳುಹಿಸುವಂತಿಲ್ಲ.
ಶಾಲೆ ಕಾಲೇಜುಗಳಲ್ಲಿ ಯಾವುದೇ ಸಮಾರಂಭ ನಡೆಸಲು ಅವಕಾಶವಿಲ್ಲ.
ಮದುವೆ ಸಮಾರಂಭಗಳಿಗೆ 500 ಜನರಿಗೆ ಮಾತ್ರ ಅವಕಾಶ.
ಕಂಟ್ರೋಲ್ ರೂಂ ಮತ್ತೆ ಆರಂಭ ಮಾಡಲಾಗುವುದು. ಪ್ರತಿ ದಿನ ಒಂದು ಲಕ್ಷ ಟೆಸ್ಟ್ ಮಾಡಲು ತೀರ್ಮಾನ ಮಾಡಲಾಗಿದೆ. ಕೋವಿಡ್ 2 ಅಲೆಯ ಸಂದರ್ಭದಲ್ಲಿ ಮಾಡಿರುವ ಆಕ್ಸಿಜನ್ ಹಾಗೂ ಐಸಿಯು ಬೆಡ್ ಸಿದ್ಧಗೊಳಿಸಲು ಸೂಚನೆ ನೀಡಲಾಗಿದೆ. ಕಳೆದ ಬಾರಿ ಉಂಟಾದ ಔಷಧಿಯ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗವುದು ಎಂದು ಆರ್.ಅಶೋಕ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು