ಬೂಸ್ಟರ್ ಡೋಸ್ ಲಸಿಕೆ: ಕೇಂದ್ರಕ್ಕೆ ಬೇಡಿಕೆ
ಕೇಂದ್ರ ಆರೋಗ್ಯ ಸಚಿವರ ಜತೆ ದಿಲ್ಲಿಯಲ್ಲಿ ಇಂದು ಸಿಎಂ ಚರ್ಚೆ; ಮೊದಲು ಮುಂಚೂಣಿ ಕಾರ್ಯಕರ್ತರಿಗೆ ನೀಡುವ ಸಾಧ್ಯತೆ
Team Udayavani, Dec 2, 2021, 6:45 AM IST
ಮುಂಬಯಿ: ಮೂರನೇ ಅಲೆ ಭೀತಿ ಹಿನ್ನೆಲೆಯಲ್ಲಿ ಬೃಹತ್ ಕೋವಿಡ್ ಆರೈಕೆ ಕೇಂದ್ರ ನಿರ್ಮಿಸಲಾಗುತ್ತಿದೆ.
ಬೆಂಗಳೂರು/ಹುಬ್ಬಳ್ಳಿ: ಹೊಸ ರೂಪಾಂತರಿ ಒಮಿಕ್ರಾನ್ ಭೀತಿ ಬೆನ್ನಲ್ಲೇ ರಾಜ್ಯದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ಲಸಿಕೆ ನೀಡುವ ಚರ್ಚೆಗಳು ಆರಂಭವಾಗಿವೆ.
ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಆರೋಗ್ಯ ಸಚಿವ ಡಾ| ಸುಧಾಕರ್ ಬೂಸ್ಟರ್ ಡೋಸ್ ಬಗ್ಗೆ ಪ್ರತಿಪಾದಿಸುತ್ತಿದ್ದಾರೆ. ರಾಜ್ಯದ ಪ್ರಖ್ಯಾತ ವೈದ್ಯರೂ ಇದಕ್ಕೆ ಸಹಮತ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸಚಿವರ ಜತೆ ಚರ್ಚೆ
ಮೂರನೇ ಅಲೆ ಭೀತಿಯ ಹಿನ್ನೆಲೆಯಲ್ಲಿ ಆರೋಗ್ಯ ,ಮುಂಚೂಣಿ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡಬಹುದೇ ಎಂಬ ಯೋಚನೆ ಇದೆ. ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವ ಮನಸುಖ ಮಾಂಡವೀಯ ಜತೆ ಚರ್ಚಿಸಲಾಗುವುದು ಎಂದು ಹುಬ್ಬಳ್ಳಿಯಲ್ಲಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಗುರುವಾರ ಸಿಎಂ ಹೊಸದಿಲ್ಲಿಗೆ ತೆರಳ ಲಿದ್ದು, ಕೇಂದ್ರ ಸಚಿವ ಮಾಂಡವೀಯ ಜತೆ ಮಾತುಕತೆ ನಡೆಸುವ ಸಾಧ್ಯತೆ ಇದೆ. ಹೊಸ ರೂಪಾಂತರಿ ಆತಂಕ ನಿವಾರಿಸಲು ಮತ್ತು ಸಂಭಾವ್ಯ ಪರಿಸ್ಥಿತಿ ಎದುರಿಸಲು ಮುನ್ನಚ್ಚರಿಕೆ ಕ್ರಮಗಳ ಬಗ್ಗೆ ಸಚಿವರಿಗೆ ಮನವರಿಕೆ ಮಾಡಿಕೊಡಲಿದ್ದಾರೆ.
ಸಿಎಂ ಹೊಸದಿಲ್ಲಿಯಲ್ಲಿ ಆರೋಗ್ಯ ಸಚಿವರನ್ನು ಭೇಟಿ ಮಾಡಿ ಆರೋಗ್ಯ ಮತ್ತು ಮುಂಚೂಣಿ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡುವ ಬಗ್ಗೆ ಮತ್ತು ಇದು ಎಷ್ಟು ಪರಿಣಾಮಕಾರಿ ಎಂಬ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ ಎಂದು ಆರೋಗ್ಯ ಸಚಿವ ಡಾ| ಸುಧಾಕರ್ ಬೆಂಗಳೂರಿನಲ್ಲಿ ತಿಳಿಸಿದರು.
ಇದನ್ನೂ ಓದಿ:ವೃದ್ಧರೇ ಅಂತರಾಷ್ಟ್ರೀಯ ಪ್ರಯಾಣ ಮುಂದೂಡಿ : ವಿಶ್ವ ಆರೋಗ್ಯ ಸಂಸ್ಥೆಯಿಂದಲೇ ಎಚ್ಚರಿಕೆ
ಎಲ್ಲೆಲ್ಲಿ ಬೂಸ್ಟರ್ ಡೋಸ್?
ಒಮಿಕ್ರಾನ್ ರೂಪಾಂತರಿ ಆತಂಕದಿಂದಾಗಿ ಹಲವು ರಾಷ್ಟ್ರಗಳಲ್ಲಿ ಬೂಸ್ಟರ್ ಡೋಸ್ ನೀಡಲು ತೀರ್ಮಾನಿ ಸಲಾಗಿದೆ. ಇಸ್ರೇಲ್, ಕೆನಡಾ, ಬ್ರೆಜಿಲ್, ಬ್ರಿಟನ್, ಹಂಗೆರಿಯಲ್ಲಿ ಮೊದಲ ಬಾರಿಗೆ ಬೂಸ್ಟರ್ ಡೋಸ್ ನೀಡಲು ತೀರ್ಮಾನಿಸಲಾಗಿತ್ತು. ಫ್ರಾನ್ಸ್ನಲ್ಲಿ ಕಳೆದ ವಾರ ಈ ಬಗ್ಗೆ ತೀರ್ಮಾನಿಸಲಾಗಿದೆ. ಯುಎಇಯಲ್ಲಿ 3ನೇ ಡೋಸ್ ಲಸಿಕೆ ಹಾಕಲು ಮೇ ತಿಂಗಳಲ್ಲಿಯೇ ನಿರ್ಧರಿಸಲಾಗಿತ್ತು. ಚೀನ, ದಕ್ಷಿಣ ಕೊರಿಯಾಗಳಲ್ಲಿ ಮೂರನೇ ಡೋಸ್ ವಿತರಣೆ ಆರಂಭವಾಗಿದೆ.
ಮುಂಚೂಣಿ ಕಾರ್ಯಕರ್ತರಿಗೆ ಎರಡು ಡೋಸ್ ಲಸಿಕೆ ನೀಡಿ ಆರೆಂಟು ತಿಂಗಳುಗಳಾಗಿವೆ. ಈಗ ಲಸಿಕೆಯ ಸಾಮರ್ಥ್ಯ ಕಡಿಮೆ ಆಗಿರುವ ಸಾಧ್ಯತೆ ಇದೆ. ಈ ಮಧ್ಯೆ ಬೇರೆ ಬೇರೆ ರೂಪಾಂತರಿಗಳು ಕಂಡುಬರುತ್ತಿವೆ. ಈ ಹಿನ್ನೆಲೆಯಲ್ಲಿ ಬೂಸ್ಟರ್ ಡೋಸ್ ಅವಶ್ಯ.
-ಡಾ| ಸುದರ್ಶನ ಬಲ್ಲಾಳ್, ಮಣಿಪಾಲ್ ಆಸ್ಪತ್ರೆಗಳ ಅಧ್ಯಕ್ಷ
ಬೂಸ್ಟರ್ ಡೋಸ್ ಪ್ರಸ್ತುತ ನೀಡುತ್ತಿರುವ ಕೋವಿಡ್ ಲಸಿಕೆಯ ಮುಂದುವರಿದ ಭಾಗ. ಹಾಗಾಗಿ ಈ ಹಿಂದೆ ಲಸಿಕೆ ನೀಡಿದ ಮಾದರಿಯಲ್ಲೇ ಈಗ ಮತ್ತೂಂದು ಹಂತದಲ್ಲಿ ಆರಂಭವಾಗಲಿದೆ. ಇದನ್ನು ಆದ್ಯತೆ ಮೇರೆಗೆ ನೀಡಲಾಗುತ್ತದೆ.
-ಡಾ| ಎಂ.ಕೆ. ಸುದರ್ಶನ್,ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ
ಆರೋಗ್ಯ ಮುಂಚೂಣಿ ಕಾರ್ಯಕರ್ತರು ಲಸಿಕೆ ಪಡೆದಿದ್ದುದರಿಂದ 2ನೇ ಅಲೆಯ ಸಂದರ್ಭದಲ್ಲಿ ಅವರು ಸೋಂಕಿಗೆ ತುತ್ತಾಗಿ ಮೃತಪಟ್ಟಿರುವುದು ಕಡಿಮೆ. ಡಿಸೆಂಬರ್, ಜನವರಿ ಅಂತ್ಯದೊಳಗೆ ಅವರಿಗೆ ಬೂಸ್ಟರ್ ಲಸಿಕೆ ವಿತರಣೆಯಾಗಬೇಕು.
-ಡಾ| ಸಿ.ಎನ್. ಮಂಜುನಾಥ, ಜಯದೇವ ಆಸ್ಪತ್ರೆ ನಿರ್ದೇಶಕರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ