ಒಂದು ದೇಶ; ಒಂದು ಚುನಾವಣೆ ಚರ್ಚೆ
ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಘೋಷಣೆ , ಒಟ್ಟು 11ಮಸೂದೆ ಮಂಡನೆಗೆ ತೀರ್ಮಾನ
Team Udayavani, Jan 28, 2021, 7:20 AM IST
ಬೆಂಗಳೂರು: ರಾಜ್ಯ ವಿಧಾನ ಮಂಡಲ ಅಧಿವೇಶನ ಗುರುವಾರ ಆರಂಭವಾಗಲಿದೆ. ಮೊದಲ ದಿನ ರಾಜ್ಯಪಾಲ ವಜುಭಾç ವಾಲಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲಿದ್ದರೆ, ಕೊನೆಯ 2 ದಿನ “ಒಂದು ದೇಶ; ಒಂದು ಚುನಾವಣೆ’ ಬಗ್ಗೆ ಚರ್ಚೆ ನಡೆಯಲಿದೆ ಎಂದು ವಿಧಾನ ಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಬುಧವಾರ ಹೇಳಿದ್ದಾರೆ.
ಮೊದಲ ದಿನ ರಾಜ್ಯಪಾಲರ ಭಾಷಣದ ಅನಂತರ ಸಂತಾಪ ಸೂಚನೆ ನಡೆಯಲಿದೆ. ಉಳಿದ ಆರು ದಿನ ಪ್ರಶ್ನೋತ್ತರ ಹಾಗೂ ವಿವಿಧ ಚರ್ಚೆಗಳಿಗೆ ಕಲಾಪದಲ್ಲಿ ಅವಕಾಶ ಕಲ್ಪಿಸಲಾಗುವುದು. ಸದ್ಯ 11 ಮಸೂದೆಗಳು ಮಂಡನೆಗೆ ಬಂದಿದ್ದು, ಸರಕಾರ ಬೇರೆ ಮಸೂದೆ ಮಂಡನೆ ಮಾಡುವುದಿದ್ದರೆ ಶೀಘ್ರ ಕಳುಹಿಸಿ ಕೊಡುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.
ಸಾರ್ವಜನಿಕರಿಗಿಲ್ಲ ಪ್ರವೇಶ :
ಕೊರೊನಾ ನಿರ್ಬಂಧಗಳ ಹಿನ್ನೆಲೆಯಲ್ಲಿ ಈ ಬಾರಿಯೂ ಕಳೆದ ಅಧಿವೇಶನದಂತೆ ಕೊರೊನಾ ಹಿನ್ನೆಲೆಯಲ್ಲಿ ಕಲಾಪ ವೀಕ್ಷಿಸಲು ಸಾರ್ವಜನಿಕರಿಗೆ ಪ್ರವೇಶಾವಕಾಶ ಇಲ್ಲ. ಎಂದು ಕಾಗೇರಿ ಹೇಳಿದರು.
ದಿಲ್ಲಿ ಘಟನೆ ಪ್ರಜಾತಂತ್ರಕ್ಕೆ ಕಪ್ಪುಚುಕ್ಕೆ. ನಮ್ಮ ಅಗತ್ಯಗಳನ್ನು ಪೂರೈಸಿಕೊಳ್ಳಲು ಪ್ರಜಾಪ್ರಭುತ್ವದಲ್ಲಿ ಅವಕಾಶ ಇದೆ. ರೈತರ ಸಮಸ್ಯೆ ಪರಿಹರಿಸಲು ಕೇಂದ್ರ ಸರಕಾರ ಕೂಡ ಹಲವಾರು ಬಾರಿ ಮಾತುಕತೆ ನಡೆಸಿದೆ. ಆದರೆ ಮಂಗಳವಾರ ನಡೆದ ಘಟನೆ ದೇಶದ ಜನರಿಗೆ ಘಾಸಿ ಉಂಟು ಮಾಡಿದೆ. ಕೆಂಪುಕೋಟೆ ಮೇಲೆ ಬೇರೆ ಬಾವುಟ ಹಾರಿದ್ದು ಸರಿಯಲ್ಲ. – ವಿಶ್ವೇಶ್ವರ ಹೆಗಡೆ ಕಾಗೇರಿ, ಸ್ಪೀಕರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
Politics: ಅಮಿತ್ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
MUST WATCH
ಹೊಸ ಸೇರ್ಪಡೆ
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?