ದಾಖಲಾತಿ ಪರಿಶೀಲನೆಗೆ ಒಂದು ದಿನದ ಹೆಚ್ಚುವರಿ ಅವಕಾಶ
Team Udayavani, Jun 20, 2019, 3:00 AM IST
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯಲ್ಲಿ ರ್ಯಾಂಕ್ ಪಡೆದ ವಿದ್ಯಾರ್ಥಿಗಳ ದಾಖಲಾತಿ ಪರಿಶೀಲನೆಯ ದಿನಾಂಕವನ್ನು ಜೂನ್ 20ರವರೆಗೆ ವಿಸ್ತರಿಸಲಾಗಿದೆ.
ಸಿಇಟಿ-2019ನೇ ಸಾಲಿನ ದಾಖಲಾತಿ ಪರಿಶೀಲನೆ ನಿಗದಿತ ವೇಳಾಪಟ್ಟಿಯಂತೆ ಜೂನ್ 19ಕ್ಕೆ ಪೂರ್ಣಗೊಂಡಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಒಂದು ದಿನ ವಿಸ್ತರಣೆ ಮಾಡಲಾಗಿದೆ. ಅರ್ಹ ಅಭ್ಯರ್ಥಿಗಳು ಸಂಬಂಧಪಟ್ಟ ಸಹಾಯವಾಣಿ ಕೇಂದ್ರದಲ್ಲಿ ದಾಖಲಾತಿ ಪರಿಶೀಲನೆ ಮಾಡಿಸಿಕೊಳ್ಳಬಹುದಾಗಿದೆ.
ದಾಖಲಾತಿ ಪರಿಶೀಲನೆಯ ನಂತರವೇ ಅಭ್ಯರ್ಥಿಗಳು ಸೀಟು ಹಂಚಿಕೆಗೆ ಇಚ್ಛೆ ಅಥವಾ ಆಯ್ಕೆಯನ್ನು ನಮೂದಿಸಲು ಅರ್ಹತೆ ಪಡೆಯುತ್ತಾರೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.