ಸಹಕಾರ ಸಚಿವ ಪುತ್ರನಿಗೆ ಬ್ಲ್ಯಾಕ್‌ ಮೇಲ್‌: ಜ್ಯೋತಿಷಿ ಪುತ್ರ ಸಿಸಿಬಿ ಪೊಲೀಸ್‌ ವಶಕ್ಕೆ


Team Udayavani, Jan 10, 2022, 7:10 AM IST

ಸಹಕಾರ ಸಚಿವ ಪುತ್ರನಿಗೆ ಬ್ಲ್ಯಾಕ್‌ ಮೇಲ್‌: ಜ್ಯೋತಿಷಿ ಪುತ್ರ ಸಿಸಿಬಿ ಪೊಲೀಸ್‌ ವಶಕ್ಕೆ

ಸಾಂದರ್ಭಿಕ ಚಿತ್ರ.

ಬೆಂಗಳೂರು: ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್‌ ಅವರ ಪುತ್ರ ನಿಶಾಂತ್‌ ಅವರಿಗೆ ಬ್ಲ್ಯಾಕ್‌ ಮೇಲ್‌ ಮಾಡಿ ಕೋಟ್ಯಂತರ ರೂ. ಬೇಡಿಕೆ ಇಟ್ಟ ಆರೋಪದಲ್ಲಿ ಖ್ಯಾತ ಜ್ಯೋತಿಷಿಯೊಬ್ಬರ ಪುತ್ರನನ್ನು ಬಂಧಿಸಲಾಗಿದೆ.

ರಾಹುಲ್‌ ಭಟ್‌ (23) ಬಂಧಿತ ಆರೋಪಿ. ಬೆಂಗಳೂರು ಕೇಂದ್ರ ಅಪರಾಧ ವಿಭಾಗದ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಹೆಚ್ಚಿನ ವಿಚಾರಣೆಗಾಗಿ 5 ದಿನಗಳ ಕಾಲ ವಶಕ್ಕೆ ಪಡೆದಿದ್ದಾರೆ. ಗೋವಾದಲ್ಲಿ ತಲೆಮರೆಸಿಕೊಂಡಿದ್ದ ಈತನ ಸ್ನೇಹಿತ ರಾಕೇಶ್‌ ಅಪ್ಪಣ್ಣನವರ್‌ನನ್ನು ವಶಕ್ಕೆ ಪಡೆಯಲಾಗಿದೆ. ರಾಹುಲ್‌ಗೆ ಸಹಕಾರ ನೀಡಿದ ಆರೋಪದ ಮೇಲೆ ಸ್ನೇಹಿತ ರಾಕೇಶ್‌ ಶೆಟ್ಟಿ ಮತ್ತು ಸಚಿವರ ಪುತ್ರ ನಿಶಾಂತ್‌ನ ಮಾಜಿ ಸಹಾಯಕ ರವಿ ಅವರನ್ನು ವಿಚಾರಣೆ ನಡೆಸಿದ್ದಾರೆ.

25 ಕೋಟಿ ರೂ.ಗೆ ಬೇಡಿಕೆ?
ನಿಶಾಂತ್‌ ಡಿ. 27ರಂದು ಸೈಬರ್‌ ಕ್ರೈಂನವರಿಗೆ ದೂರು ನೀಡಿದ್ದಾರೆ. ಮೊದಲಿಗೆ ಆರೋಪಿಗಳು ಡಿ. 25ರ ಸಂಜೆ ಸಚಿವರ ಆಪ್ತ ಕಾರ್ಯದರ್ಶಿ ಶ್ರೀನಿವಾಸ ಗೌಡ ಮತ್ತು ಆಪ್ತ ಸಹಾಯಕ ಭಾನುಪ್ರಕಾಶ್‌ ಅವರ ವಾಟ್ಸ್‌ಆ್ಯಪ್‌ ಗಳಿಗೆ ಬ್ಲ್ಯಾಕ್‌ಮೇಲ್‌ ಸಂದೇಶ ಕಳಿಸಿದ್ದಾರೆ.

ಇದಕ್ಕೆ ವಿದೇಶಿ (ಬ್ರಿಟನ್‌) ನೋಂದಣಿ ಮೊಬೈಲ್‌ ನಂಬರ್‌ ಬಳಸಿದ್ದಾರೆ. “25 ಕೋ. ರೂ.  ಕೊಡಬೇಕು. ಇಲ್ಲವಾದರೆ ನಿಮ್ಮ ಸಚಿವರ ಪುತ್ರ ನಿಶಾಂತ್‌ ಮಹಿಳೆ ಜತೆ ಇರುವ ಅಶ್ಲೀಲ ವೀಡಿಯೋಗಳು ಮತ್ತು ಫೋಟೋಗಳನ್ನು ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ಹರಿಯಬಿಡುತ್ತೇವೆ’ ಎಂದು ಬೆದರಿಕೆ ಹಾಕಿದ್ದಾರೆ.

ಇದರಿಂದ ಗಾಬರಿಗೊಂಡ ಶ್ರೀನಿವಾಸ ಗೌಡ ಮತ್ತು ಭಾನುಪ್ರಕಾಶ್‌ ಕೂಡಲೇ ಸಚಿವರ ಗಮನಕ್ಕೆ ತಂದಿದ್ದಾರೆ. ಎಚ್ಚೆತ್ತ ಸಚಿವರು, ಮತ್ತವರ ಪುತ್ರ ಸೈಬರ್‌ ಕ್ರೈಂ ಪೊಲೀಸ್‌ ಠಾಣೆಗೆ ನೀಡಿದ್ದರು.

ಇದನ್ನು ಗಂಭೀರವಾಗಿ ಪರಿಗಣಿಸಿದ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದಾಗ ರಾಹುಲ್‌ ವಿದೇಶಿ ನೋಂದಣಿಯ ಸಿಮ್‌ಕಾರ್ಡ್‌ ಬಳಕೆ ಮಾಡಿ ಬ್ಲ್ಯಾಕ್‌ ಮಾಡುತ್ತಿರುವುದು ಪತ್ತೆಯಾಗಿತ್ತು. ವೀಡಿಯೋದ ಅಸಲಿಯತ್ತು ಏನು ಎಂಬ ಬಗ್ಗೆ ತನಿಖೆಗೆ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.

ಇದನ್ನೂ ಓದಿ:ಹಿಮವರ್ಷ : ರಾಜ್ಯದ 400ಕ್ಕೂ ಅಧಿಕ ಪ್ರಮುಖ ರಸ್ತೆಗಳು ಬಂದ್‌

ಶಾಸಕರ ಪುತ್ರಿಯ ಸಿಮ್‌ ಕಾರ್ಡ್‌ ಬಳಕೆ
ಸಿಮ್‌ ಕಾರ್ಡ್‌ನ ಜಾಡು ಹಿಡಿದು ಹೊರಟಾಗ ಅದು ವಿಜಯಪುರ ಜಿಲ್ಲೆಯ ಇಂಡಿ ವಿಧಾನಸಭಾ ಕ್ಷೇತ್ರದ ಶಾಸಕ ಯಶವಂತರಾಯ ಗೌಡ ಪಾಟೀಲ್‌ ಅವರ ಪುತ್ರಿಯ ಹೆಸರಿನಲ್ಲಿರುವುದು ಗೊತ್ತಾಗಿದ್ದು ಇದು ಕುತೂಹಲಕ್ಕೆ ಕಾರಣವಾಗಿದೆ. ಶಾಸಕರ ಪುತ್ರಿ ವಿದೇಶಕ್ಕೆ ತೆರಳುವ ಮುನ್ನ ತನ್ನ ಸಿಮ್‌ಕಾರ್ಡ್‌ ಅನ್ನು ವಿಜಯಪುರದ ರಾಕೇಶ್‌ ಅಪ್ಪಣ್ಣನವರ್‌ಗೆ ಕೊಟ್ಟಿದ್ದರು. ಇತ್ತೀಚೆಗೆ ವಿಚಾರವೊಂದಕ್ಕೆ ಸಂಬಂಧಿಸಿದಂತೆ ರಾಕೇಶ್‌ ಅಪ್ಪಣ್ಣನವರ್‌ ಶಾಸಕರ ಪುತ್ರಿಯಿಂದ ಒಟಿಪಿ ಪಡೆದುಕೊಂಡಿದ್ದ ಎಂದು ಗೊತ್ತಾಗಿದೆ.

ಅದೇ ನಂಬರ್‌ನಿಂದಲೇ ಆರೋಪಿಗಳು ಸಚಿವರ ಪುತ್ರನಿಗೆ ಬ್ಲ್ಯಾಕ್‌ಮೇಲ್‌ ಮಾಡಿರುವುದು ಗೊತ್ತಾಗಿದೆ. ಆದರೆ ಇದುವರೆಗಿನ ತನಿಖೆಯಲ್ಲಿ ಶಾಸಕರ ಪುತ್ರಿಯ ಪಾತ್ರ  ನೇರವಾಗಿ ಕಂಡು ಬಂದಿಲ್ಲ. ಅವರ ಸಿಮ್‌ಕಾರ್ಡ್‌ ಅನ್ನು ರಾಕೇಶ್‌ ದುರ್ಬಳಕೆ ಮಾಡಿಕೊಂಡಿದ್ದಾನೆ ಎಂದು ಸಿಸಿಬಿ  ಮೂಲಗಳು ತಿಳಿಸಿವೆ.

ಸಿಸಿಬಿ ಅಧಿಕಾರಿಗಳು ಶಾಸಕ ಯಶವಂತರಾಯ ಗೌಡ ಪಾಟೀಲ್‌ಗೆ ಕರೆ ಮಾಡಿ ಕೆಲವೊಂದು ಮಾಹಿತಿ ಪಡೆದುಕೊಂಡಿದ್ದಾರೆ. ಈ ವೇಳೆ ಶಾಸಕರು, ಪುತ್ರಿ ವಿದೇಶಕ್ಕೆ ಹೋಗುವ ಮೊದಲು ಸ್ನೇಹಿತ ರಾಕೇಶ್‌ ಅಪ್ಪಣ್ಣನವರ್‌ಗೆ ಸಿಮ್‌ಕಾರ್ಡ್‌ ನೀಡಿರುವುದು ಹೌದು, ಆದರೆ ರಾಹುಲ್‌ ಭಟ್‌ನ ಪರಿಚಯ ಆಕೆಗಿಲ್ಲ. ತನಿಖೆಗೆ ಸಹಕಾರ ನೀಡುತ್ತೇವೆ ಎಂದು ಹೇಳಿದ್ದಾರೆ ಎನ್ನಲಾಗಿದೆ.

ದುರ್ಬಳಕೆ
ರಾಕೇಶ್‌ ಅಪ್ಪಣ್ಣನವರ್‌ ಹಾಗೂ ಶಾಸಕರ ಪುತ್ರಿ ಬಾಲ್ಯ ಸ್ನೇಹಿತರು. ರಾಕೇಶ್‌ ತನ್ನ ಉದ್ಯಮದ ವ್ಯವಹಾರಕ್ಕಾಗಿ ಸ್ನೇಹಿತೆಯ ಸಿಮ್‌ಕಾರ್ಡ್‌ ಪಡೆದುಕೊಂಡಿದ್ದಾನೆ. ಇತ್ತೀಚೆಗೆ ಆ ಸಿಮ್‌ನಂಬರ್‌ನಲ್ಲಿ ವಾಟ್ಸ್‌ಆ್ಯಪ್‌ ಸೃಷ್ಟಿಸಿ, ಆಕೆಯಿಂದಲೇ ಒಟಿಪಿ ಪಡೆದುಕೊಂಡಿದ್ದಾನೆ. ಬಳಿಕ ಈ ಮೊಬೈಲ್‌ ಅನ್ನು ರಾಹುಲ್‌ಗೆ ಕೊಟ್ಟಿದ್ದಾನೆ. ಈತ ದುರ್ಬಳಕೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ.

ಮಾಜಿ ಸಹಾಯಕನ ಮೇಲೆ ಅನುಮಾನ
ತಮಗೆ ಸಹಾಯಕನಾಗಿದ್ದ ರವಿ ಎನ್ನುವ ವ್ಯಕ್ತಿಯೇ ಕೃತ್ಯಕ್ಕೆ ಸಹಕಾರ ನೀಡಿದ್ದಾನೆ ಎಂದು ನಿಶಾಂತ್‌ ಅನುಮಾನ ವ್ಯಕ್ತಪಡಿಸಿದ್ದರು.  ಈ ಹಿಂದೆ ನಿಶಾಂತ್‌ ಸಾರ್ವಜನಿಕ ಕಾರ್ಯಕ್ರಮಗಳ ಫೋಟೋ ಹಾಗೂ ವಿಡಿಯೋ ಸೆರೆ ಹಿಡಿದು ಸಾಮಾಜಿಕ ಜಾಲತಾಣಕ್ಕೆ ಹಾಕುತ್ತಿದ್ದ. ಈಗ ಅವರ ಬಳಿ ಕೆಲಸ ಬಿಟ್ಟಿದ್ದಾನೆ. ಹೀಗಾಗಿ ಆತನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದಾಗ ಪ್ರಾಥಮಿಕವಾಗಿ ಯಾವುದೇ ಆರೋಪ ಕಂಡು ಬಂದಿಲ್ಲ. ಸದ್ಯ ಎಚ್ಚರಿಕೆ ನೀಡಿ ಆತನನ್ನು ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಘಟನೆ ಬಗ್ಗೆ ನನ್ನ ಮಗಳನ್ನು ವಿಚಾರಿಸಿದೆ. ಅವಳು ಸ್ನೇಹಿತನೊಬ್ಬನಿಗೆ ಕ್ಲೈಂಟ್‌ಗೆ ಬೇಕು ಅಂತ ಸಿಮ್‌ ಕೇಳಿದ್ದಕ್ಕೆ ಕೊಟ್ಟಿದ್ದಾಳೆ. ಆತ ರಾಹುಲ್‌ ಭಟ್‌ಗೆ ಸಿಮ್‌ ಕೊಟ್ಟಿದ್ದಾನೆ. ಸಚಿವ ಸೋಮಶೇಖರ್‌ ಅವರನ್ನೂ ಭೇಟಿ ಮಾಡಿ, ಸೂಕ್ತ ತನಿಖೆ ಮಾಡಿಸುವಂತೆ ಮನವಿ ಮಾಡಿದ್ದೇನೆ.
– ಯಶವಂತರಾಯ ಗೌಡ ಪಾಟೀಲ್‌, ಇಂಡಿ ಕ್ಷೇತ್ರದ ಶಾಸಕ

ನಮ್ಮ ಪಿಎಸ್‌ ಮತ್ತು ಪಿಎಗೆ ಫೋನ್‌ ಮಾಡಿ ಸೆಟಲ್‌ಮೆಂಟ್‌ ಮಾಡಿಕೊಳ್ಳುವಂತೆ ಪದೇಪದೆ ಮೆಸೇಜ್‌ ಮಾಡಿದ್ದರು. ಈ ಬಗ್ಗೆ ದೂರು ಕೊಡುವಂತೆ ಮಗನಲ್ಲಿ ಹೇಳಿದ್ದೆ. ನನ್ನ ತೇಜೋ ವಧೆಗಾಗಿ ಮಗನಿಗೆ ಬ್ಲ್ಯಾಕ್‌ವೆುàಲ್‌ ಮಾಡುತ್ತಿದ್ದಾರೆಯೇ ಎಂದು ಪತ್ತೆಹಚ್ಚುವಂತೆ ಪೊಲೀಸರಲ್ಲಿ ಮನವಿ ಮಾಡಿದ್ದೇನೆ.
– ಎಸ್‌.ಟಿ. ಸೋಮಶೇಖರ್‌,
ಸಹಕಾರ ಸಚಿವ

ಟಾಪ್ ನ್ಯೂಸ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

ಶಿವಮೊಗ್ಗ: ಅಪ್ಪ ಮಕ್ಕಳ ಶಿಕಾರಿ ನಾನು ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿವಮೊಗ್ಗ: ಅಪ್ಪ ಮಕ್ಕಳ ಶಿಕಾರಿ ನಾನು ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.