ಕೋವಿಡ್ ನಿಂದ ಮೃತಪಟ್ಟವರ ಕುಟುಂಬಗಳಿಗೆ ಒಂದು ಲಕ್ಷ ರೂ ಪರಿಹಾರ: ಸಿಎಂ ಬಿಎಸ್ ವೈ
Team Udayavani, Jun 14, 2021, 1:16 PM IST
ಬೆಂಗಳೂರು: ಕೋವಿಡ್ -19 ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಕುಟುಂಬಕ್ಕೆ ಒಂದು ಲಕ್ಷ ರೂ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಸುದ್ದಿಗಾರರಿಗೆ ಈ ಬಗ್ಗೆ ಮಾಹಿತಿ ನೀಡಿದ ಅವರು, ಕೋವಿಡ್ ನಿಂದ ಮೃತಪಟ್ಟವರ ಕುಟುಂಬಗಳು ಸಂಕಷ್ಟಕ್ಕೀಡಾಗಿವೆ. ಹೀಗಾಗಿ ಬಿಪಿಎಲ್ ಕುಟುಂಬಗಳಿಗೆ ಒಂದು ಲಕ್ಷ ರೂ ಪರಿಹಾರ ನೀಡಲು ನಿರ್ಧರಿಸಿದ್ದೇವೆ ಎಂದರು.
ಬಿಪಿಎಲ್ ಕುಟುಂಬ ಗಳಲ್ಲಿ ಕೋವಿಡ್ ಸೋಂಕಿನಿಂದ ವಯಸ್ಕರು ಮೃತ ಪಟ್ಟಿದ್ದರೆ ಒಂದು ಕುಟುಂಬಕ್ಕೆ ಒಬ್ಬರಂತೆ ಒಂದು ಲಕ್ಷ ಪರಿಹಾರ ನೀಡಲಾಗುತ್ತದೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು.
ರಾಜ್ಯದ ಹಣಕಾಸಿನ ಪರಿಸ್ಥಿತಿ ಇರೋದರಲ್ಲಿ ಉತ್ತಮವಾಗಿದೆ. ಇದಕ್ಕಾಗಿ ಸುಮಾರು 250-300ಕೋ ಖರ್ಚಾಗುತ್ತದೆ. ಈಗಾಗಲೇ ಸುಮಾರು 25 ಸಾವಿರ ಬಿಪಿಎಲ್ ಕುಟುಂಬದ ಕೆಲವರು ಮೃತ ಪಟ್ಡಿದ್ದಾರೆ. ಬಿಪಿಎಲ್ ಕಾರ್ಡ್ ಹೊಂದಿರುವ ವಯಸ್ಕರು ಮೃತಪಟ್ಟಿರುವ ಕುಟುಂಬಕ್ಕೆ ಒಂದು ಲಕ್ಷ ಪರಿಹಾರ ಒಂದು ಕುಟುಂಬದ ಒಬ್ಬರಿಗೆ ಮಾತ್ರ ಪರಿಹಾರ ನೀಡಲಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CCTV: ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್… ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ
Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ ಕಂದಕೂರು
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್