ಒಂದು ತಿಂಗಳ ಹಿಂದೆ ಜೆಡಿಎಸ್ನಲ್ಲೇ ಉಳಿಯುವ ಮನಸ್ಸಿತ್ತು!;ಜಮೀರ್
Team Udayavani, Aug 1, 2017, 4:50 PM IST
ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ನನ್ನ ರಾಜಕೀಯ ಗುರು. ಅವರ ಋಣ ನನ್ನ ಮೇಲಿದೆ. ಒಂದು ತಿಂಗಳ ಹಿಂದೆ ಜೆಡಿಎಸ್ನಲ್ಲೇ ಉಳಿಯುವ ಮನಸ್ಸಿತ್ತು, ಈಗ ಇಲ್ಲ ಎಂದು ಬಂಡಾಯ ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
ಮಂಗಳವಾರ 51 ನೇ ಜನ್ಮ ದಿನಾಚರಣೆ ಆಚರಿಸಿಕೊಂಡ ಜಮೀರ್ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ‘ನಮಗೆ ಒಂದು ತಿಂಗಳ ಹಿಂದೆ ಜೆಡಿಎಸ್ನಲ್ಲಿ ಉಳಿದುಕೊಳ್ಳುವ ಮನಸ್ಸಿತ್ತು, ಈಗ ಇಲ್ಲ. ನಮ್ಮ ಮಾಜಿ ಅಣ್ಣ ಕುಮಾರಸ್ವಾಮಿ ಅವರು ಲೂಸ್ ಟಾಕ್ ಹೇಳಿಕೆ ನೀಡಿ ನಮ್ಮ ಮನಸ್ಸನ್ನು ಹಾಳು ಮಾಡಿದರು. ಮುಂದೆ ಜೆಡಿಎಸ್ಗೆ ಮರಳುವ ಪ್ರಶ್ನೆಯೇ ಇಲ್ಲ’.
‘ನನಗೆ ಆಯ್ಕೆ ಕಾಂಗ್ರೆಸ್ ಮಾತ್ರವಾಗಿತ್ತು, ಕೋಮುವಾದಿ ಬಿಜೆಪಿಗೆ ನಾನು ಸೇರ್ಪಡೆ ಆಗುವುದಿಲ್ಲ’ ಎಂದರು.
ಇದೇ ವೇಳೆ ‘ನನ್ನ ರಾಜಕೀಯ ಗುರು ದೇವೇಗೌಡ, ಕುಮಾರಸ್ವಾಮಿ ಅಲ್ಲ. ದೇವೇಗೌಡರ ವಿರುದ್ಧ ಯಾವುದೇ ಹೇಳಿಕೆ ನೀಡುವುದಿಲ್ಲ’ ಎಂದರು.
ಕೆಲ ದಿನಗಳ ಹಿಂದೆ ಜಮೀರ್ ‘ಚಾಮರಾಜ ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಗೆದ್ದರೆ ನನ್ನತಲೆ ಕತ್ತರಿಸಿ ಮಾಧ್ಯಮದವರ ಕೈಯಲ್ಲಿ ನೀಡುತ್ತೇನೆ’ ಎಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು