ರಾಜ್ಯದಲ್ಲಿ 667 ಮಂದಿಗೆ ಒಬ್ಬ ಪೊಲೀಸ್‌ ; ಪೊಲೀಸ್‌ ಇಲಾಖೆಯಲ್ಲಿ ಸಿಬಂದಿ ಕೊರತೆ


Team Udayavani, Nov 16, 2022, 7:20 AM IST

ರಾಜ್ಯದಲ್ಲಿ 667 ಮಂದಿಗೆ ಒಬ್ಬ ಪೊಲೀಸ್‌ ; ಪೊಲೀಸ್‌ ಇಲಾಖೆಯಲ್ಲಿ ಸಿಬಂದಿ ಕೊರತೆ

ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆಯಲ್ಲಿ 15,099 ಹುದ್ದೆಗಳು ಖಾಲಿ ಇದ್ದು, 667 ನಾಗರಿಕರಿಗೆ ಒಬ್ಬರಂತೆ ಪೊಲೀಸ್‌ ಇದ್ದಾರೆ.ರಾಜ್ಯದ 6.61 ಕೋಟಿ ಜನ ಸಂಖ್ಯೆಗೆ ಕೇವಲ 1,12,429 ಪೊಲೀಸ್‌ ಹುದ್ದೆಗಳು ಮಂಜೂರಾಗಿದ್ದು, ಈ ಪೈಕಿ 97,330 ಸಿಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಜನಸಂಖ್ಯೆಗೆ ಹೋಲಿಸಿದರೆ ಪೊಲೀಸರ ಸಂಖ್ಯೆ ತೀರಾ ಕಡಿಮೆಯಿದೆ. ಪರಿಣಾಮವಾಗಿ ಅಪರಾಧ ಪ್ರಕರಣಗಳ ಪ್ರಮಾಣ ವರ್ಷದಿಂದ ವರ್ಷಕ್ಕೆ ಶೇ. 5ರಿಂದ 10ರಷ್ಟು ಏರಿಕೆಯಾಗುತ್ತಿದೆ.

ಮಂಜೂರಾದ ಹುದ್ದೆಗಳಿಗೂ ಕರ್ತವ್ಯದಲ್ಲಿರುವ ಪೊಲೀಸರ ಸಂಖ್ಯೆಗೂ ಅಜಗಜಾಂತರವಿದೆ. ಸರಕಾರದ ನೇಮಕಾತಿ ಪ್ರಕ್ರಿಯೆ ವಿಳಂಬವಾಗುತ್ತಿದೆ. ರಾಷ್ಟ್ರೀಯ ಮಾನದಂಡದ ಪ್ರಕಾರ ದೇಶದ 1 ಲಕ್ಷ ಜನರಿಗೆ 198 ಪೊಲೀಸರು ಇರಬೇಕು; ಆದರೆ ರಾಜ್ಯದಲ್ಲಿ ಇಷ್ಟು ಜನಸಂಖ್ಯೆಗೆ 168 ಪೊಲೀಸರಿದ್ದಾರೆ. 86,702 ಪುರುಷ ಪೊಲೀಸ್‌ ಸಿಬಂದಿಯಿದ್ದರೆ, 10,628 ಮಹಿಳಾ ಸಿಬಂದಿ ಇದ್ದಾರೆ.

ಐಪಿಎಸ್‌ ಹುದ್ದೆಗಳೂ ಖಾಲಿ
ಐಜಿಪಿ, ಎಡಿಜಿಪಿ, ಎಸ್‌ಪಿ ಸೇರಿ ಐಪಿಎಸ್‌ ಮಟ್ಟದ 38 ಹುದ್ದೆಗಳು ಖಾಲಿ ಇವೆ. ಹಲವು ವರ್ಷಗಳಿಂದ ಖಾಲಿಯಿರುವ 10,449 ಕಾನ್‌ಸ್ಟೆಬಲ್‌, 1,100 ಪಿಎಸ್‌ಐ ಹುದ್ದೆ ಭರ್ತಿ ಮಾಡುವತ್ತ ಸರಕಾರ ಗಮನಹರಿಸಿಲ್ಲ. ಕಾನೂನು ಸುವ್ಯವಸ್ಥೆ ವಿಭಾಗದಲ್ಲಿ 1,254 ಇನ್‌ಸ್ಪೆಕ್ಟರ್‌ಗಳು ಕಾರ್ಯ ನಿರ್ವಹಿಸುತ್ತಿದ್ದರೆ, 23 ಹುದ್ದೆ ಖಾಲಿ ಇದೆ. ಡಿಟೆಕ್ಟಿವ್‌ ಹಾಗೂ ಎಸ್‌ಡಿಆರ್‌ಆರ್‌ನಲ್ಲಿ ಮಂಜೂರಾಗಿರುವ 48 ಇನ್‌ಸ್ಪೆಕ್ಟರ್‌ ಹುದ್ದೆಗಳಿಗೆ ನೇಮಕಾತಿಯೇ ನಡೆಸಿಲ್ಲ. ಎಫ್ಪಿಬಿಯಲ್ಲಿ 30 ಇನ್‌ಸ್ಪೆಕ್ಟರ್‌ ನೇಮಕ ಮಾಡಬೇಕಿದೆ.

ತಳಹಂತದ ಸಿಬಂದಿ ಕೊರತೆ
ಅಪರಾಧ ಪ್ರಕರಣ ನಡೆದ ಕೂಡಲೇ ಸ್ಥಳಕ್ಕೆ ತೆರಳಿ ಪ್ರಕರಣದ ಸಂಪೂರ್ಣ ಮಾಹಿತಿ ಕಲೆ ಹಾಕುವುದು, ತನಿಖೆ ವೇಳೆ ಸಾಕ್ಷ್ಯ ಕಲೆ ಹಾಕು ವುದು, ಆರೋಪಿಗಳನ್ನು ಬಂಧಿಸುವುದು ಮತ್ತಿತರ ಮಹತ್ತರ ವಾದ ಜವಾಬ್ದಾರಿಗಳು ಕಾನ್‌ಸ್ಟೆಬಲ್‌ ಹಾಗೂ ಹೆಡ್‌ ಕಾನ್‌ಸ್ಟೆಬಲ್‌ಗ‌ಳ ಮೇಲಿರುತ್ತದೆ. ಇವರು ಕಲೆಹಾಕುವ ಮಾಹಿತಿ ಆಧರಿಸಿ ಸಬ್‌ಇನ್‌ಸ್ಪೆಕ್ಟರ್‌ ಗಳು ಸಂಪೂರ್ಣ ತನಿಖೆ ನಡೆಸಿ ಇನ್‌ಸ್ಪೆಕ್ಟರ್‌ ಅಥವಾ ಅದಕ್ಕಿಂತ ಮೇಲಿನ ಅಧಿಕಾರಿಗಳಿಗೆ ಪ್ರಕರಣದ ವರದಿ ಸಲ್ಲಿಸುತ್ತಾರೆ. ಕೆಳಹಂತದ ಸಿಬಂದಿ ಕೊರತೆಯಿಂದಾಗಿ ರಾಜ್ಯದಲ್ಲಿ ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕಲು ಸಾಧ್ಯವಾಗುತ್ತಿಲ್ಲ.

ಪೊಲೀಸ್‌ ಸಿಬಂದಿ ಕೊರತೆ ಹೋಗಲಾಡಿಸುವ ನಿಟ್ಟಿನಲ್ಲಿ ಖಾಲಿ ಇರುವ 3.5 ಸಾವಿರ ಎಪಿಸಿ ಹಾಗೂ 1,500 ಸಿಪಿಸಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಆದಷ್ಟು ಬೇಗ ಬಾಕಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು.
– ಡಾ| ಎಂ.ಎ. ಸಲೀಂ, ಎಡಿಜಿಪಿ (ಆಡಳಿತ)

-ಅವಿನಾಶ್‌ ಮೂಡಂಬಿಕಾನ

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.