ಶೀಘ್ರವೇ ರಾಜ್ಯಾದ್ಯಂತ ಹಾಲಿಗೆ ಏಕರೂಪ ದರ
Team Udayavani, Oct 22, 2021, 6:09 AM IST
ಗೋಕಾಕ: ಕೆಎಂಎಫ್ಗೆ ಒಳಪಡುವ ಕೆಲವು ಜಿಲ್ಲಾ ಹಾಲು ಒಕ್ಕೂಟಗಳ ಹಾಲಿನ ದರದಲ್ಲಿ ವ್ಯತ್ಯಾಸಗಳಿದ್ದು, ರಾಜ್ಯದಲ್ಲಿರುವ ಎಲ್ಲ ಒಕ್ಕೂಟಗಳಲ್ಲೂ ಏಕರೂಪ ದರ ಜಾರಿಗೊಳಿಸುವ ಚಿಂತನೆ ನಡೆಸಿದ್ದೇವೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಒಕ್ಕೂಟದ ಕಲ್ಯಾಣ ಸಂಘದಿಂದ ಫಲಾನುಭವಿಗಳಿಗೆ ಚೆಕ್ ವಿತರಿಸಿ ಮಾತನಾಡಿದ ಅವರು ರೈತರ ಹಿತದೃಷ್ಟಿಯಿಂದ ಎಲ್ಲ ಒಕ್ಕೂಟಗಳಲ್ಲಿ ಒಂದೇ ದರ ನಿಗದಿ ಮಾಡುವ ನಿಟ್ಟಿನಲ್ಲಿ ನವೆಂಬರ್ ಅಥವಾ ಡಿಸೆಂಬರ್ನಲ್ಲಿ ನಡೆಯಲಿರುವ ಮಹಾಮಂಡಳಿಯ ಸಾಮಾನ್ಯ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದರು.