ಏಕಕಾಲದಲ್ಲಿ ಚುನಾವಣೆ ಚಿಂತನೆ ಸ್ವಾಗತಾರ್ಹ
Team Udayavani, Oct 7, 2017, 9:49 AM IST
ಬೆಂಗಳೂರು: “ಲೋಕಸಭೆ ಮತ್ತು ರಾಜ್ಯಗಳ ವಿಧಾನಸಭಾ ಚುನಾವಣೆಯನ್ನು ಏಕಕಾಲದಲ್ಲಿ ನಡೆಸುವ ಸಂಬಂಧ ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ಚಿಂತನೆ ಸ್ವಾಗತಾರ್ಹ’ ಎಂದು ರಾಜ್ಯ ಬಿಜೆಪಿ ವಕ್ತಾರ ಎಸ್.ಸುರೇಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.
ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಲೋಕಸಭೆ ಹಾಗೂ ಎಲ್ಲಾ ರಾಜ್ಯಗಳ ವಿಧಾನಸಭಾ ಚುನಾವಣೆಯನ್ನು ಏಕಕಾಲದಲ್ಲಿ ನಡೆಸುವ ಸಂಬಂಧ ಕೇಂದ್ರ ಸರ್ಕಾರ ಹಾಗೂ ಎಲ್ಲ ರಾಜಕೀಯ ಪಕ್ಷಗಳು ಗಂಭೀರವಾಗಿ ಚರ್ಚೆ ನಡೆಸಿ, ಒಮ್ಮತದ ತೀರ್ಮಾನಕ್ಕೆ ಬರುವಂತಾಗಬೇಕು’ ಎಂದು ಹೇಳಿದರು. 1967ರ ವರೆಗೂ ಚುನಾವಣೆಗಳು ಒಟ್ಟಾಗಿಯೇ ನಡೆಯುತ್ತಿದ್ದವು. ನಂತರ ಮಧ್ಯಂತರ ಚುನಾವಣೆಗಳು ಆರಂಭವಾದವು. ಕರ್ನಾಟಕದಲ್ಲಿ 1999 ಹಾಗೂ 2004ರಲ್ಲಿ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆ ಏಕಕಾಲದಲ್ಲಿ ನಡೆದಿದೆ. ಮೊದಲ ಹಂತದಲ್ಲಿ ಲೋಕಸಭಾ ಚುನಾವಣೆಗೆ ಸಮೀಪದಲ್ಲಿ ಅವಧಿ ಅಂತ್ಯಗೊಳ್ಳುವ ರಾಜ್ಯಗಳ ವಿಧಾನಸಭಾ ಚುನಾವಣೆಯನ್ನು ಒಟ್ಟಾಗಿ ಮಾಡಬಹುದು ಎಂದು ಸಲಹೆ ನೀಡಿದರು. ದೇಶದಲ್ಲಿ ಚುನಾವಣಾ ಸುಧಾರಣೆಗೆ ಅನೇಕ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ಮಾಡುವುದರಿಂದ ಇನ್ನಷ್ಟು ಸುಧಾರಣೆ ತರಲು ಸಾಧ್ಯವಿದೆಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ