Onion Price Hike; ಕೈಕೊಟ್ಟ ಫ‌ಸಲು: ಈರುಳ್ಳಿ ದುಬಾರಿ ಸಾಧ್ಯತೆ


Team Udayavani, Aug 15, 2023, 7:30 AM IST

Onion Price Hike; ಕೈಕೊಟ್ಟ ಫ‌ಸಲು: ಈರುಳ್ಳಿ ದುಬಾರಿ ಸಾಧ್ಯತೆ

ಬೆಂಗಳೂರು: ಟೊಮೇಟೊ ಬಳಿಕ ಈಗ ಈರುಳ್ಳಿ ದರ ಶ್ರೀಸಾಮಾನ್ಯನ ಜೇಬಿಗೆ ಕತ್ತರಿ ಹಾಕಲು ಹೊರಟಿದೆ. ರಾಜ್ಯದ ಕೆಲವು ಪ್ರದೇಶಗಳಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದಾಗಿ ಫ‌ಸಲು ಕೈಕೊಟ್ಟಿರುವುದು, ಕೆಲವು ಕಡೆಗಳಲ್ಲಿ ಮಳೆಯಿಲ್ಲದೆ ಸರಿಯಾಗಿ ಬಿತ್ತನೆ ಆಗದಿರುವುದು ಇದಕ್ಕೆ ಕಾರಣ. ಎಪಿಎಂಸಿಯಲ್ಲಿ ಇದುವರೆಗೆ ಪ್ರತಿ ಕೆ.ಜಿ. ಈರುಳ್ಳಿ ಸರಾಸರಿ 25 ರೂ.ಗಳಿಗೆ ಮಾರಾಟವಾಗುತ್ತಿದ್ದದ್ದು ಮಂಗಳವಾರ ಕೆ.ಜಿ.ಗೆ 30ರಿಂದ 35 ರೂ.ಗಳಿಗೇರಿದೆ. ಉಳಿದ ಸಾಮಾನ್ಯ ಮಾರುಕಟ್ಟೆಗಳಲ್ಲಿ, ಅಂಗಡಿಗಳಲ್ಲಿ ಪ್ರತೀ ಕೆ.ಜಿ. ದಪ್ಪ ಈರುಳ್ಳಿಗೆ 30 ರೂ. ಇದ್ದದ್ದು 40ರಿಂದ 45 ರೂ.ಗಳಿಗೇರಿದೆ.

ಮಂಗಳವಾರ ಮಹಾರಾಷ್ಟ್ರದ ಅಹ್ಮದ್‌ ನಗರ ಜಿಲ್ಲೆಯಿಂದ ಬೆಂಗಳೂರಿಗೆ ಪೂರೈಕೆ ಆದ ದೊಡ್ಡ ಗಾತ್ರದ ಉತ್ತಮ ಗುಣಮಟ್ಟದ ಈರುಳ್ಳಿ ಕ್ವಿಂಟಾಲ್‌ಗೆ 2,800ರಿಂದ 3 ಸಾ. ರೂ. ವರೆಗೆ ಬಿಕರಿಯಾ ಯಿತು. ಹೀಗಾಗಿ ಹಳೆ ಈರುಳ್ಳಿಗೆ ಬೇಡಿಕೆ ಹೆಚ್ಚಿದೆ.

ಚಿತ್ರದುರ್ಗ, ಚಳ್ಳಕೆರೆ, ಅಜ್ಜಂಪುರ, ಹೂವಿನ ಹಡಗಲಿ ಮತ್ತಿತರ ಕಡೆಗಳಿಂದ ಅಧಿಕ ಪ್ರಮಾಣದಲ್ಲಿ ಈರುಳ್ಳಿ ಪೂರೈಕೆ ಆಗದ ಕಾರಣ ನಾಸಿಕ್‌ ಮತ್ತು ಅಹ್ಮದ್‌ ನಗರ್‌ ಜಿಲ್ಲೆಯಿಂದ ಉತ್ತಮ ಗುಣಮಟ್ಟದ ಹಳೆ ಈರುಳ್ಳಿ ಯಶವಂತಪುರ ಕೃಷಿ ಉತ್ಪನ್ನ ಮಾರುಕಟ್ಟೆಗೆ ಪೂರೈಕೆ ಆಗುತ್ತಿದೆ.

ಹೊಸ ಬೆಳೆ ಬಂದಿಲ್ಲ
ಯಶವಂತಪುರ ಎಪಿಎಂಸಿಗೆ ಚಿತ್ರದುರ್ಗ, ಚಳ್ಳಕೆರೆ ಭಾಗದಿಂದ ಅಧಿಕ ಪ್ರಮಾಣದಲ್ಲಿ ಈರುಳ್ಳಿ ಪೂರೈಕೆ ಆಗುತ್ತಿತ್ತು. ಆದರೆ ಕೆಲವು ಪ್ರದೇಶಗಳಲ್ಲಿ ಸಕಾಲಕ್ಕೆ ಸರಿಯಾಗಿ ಬಿತ್ತನೆ ನಡೆದಿಲ್ಲ. ಹೊಸ ಬೆಳೆ ಹೆಚ್ಚಿನ ಪ್ರಮಾಣದಲ್ಲಿ ಮಾರುಕಟ್ಟೆಗೆ ಬಂದಿಲ್ಲ. ಆ ಹಿನ್ನೆಲೆಯಲ್ಲಿ ಈರುಳ್ಳಿ ಬೆಲೆಯಲ್ಲಿ ಏರಿಕೆ ಕಂಡು ಬಂದಿದೆ ಎಂದು ಯಶವಂತಪುರದ ಹೋಲ್‌ ಸೇಲ್‌ ಈರುಳ್ಳಿ ವ್ಯಾಪಾರಿ ರವಿಶಂಕರ್‌ ಹೇಳಿದ್ದಾರೆ. ಕರ್ನೂಲು ಭಾಗದಿಂದ ಸಣ್ಣ ಗಾತ್ರದ ಈರುಳ್ಳಿ ಪೂರೈಕೆ ಆಗುತ್ತಿದೆ. ಕ್ವಿಂಟಾಲ್‌ಗೆ 2 ಸಾವಿರ ರೂ.ಗಳಿಂದ 2,400 ರೂ.ವರೆಗೆ ಖರೀದಿಯಾಗುತ್ತಿದೆ. ಆದರೆ ಮಹಾರಾಷ್ಟ್ರದಿಂದ ಪೂರೈಕೆ ಆಗುವ ದಪ್ಪ ಈರುಳ್ಳಿಗೆ ಬೇಡಿಕೆಯಿದೆ ಎನ್ನುತ್ತಾರೆ.

ಕಳೆದ 2-3ವರ್ಷಗಳಿಂದ ರಾಜ್ಯದಲ್ಲಿ ಈರುಳ್ಳಿ ಬೆಳೆ ಕುಂಠಿತವಾಗಿದೆ. ಚಿತ್ರದುರ್ಗ, ಚಳ್ಳಕೆರೆ ಸಹಿತ ಸುತ್ತಮುತ್ತಲ ಪ್ರದೇಶದಲ್ಲಿ ಹೆಚ್ಚಿನ ಮಳೆಯಿಲ್ಲದೆ ಬರಗಾಲ ಆವರಿಸಿರುವುದು ಮತ್ತಿತರರ ಕಾರಣಗಳಿಂದಾಗಿ ಈ ಬಾರಿ ಶೇ. 45ರಿಂದ 40ರಷ್ಟು ಮಾತ್ರ ಈರುಳ್ಳಿ ಬೆಳೆಯಲಾಗಿದೆ. ಜತೆಗೆ ಈಗ ಕೊಳೆರೋಗವೂ ಬಾಧಿಸಿದೆ ಎಂದು ಚಿತ್ರದುರ್ಗದ ಈರುಳ್ಳಿ ಬೀಜೋತ್ಪಾದಕ ಲೋಕೇಶ್‌ ಹೇಳುತ್ತಾರೆ.

46,637 ಚೀಲ ಪೂರೈಕೆ
ಯಶವಂತಪುರ ಮತ್ತು ದಾಸನಪುರ ಮಾರುಕಟ್ಟೆಗೆ ಮಂಗಳವಾರ 230 ಲಾರಿ ಈರುಳ್ಳಿ ಪೂರೈಕೆ ಆಗಿದೆ. ಅದರಲ್ಲಿ ಯಶವಂತಪುರ ಎಪಿಎಂಸಿಗೆ 4,324 ಮತ್ತು ದಾಸನಪುರ ಮಾರುಕಟ್ಟೆ 5,349 ಚೀಲ ಸಹಿತ ಒಟ್ಟು 46,673 ಚೀಲ ಈರುಳ್ಳಿ ಆವಕವಾಗಿದೆ. ನಾಸಿಕ್‌ ಜಿಲ್ಲೆಯಿಂದ ಪೂರೈಕೆ ಆಗುತ್ತಿರುವ ಈರುಳ್ಳಿ ಕ್ವಿಂಟಾಲ್‌ಗೆ 2 ಸಾವಿರ ರೂ.ಗಳಿಂದ 2,400 ರೂ.ವರೆಗೆ ಮತ್ತು ಸಾಧಾರಣ ಗುಣಮಟ್ಟದ್ದು ಕ್ವಿಂಟಾಲ್‌ಗೆ 1,800 ರೂ.ಗಳಿಂದ 2,300 ರೂ.ಗಳಿಗೆ ಮಾರಾಟವಾಯಿತು. ವಿಜಯಪುರದಿಂದ ಪೂರೈಕೆ ಆಗುತ್ತಿರುವ ಹಳೆ ಈರುಳ್ಳಿ ಕ್ವಿಂಟಾಲ್‌ಗೆ 2,200 ರೂ.ಗಳಿಂದ 2,400 ರೂ.ಗಳಿಗೆ ಮತ್ತು ಸಾಧಾರಣ ಗುಣಮಟ್ಟದ್ದು 1,800 ರೂ.ಗಳಿಂದ 2 ಸಾ.ರೂ.ಗಳಿಗೆ ಮಾರಾಟವಾಗುತ್ತಿದೆ.

ರಾಜ್ಯದ ಕೆಲವು ಈರುಳ್ಳಿ ಬಿತ್ತನೆ ಸರಿಯಾಗಿ ಆಗದಿರುವುದು, ಹೊಸ ಬೆಳೆ ಮಾರುಕಟ್ಟೆಗೆ ಬಾರದೆ ಇರುವುದು ಮತ್ತಿತರ ಕಾರಣಗಳಿಂದಾಗಿ ಬೆಲೆ ಏರಿಕೆಯಾಗಿದೆ. ಹೊಸ ಬೆಳೆ ಮಾರುಕಟ್ಟೆಗೆ ಬರುವ ವರೆಗೂ ಬೆಲೆ ಮತ್ತಷ್ಟು ಏರುವ ಸಾಧ್ಯತೆ ಇದೆ.
– ಉಮೇಶ್‌ ಎಸ್‌. ಮಿರ್ಜಿ, ಹಾಪ್‌ಕಾಮ್ಸ್‌ ವ್ಯವಸ್ಥಾಪಕ ನಿರ್ದೇಶಕ

– ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.