ನಿಗದಿತ ಮುನ್ನೆಚ್ಚರಿಕೆಯೊಂದಿಗೆ ಹೋಟೆಲ್, ರೆಸ್ಟೋರೆಂಟ್ ತೆರೆಯಿರಿ: ಬಿಎಸ್ ವೈ ಸೂಚನೆ
Team Udayavani, Jun 6, 2020, 1:07 PM IST
ಬೆಂಗಳೂರು: ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ರಾಜ್ಯದಲ್ಲಿ ಹೋಟೆಲ್ ಗಳು, ರೆಸ್ಟೋರೆಂಟ್ ಗಳನ್ನು ತೆರೆಯಲು ಅವಕಾಶ ನೀಡಲಾಗುತ್ತಿದೆ. ಆದರೆ ನಿಗದಿ ಪಡಿಸಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಿದರು.
ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವುದಾಗಿ ಹೋಟೆಲ್ ಗಳ ಸಂಘದ ಪ್ರತಿನಿಧಿಗಳು ಮತ್ತು ಸಾರಿಗೆ ಕಂಪೆನಿಗಳ ಪ್ರತಿನಿಧಿಗಳು ಮುಖ್ಯಮಂತ್ರಿಗಳಿಗೆ ಭರವಸೆ ನೀಡಿದರು.
ಮುಖ್ಯಮಂತ್ರಿಗಳು ಇಂದು ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಹಾಗೂ ಕೆಲವು ತೊಡಕುಗಳ ನಿವಾರಣೆ ಕುರಿತು ಪ್ರವಾಸೋದ್ಯಮ ಹಾಗೂ ಸಾರಿಗೆ ಇಲಾಖೆ ಮತ್ತು ವಿವಿಧ ಭಾಗೀದಾರರ ಜೊತೆಗೆ ಚರ್ಚೆ ನಡೆಸಿದರು.
ಈ ಸಭೆಯಲ್ಲಿ ಭಾಗವಹಿಸಿದ್ದ ಬಸ್ ಮಾಲೀಕರ ಸಂಘ ಹೋಟೆಲ್ ಮಾಲೀಕರ ಸಂಘ ಹಾಗು ಟ್ಯಾಕ್ಸಿ ಮಾಲಿಕರ ಸಂಘಗಳ ನಿಯೋಗವು ಸರ್ಕಾರದ ಮುಂದೆ ಕೆಲ ಬೇಡಿಕೆಗಳನ್ನು ಮುಂದಿಟ್ಟರು. ಅವರ ಬೇಡಿಕೆಗಳನ್ನು ಕೂಲಂಕಷವಾಗಿ ಪರಿಶೀಲಿಸಿ, ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಪ್ರವಾಸೋದ್ಯಮ ಇಲಾಖೆಯು ಹೋಟೆಲ್ ಗಳು, ಆತಿಥ್ಯ ಘಟಕಗಳು ಮತ್ತು ಪ್ರವಾಸಿ ತಾಣಗಳನ್ನು ತೆರೆಯುವ ಹಿನ್ನೆಲೆಯಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳ ಕೈಪಿಡಿಯನ್ನು ಬಿಡುಗಡೆ ಮಾಡಿದರು.
ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ, ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರುತಿ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
MUST WATCH
ಹೊಸ ಸೇರ್ಪಡೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ