![court](https://www.udayavani.com/wp-content/uploads/2024/07/court-7-415x231.jpg)
ಶ್ರೀ ಶಾರದಾ ಪೀಠದ ಕುಂಭಾಭಿಷೇಕಕ್ಕೆ ತೆರೆ
Team Udayavani, Feb 13, 2017, 3:45 AM IST
![tere.jpg](https://www.udayavani.com/wp-content/uploads/2017/02/12/tere-620x361.jpg)
ಶೃಂಗೇರಿ: ಇಲ್ಲಿನ ಶ್ರೀ ಶಾರದಾ ಪೀಠದಲ್ಲಿ ನಡೆಯುತ್ತಿದ್ದ ಕುಂಭಾಭಿಷೇಕದ ಧಾರ್ಮಿಕ ಕಾರ್ಯಕ್ರಮಗಳು ಭಾನುವಾರ ಕೋಟಿ ಕುಂಕುಮಾರ್ಚನೆಯೊಂದಿಗೆ ಮುಕ್ತಾಯಗೊಂಡಿತು. ಶ್ರೀ ಶಾರದಾಂಬಾ ರಥೋತ್ಸವವು ಸೋಮವಾರ ಬೆಳಗ್ಗೆ
ನಡೆಯಲಿದ್ದು, ಉಭಯ ಜಗದ್ಗುರುಗಳು ರಥೋತ್ಸವದಲ್ಲಿ ಪಾಲ್ಗೊಳ್ಳುವರು. ಕಳೆದ 15 ದಿನಗಳಿಂದ ಶ್ರೀ ಮಠದಲ್ಲಿ
300 ಕ್ಕೂ ಹೆಚ್ಚು ಋತ್ವಿಜರಿಂದ ನಡೆಯುತ್ತಿದ್ದ ಹೋಮ, ಹವನಗಳು ಭಾನುವಾರ ಮುಕ್ತಾಯಗೊಂಡಿದೆ. ಶ್ರೀ
ಶಾರದಾಲಯ ಸ್ವರ್ಣ ಶಿಖರದ ಕುಂಭಾಭಿಷೇಕದ ನಿಮಿತ್ತವಾಗಿ ಶ್ರೀಮಠದಲ್ಲಿ ಗಾಯತ್ರಿ ಹೋಮ, ಲಕ್ಷ ಮೋದಕ ಗಣಪತಿ ಹೋಮ, ಹನ್ನೆರಡು ದಿನಗಳ ಕಾಲ ನಡೆದ ಅತಿರುದ್ರಮಹಾಯಾಗ, ಸಹಸ್ರ ಚಂಡಿಕಾ ಮಹಾಯಾಗ ನಡೆಯಿತು. ಭಾನುವಾರ ಶ್ರೀ ಶಾರದಾ ಸನ್ನಿಧಿಯಲ್ಲಿ ನಡೆಯುತ್ತಿದ್ದ ಕೋಟಿ ಕುಂಕುಮಾರ್ಚನೆ ಕಾರ್ಯಕ್ರಮ ಮುಕ್ತಾಯಗೊಂಡಿತು. ಬೆಳಗ್ಗೆ ಉಭಯ ಜಗದ್ಗುರುಗಳಾದ ಶ್ರೀ ಭಾರತೀ ತೀರ್ಥ ಸ್ವಾಮೀಜಿ ಹಾಗೂ ಕಿರಿಯ ಸ್ವಾಮೀಜಿಗಳಾದ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳು ಬೆಳಗ್ಗೆ ಶ್ರೀ ಶಾರದಾ ಚಂದ್ರಮೌಳೇಶ್ವರ ಪೂಜೆ ನೆರವೇರಿಸಿದರು. ನಂತರ ಶ್ರೀ ಮಠದ ಹೊರ ಪ್ರಾಂಗಣ ಹಾಗೂ ಒಳ ಪ್ರಾಂಗಣದ ಎಲ್ಲಾ ದೇವಸ್ಥಾನಗಳಿಗೆ ಜಗದ್ಗುರುಗಳು ಭೇಟಿ ನೀಡಿ ಪೂಜೆ ಸಲ್ಲಿಸಿದರು. ನಂತರ ಶ್ರೀ ಶಾರದಾ ಸನ್ನಿಧಿಯಲ್ಲಿ ನಡೆಯುತ್ತಿದ್ದ ಕೋಟಿ ಕುಂಕುಮಾರ್ಚನೆಯ ಕೊನೆಯ ದಿನದ ಕಲಾಪದಲ್ಲಿ ಪಾಲ್ಗೊಂಡರು.
ಟಾಪ್ ನ್ಯೂಸ್
![court](https://www.udayavani.com/wp-content/uploads/2024/07/court-7-415x231.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
![robbers](https://www.udayavani.com/wp-content/uploads/2024/07/robbers-1-150x89.jpg)
Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!
![Kohli IPL 2024](https://www.udayavani.com/wp-content/uploads/2024/07/Kohli-IPL-2024-150x103.jpg)
Champions Trophy; ಕೊಹ್ಲಿ ಪಾಕ್ನಲ್ಲಿ ಆಡಲಿ: ಯೂನಿಸ್ ಖಾನ್
![1-tatoo](https://www.udayavani.com/wp-content/uploads/2024/07/1-tatoo-150x84.jpg)
Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!
![1-wewqewq](https://www.udayavani.com/wp-content/uploads/2024/07/1-wewqewq-2-150x98.jpg)
Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.