“ಆಪರೇಷನ್ ಕಮಲ’ದ ವಿಚಾರ ಅನರ್ಹರ ಬಾಯಿಂದಲೇ ಬರುತ್ತಿದೆ: ಸಿದ್ದರಾಮಯ್ಯ
Team Udayavani, Nov 17, 2019, 3:06 AM IST
ಮೈಸೂರು/ಹೊಸಕೋಟೆ: ಉಪ ಚುನಾ ವಣೆಯಲ್ಲಿ ಬಿಜೆಪಿ ಎಂಟು ಸ್ಥಾನ ಗೆಲ್ಲುವುದಿಲ್ಲ. ಹೀಗಾಗಿ, ಉಪ ಚುನಾವಣೆ ಬಳಿಕ ಸರ್ಕಾರಕ್ಕೆ ಸಂಕಷ್ಟ ಎದುರಾಗಲಿದೆ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, “ಆಪರೇಷನ್ ಕಮಲ’ದ ವಿಚಾರ ಗಳು ಈಗ ಒಂದೊಂದಾಗಿ ಹೊರ ಬರುತ್ತಿವೆ. ಬಿಜೆಪಿಯವರು ಆಪರೇಷನ್ ಕಮಲ ಮಾಡಲ್ಲ ಅಂತ ಹೇಳಿಕೊಂಡು ಸಾಚಾಗಳಂತೆ ಮಾತನಾಡುತ್ತಿದ್ದರು.
ಈಗ ಅನರ್ಹರೇ ಹೇಳುತ್ತಿರುವುದರಿಂದ ಆಪರೇಷನ್ ಕಮಲದ ಬಗ್ಗೆ ನಾವೇನು ಸಾಬೀತು ಮಾಡುವ ಅವಶ್ಯಕತೆ ಇಲ್ಲ. ಸಿಎಂ ಯಡಿಯೂರಪ್ಪ ಅವರು, ಬಿಜೆಪಿಗೆ ಬಂದವರೆಲ್ಲರ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದಾರೆ. ಶಂಕರ್ಗೆ ಎಂಎಲ್ಸಿ ಮಾಡಿ ಮಂತ್ರಿ ಮಾಡುವ, ಉಪ ಚುನಾವಣೆಯಲ್ಲಿ ಅನರ್ಹರು ಗೆದ್ದು ಬಂದರೆ ಮಂತ್ರಿ ಮಾಡುವ ಭರವಸೆ ನೀಡಿದ್ದಾರೆ. ಇದು ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ. ಒಬ್ಬ ಮುಖ್ಯಮಂತ್ರಿಯಾಗಿ ಚುನಾವಣಾ ನೀತಿ ಸಂಹಿತೆ ಪಾಲಿಸದವರಿಗೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು.
ಇದೇ ವೇಳೆ, ಜೆಡಿಎಸ್ ವಿರುದ್ಧ ಕಿಡಿಕಾರಿದ ಸಿದ್ದರಾಮಯ್ಯ, ಜೆಡಿಎಸ್ನವರಿಗೆ ಏನು ಸ್ಟ್ಯಾಂಡ್ ಇದೆ, ಅವರಿಗೆ ಸ್ಟ್ಯಾಂಡೇ ಇಲ್ಲ ಎಂದು ಟೀಕಿಸಿದರು. ಇದಕ್ಕೂ ಮೊದಲು ಹೊಸಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮಾವತಿ ಸುರೇಶ್ ಪರ ಪ್ರಚಾರ ಭಾಷಣ ಮಾಡಿದ ಸಿದ್ದರಾಮಯ್ಯ, ಉಪಚುನಾವಣೆಗೆ ಕಾರಣರಾಗಿರುವ ಅನರ್ಹ ಶಾಸಕರುಗಳನ್ನು ಮತದಾರರು ಸೋಲಿಸುವ ಮೂಲಕ ಶಾಶ್ವತ ವಾಗಿ ಮನೆಗೆ ಕಳುಹಿಸಬೇಕು. ಹೊಸಕೋಟೆ ಕ್ಷೇತ್ರದಲ್ಲಿ ಎಂಟಿಬಿ ನಾಗರಾಜ್ ಸೋಲಿಗೆ ಯಡಿ ಯೂರಪ್ಪ ಹಾಗೂ ಆಪರೇಷನ್ ಕಮಲಕ್ಕೆ ಪ್ರೋತ್ಸಾಹಿಸಿದ ಕೇಂದ್ರ ಸಚಿವ ಅಮಿತ್ ಶಾರೇ ಕಾರಣರಾಗಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್