ವಿಧಾನಸೌಧದಲ್ಲಿ ಆಪರೇಷನ್ ಕಮಲದ ಮತ್ತೊಂದು ಆಡಿಯೋ ರಿಲೀಸ್
Team Udayavani, May 19, 2018, 11:49 AM IST
ಬೆಂಗಳೂರು: ವಿಧಾನಸೌಧದಲ್ಲಿ ಆಪರೇಷನ್ ಕಮಲದ ಆಡಿಯೋವನ್ನು ಕಾಂಗ್ರೆಸ್ ಮುಖಂಡ ವಿಎಸ್ ಉಗ್ರಪ್ಪ ಶನಿವಾರ ಬಿಡುಗಡೆಗೊಳಿಸಿದ್ದಾರೆ.
ನಮ್ಮ ಶಾಸಕರೊಬ್ಬರ ಪತ್ನಿಗೆ ಕರೆ ಮಾಡಿ, ಮಂತ್ರಿ ಸ್ಥಾನ ಬೇಕೆಂದರೆ ಜೊತೆಗೆ 5 ಕೋಟಿ ರೂಪಾಯಿ ಅಥವಾ ಮಂತ್ರಿಸ್ಥಾನ ಬೇಡವೆಂದರೆ 15 ಕೋಟಿ ರೂಪಾಯಿ ನೀಡುವ ಆಫರ್ ನೀಡಿರುವುದಾಗಿ ಆರೋಪಿಸಿದ್ದಾರೆ. ಬಿಎಸ್ ಯಡಿಯೂರಪ್ಪ ಪುತ್ರ ಬಿ ವಿಜಯೇಂದ್ರ ಹಾಗೂ ಎಂಎಲ್ ಸಿ ಬಿಜೆ ಪುಟ್ಟಸ್ವಾಮಿ ಅವರು ಆಪರೇಷನ್ ಕಮಲಕ್ಕೆ ಮುಂದಾಗಿರುವುದಾಗಿ ಉಗ್ರಪ್ಪ ಪತ್ರಿಕಾಗೋಷ್ಠಿಯಲ್ಲಿ ದೂರಿದ್ದಾರೆ.
ಶುಕ್ರವಾರ ಕಾಂಗ್ರೆಸ್ ನ ರಾಯಚೂರು ಗ್ರಾಮಾಂತರ ಶಾಸಕ ಬಸನಗೌಡ ದದ್ದಲ್ ಗೆ ಬಿಜೆಪಿ ಮುಖಂಡ, ಮಾಜಿ ಸಚಿವ ಜೆ.ಜನಾರ್ದನ ರೆಡ್ಡಿ 150 ಕೋಟಿ ರೂ.ಗಳ ಆಮಿಷ ಒಡ್ಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಉಗ್ರಪ್ಪ ಆಡಿಯೋ ಬಿಡುಗಡೆ ಮಾಡಿ ಆರೋಪಿಸಿದ್ದರು. ಬಳಿಕ ಈ ಆಡಿಯೋ ಫೇಕ್ ಎಂದು ಜನಾರ್ದನ ರೆಡ್ಡಿ ಪ್ರತಿಕ್ರಿಯೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್