ಆಪರೇಷನ್ ಕುರಿ ಫಾರ್ಮ್…!ನೆಲ ಮಾಳಿಗೆಯಲ್ಲಿ ಕ್ವಿಂಟಲ್ ಗಟ್ಟಲೆ ಗಾಂಜಾ ಪತ್ತೆ
ಈ ವೇಳೆ ಕೋಟ್ಯಂತರ ರೂ. ಮೌಲ್ಯದ 1,300 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.
Team Udayavani, Sep 11, 2020, 6:12 PM IST
ಬೆಂಗಳೂರು: ಬೆಂಗಳೂರಿನ ಇತಿಹಾಸದಲ್ಲೇ ಹಿಂದೆಂದೂ ಕೇಳರಿಯದಷ್ಟು ಪ್ರಮಾಣದ ಗಾಂಜಾ ಏಕಕಾಲದಲ್ಲಿ ಪತ್ತೆಯಾಗಿದೆ! ನಗರದಲ್ಲಿ ಬಂಧಿತನಾದ ಗಾಂಜಾ ದಂಧೆಕೋರ ನೀಡಿದ ಸಣ್ಣ ಸುಳಿವಿನ ಆಧಾರದ ಮೇರೆಗೆ ಶೇಷಾದ್ರಿಪುರಂ ಠಾಣೆ ಪೊಲೀಸರು 10 ದಿನಗಳ ಕಾಲ “ಆಪರೇಷನ್ ಕುರಿಫಾರ್ಮ್’ ನಡೆಸಿದ್ದಾರೆ.
ಈ ವೇಳೆ ಕೋಟ್ಯಂತರ ರೂ. ಮೌಲ್ಯದ 1,300 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಕಲಬುರಗಿ ಜಿಲ್ಲೆಯ ಲಚ್ಚುನಾಯಕ ತಾಂಡಾದ ಕುರಿ ಫಾರ್ಮ್ ಒಂದರಲ್ಲಿಭೂಗತವಾಗಿ ಅಡಗಿಸಿ ಇರಿಸಿದ್ದ ಈ ಭಾರೀ ಪ್ರಮಾಣದ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಹೊರನೋಟಕ್ಕೆ ಕುರಿ ಶೆಡ್ ಇದ್ದು, ಒಳಗೆ ನೆಲಮಾಳಿಗೆಯಲ್ಲಿ ಕ್ವಿಂಟಲ್ ಗಟ್ಟಲೆ ಗಾಂಜಾ ಶೇಖರಿಸಿ ಇಡಲಾಗಿತ್ತು. ಈ ಬಗ್ಗೆ ಸ್ಥಳೀಯರಿಗೆ ಸಣ್ಣ ಅನುಮಾನವೂ ಬಾರದ ರೀತಿಯಲ್ಲಿ ಗಾಂಜಾ ದಾಸ್ತಾನು ಮಾಡಿ ಇಡಲಾಗಿತ್ತು ಎಂದು ಮೂಲಗಳು ತಿಳಿಸಿವೆ.
ಈ ಪ್ರಕರಣ ಸಂಬಂಧ ಅಂತಾರಾಜ್ಯ ಗಾಂಜಾ ದಂಧೆಕೋರರಾದ ಕಲಬುರಗಿಯ ಚಂದ್ರಕಾಂತ್, ಬೀದರ್ನ ನಾಗನಾಥ, ವಿಜಯಪುರದ ಸಿದ್ದುನಾಥ ಲಾವಟೆ, ಬೆಂಗಳೂರಿನ ಗಾಯತ್ರಿನಗರದ ಜ್ಞಾನಶೇಖರ್ನನ್ನು ಬಂಧಿಸಿದ್ದಾರೆ.
ಪ್ರಕರಣದಲ್ಲಿ ಕುತೂಹಲದ ವಿಷಯವೆಂದರೆ ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸರು ನಡೆಸಿದ ಕಾರ್ಯಾಚರಣೆ ನಡೆಸಿ ಗಾಂಜಾ ವಶಪಡಿಸಿಕೊಂಡಿದ್ದು, ಈ ಬಗ್ಗೆ ಸ್ಥಳೀಯ ಪೊಲೀಸರಿಗೆ ಮಾಹಿತಿ ತಿಳಿದಿರಲಿಲ್ಲವಾಗಿತ್ತಂತೆ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್ವೈ
Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’