ಕಾಂಗ್ರೆಸ್ ಹೈಕಮಾಂಡ್ ಬಾಗಿಲಲ್ಲಿ ಹುದ್ದೆ ಆಕಾಂಕ್ಷಿಗಳು
Team Udayavani, Dec 16, 2019, 3:00 AM IST
ಬೆಂಗಳೂರು: ಉಪ ಚುನಾವಣೆಯ ಸೋಲಿನ ನೈತಿಕ ಹೊಣೆ ಹೊತ್ತು ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ಸಲ್ಲಿಸಿರುವುದರಿಂದ ಹುದ್ದೆ ಆಕಾಂಕ್ಷಿಗಳು ದೆಹಲಿಯಲ್ಲಿ ಹೈಕಮಾಂಡ್ ಭೇಟಿಗೆ ಕಸರತ್ತು ಮುಂದುವರಿಸಿದ್ದಾರೆ. ಶನಿವಾರ ದೆಹಲಿಯಲ್ಲಿ ಪಕ್ಷದ ವತಿಯಿಂದ ನಡೆದ ಭಾರತ್ ಬಚಾವೋ ಆಂದೋಲನದಲ್ಲಿ ಪಾಲ್ಗೊಳ್ಳಲು ರಾಜ್ಯ ನಾಯಕರಾದ ಎಚ್.ಕೆ.ಪಾಟೀಲ್, ಡಿ.ಕೆ.ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ಈಶ್ವರ್ ಖಂಡ್ರೆ, ಎಂ.ಬಿ.ಪಾಟೀಲ್, ಡಾ.ಜಿ.ಪರಮೇಶ್ವರ್ ದೆಹಲಿಗೆ ತೆರಳಿದ್ದರು.
ಪ್ರತಿಭಟನೆ ಮುಗಿದ ನಂತರ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯನ್ನು ಭೇಟಿ ಮಾಡಲು ಪ್ರಯತ್ನ ನಡೆಸಿದ್ದಾರೆ. ಭಾನುವಾರ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ಭೇಟಿಗೆ ಯಾರೊಬ್ಬರಿಗೂ ಅವಕಾಶ ದೊರೆತಿಲ್ಲ. ಕೆಲವು ನಾಯಕರು ಇಬ್ಬರೂ ನಾಯಕರ ಭೇಟಿಯಾಗದೇ ವಾಪಸ್ ಬಂದಿದ್ದು, ಕೆಲವರು ಸೋಮವಾರವೂ ಭೇಟಿಗೆ ಪ್ರಯತ್ನ ಮುಂದುವರಿಸ ಲಿದ್ದಾರೆ ಎಂದು ತಿಳಿದು ಬಂದಿದೆ.
ಇಬ್ಬರೂ ನಾಯಕರು ನೀಡಿರುವ ರಾಜೀನಾಮೆ ಅಂಗೀಕರಿಸುವ ಬಗ್ಗೆ ಪಕ್ಷದ ಹೈಕಮಾಂಡ್ ಇನ್ನೂ ಯಾವುದೇ ನಿರ್ಧಾರ ತೆಗೆದು ಕೊಳ್ಳದಿರುವುದರಿಂದ ಅವರನ್ನೇ ಇನ್ನಷ್ಟು ದಿನ ಮುಂದುವರಿಸುತ್ತಾರೆ ಎಂಬ ಮಾತುಗಳೂ ಕೇಳಿ ಬರುತ್ತಿವೆ. ಸದ್ಯ ಜಾರ್ಖಂಡ್ ವಿಧಾನಸಭೆ ಚುನಾವಣೆ ನಡೆಯುತ್ತಿರುವು ದರಿಂದ ಪಕ್ಷದ ಹೈಕಮಾಂಡ್ ಚುನಾವಣೆ ಮುಗಿಯುವವರೆಗೂ ಯಾವುದೇ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತಿದೆ. ಹೀಗಾಗಿ ರಾಜ್ಯ ನಾಯಕರು ನಿರಾಸೆಯಿಂದ ವಾಪಾಸ್ಸಾಗುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ