ನಾಡಧ್ವಜ ವಿರೋಧ ಸರಿಯಲ್ಲ: ಸಿದ್ದರಾಮಯ್ಯ
Team Udayavani, Aug 31, 2019, 3:05 AM IST
ಬೆಂಗಳೂರು: “ಕರ್ನಾಟಕಕ್ಕೆ ನಾಡಧ್ವಜ ಅಗತ್ಯವಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ. ರವಿ ಹೇಳುವ ಮೂಲಕ ಅನಗತ್ಯ ವಿವಾದ ಸೃಷ್ಟಿಸಲು ಹೊರಟಿದ್ದಾರೆ’ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, “ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ನಾಡಧ್ವಜ ವಿರೋಧಿಸುವುದು ಸರಿಯಲ್ಲ.
ನಾವು ಪ್ರತ್ಯೇಕ ಧ್ವಜ ಕೇಳುತ್ತಿಲ್ಲ. ರಾಜ್ಯಗಳು ತಮ್ಮದೇ ಧ್ವಜ ಹೊಂದಲು ಸಂವಿಧಾನ ಅಥವಾ ಕಾನೂನಿನಲ್ಲಿ ಯಾವ ಅಡ್ಡಿಯೂ ಇಲ್ಲ. ಬಿಜೆಪಿ ಸರ್ಕಾರದ ನಿಲುವು ಕನ್ನಡ ವಿರೋಧಿಯಾಗಿದೆ.’ ಹಿರಿಯರಾದ ಪಾಟೀಲ್ ಪುಟ್ಟಪ್ಪ ಮತ್ತಿತರ ಕನ್ನಡ ಹೋರಾಟಗಾರರು ನಾಡಧ್ವಜಕ್ಕಾಗಿ ಮನವಿ ಮಾಡಿದ್ದರು. ಈ ಬಗ್ಗೆ ಅಧ್ಯಯನ ನಡೆಸಿದ್ದ ತಜ್ಞರ ಸಮಿತಿ ವಿನ್ಯಾಸಗೊಳಿಸಿದ್ದ ನಾಡಧ್ವಜಕ್ಕೆ ಮನ್ನಣೆ ನೀಡಬೇಕೆಂದು ಕೇಂದ್ರ ಸರ್ಕಾರವನ್ನು ಕೋರಿದ್ದೆವು.
ಈಗ ರಾಜ್ಯ ಸರ್ಕಾರವೇ ವಿರೋಧಿಸುತ್ತಿರುವುದು ಖಂಡನೀಯ. ಸಿ.ಟಿ.ರವಿಯವರು ನಾಡಧ್ವಜ ಅಗತ್ಯವಿಲ್ಲ ಎಂದು ಹೇಳಿ ಕನ್ನಡಿಗರನ್ನು ಕೆರಳಿಸಿರುವುದು ಸರಿಯಲ್ಲ. ಸಚಿವರು ತಕ್ಷಣ ತಮ್ಮ ಅಭಿಪ್ರಾಯವನ್ನು ಹಿಂದಕ್ಕೆ ಪಡೆದು ನಾಡಧ್ವಜ ಒಪ್ಪಿಕೊಳ್ಳಬೇಕು ಎಂದು ಸಿದ್ದರಾಮಯ್ಯ ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ