Second PU ಮೌಲ್ಯಮಾಪನಕ್ಕೆ ವಿರೋಧ

ಪರೀಕ್ಷೆ ಮುಗಿದ ಮರುದಿನವೇ ಮೌಲ್ಯಮಾಪನಕ್ಕೆ ವರದಿ ಮಾಡಿಕೊಳ್ಳಲು ಸೂಚನೆ

Team Udayavani, Mar 19, 2024, 7:20 AM IST

ಪಿಯು ಮೌಲ್ಯಮಾಪನಕ್ಕೆ ವಿರೋಧ

ಬೆಂಗಳೂರು: ಮಾರ್ಚ್‌ 22ರಂದು ದ್ವಿತೀಯ ಪಿಯು ಪರೀಕ್ಷೆ ಮುಕ್ತಾಯಗೊಳ್ಳಲಿದ್ದು, ಮಾರ್ಚ್‌ 23ರಂದೇ ಮೌಲ್ಯಮಾಪನ ಆರಂಭ ಗೊಳ್ಳುತ್ತಿರುವುದಕ್ಕೆ ಉಪನ್ಯಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಮೌಲ್ಯಮಾಪನ ಬಹಿ ಷ್ಕರಿಸಬೇಕೆಂಬ ತೀರ್ಮಾನದಿಂದ ರಾಜ್ಯ ಪ.ಪೂ. ಕಾಲೇಜುಗಳ ಉಪನ್ಯಾ ಸಕರ ಸಂಘ ಹಿಂದೆ ಸರಿದಿದೆ.

ರಾಜ್ಯದಲ್ಲಿ ಪಿಯುಸಿ ವಾರ್ಷಿಕ ಪರೀಕ್ಷೆಗೆ ಸುಮಾರು 6.98 ಲಕ್ಷ ಮಂದಿ ನೋಂದಾಯಿಸಿಕೊಂಡಿದ್ದು, 36 ಲಕ್ಷ ಪತ್ರಿಕೆಗಳ ಮೌಲ್ಯಮಾಪನ ನಡೆಯಬೇಕಿದೆ. ವಾರ್ಷಿಕ ಪರೀಕ್ಷೆ-1 ಪೂರ್ಣಗೊಳಿಸಿ ಮೌಲ್ಯಮಾಪನ ಪ್ರಕ್ರಿಯೆಯನ್ನು ತ್ವರಿತಗತಿಯಲ್ಲಿ ನಡೆಸಿ ವಾರ್ಷಿಕ ಪರೀಕ್ಷೆ-2ಕ್ಕೆ ತಯಾರಿ ನಡೆಸುವುದು ಮತ್ತು ಚುನಾವಣ ಪ್ರಕ್ರಿಯೆಯಲ್ಲಿ ಉಪನ್ಯಾಸಕರು ಪಾಲ್ಗೊಳ್ಳುವುದರಿಂದ ಚುನಾವಣ ಕೆಲಸಗಳು ಆರಂಭಗೊಳ್ಳುವ ಮುಂಚಿತವಾಗಿ ಮೌಲ್ಯಮಾಪನ ಕೆಲಸಗಳನ್ನು ಪೂರ್ಣಗೊಳಿಸಬೇಕು ಎಂಬುದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (ಕೆಎಸ್‌ಇಎಬಿ)ಯ ಆಶಯ. ಅದ ರಂತೆ ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ, ಜೀವಶಾಸ್ತ್ರ ಮತ್ತು ಐಚ್ಛಿಕ ಕನ್ನಡ ವಿಷಯಗಳ ಮೌಲ್ಯಮಾಪನಕ್ಕೆ ಉಪ ಮುಖ್ಯ ಮೌಲ್ಯಮಾಪಕರು ಮಾ. 23ರಂದು ಪರೀಕ್ಷಾ ಕೇಂದ್ರಕ್ಕೆ ವರದಿ ಮಾಡಿಕೊಳ್ಳಬೇಕು ಎಂದು ಕೆಎಸ್‌ಇಎಬಿ ಸೂಚಿಸಿದೆ.

ಬಹುತೇಕ ಶಿಕ್ಷಕರು ತಮ್ಮ ವಾಸಸ್ಥಾನದಿಂದ ದೂರದ ಪರೀಕ್ಷಾ ಕೇಂದ್ರಗಳಲ್ಲಿ ಮೇಲ್ವಿಚಾರಣೆ ಸಹಿತ ಇತರ ಪರೀಕ್ಷಾ ಕೆಲಸಗಳನ್ನು ನಿರ್ವ ಹಿಸುತ್ತಿದ್ದಾರೆ. ಅದರ ಮರು ದಿನವೇ ಮತ್ತೆ 200-300 ಕಿಮೀ ದೂರದಲ್ಲಿನ ಮೌಲ್ಯಮಾಪನ ಕೇಂದ್ರಕ್ಕೆ ಹೋಗಿ ಮೌಲ್ಯಮಾಪನ ಚಟುವಟಿಕೆ ನಡೆಸು ವುದು ಕಷ್ಟ ಎಂದು ಉಪ ನ್ಯಾಸಕರು ಹೇಳುತ್ತಿದ್ದಾರೆ. ಅದರಲ್ಲೂ ಈ ಬಾರಿ ನೆರೆಯ ಜಿಲ್ಲೆಯ ಮೌಲ್ಯಮಾಪನ ಕೇಂದ್ರಗಳನ್ನು ಹೊರತುಪಡಿಸಿ ದೂರದ ಕೇಂದ್ರಗಳಿಗೆ ನಿಯೋಜಿಸ ಲಾಗಿದೆ. ಇದರಿಂದ ಉಪನ್ಯಾಸಕರಿಗೆ ಮೊದಲ ದಿನದ ಮೌಲ್ಯಮಾಪನ ಚಟುವಟಿಕೆಗೆ ಹಾಜ ರಾಗಲು ಕಷ್ಟವಾಗಲಿದೆ ಎಂದು ಉಪನ್ಯಾಸಕರು ನೋವು ತೋಡಿಕೊಂಡಿದ್ದಾರೆ. ಮಾ.25ರಂದು ಮೌಲ್ಯಮಾಪನ ಆರಂಭಿಸಿದರೆ ಅನುಕೂಲ ಎನ್ನುತ್ತಿದ್ದಾರೆ ಉಪನ್ಯಾಸಕರು.

ಎಪ್ರಿಲ್‌ 2ನೇ ವಾರ ದ್ವಿತೀಯ ಪಿಯು ಫ‌ಲಿತಾಂಶ?
ಕೆಎಸ್‌ಇಎಬಿಯ ಎಪ್ರಿಲ್‌ 8ಕ್ಕೆ ದ್ವಿತೀಯ ಪಿಯುಸಿ ಫ‌ಲಿತಾಂಶ ಪ್ರಕಟಿಸುವ ಗುರಿ ಇಟ್ಟುಕೊಂಡಿದೆ. ಹಾಗೆಯೇ ಎಪ್ರಿಲ್‌ 24ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2 ಅನ್ನು ಪ್ರಾರಂಭಿಸುವ ಕರಡು ವೇಳಾಪಟ್ಟಿ ಸಿದ್ಧವಾಗಿತ್ತು. ಆದರೆ ಎಪ್ರಿಲ್‌ 26ಕ್ಕೆ ರಾಜ್ಯದಲ್ಲಿ ಮೊದಲ ಸುತ್ತಿನ ಚುನಾವಣೆ ನಡೆಯಲಿರುವುದರಿಂದ ಕರಡು ವೇಳಾಪಟ್ಟಿ ಬದಲಾವಣೆ ಅನಿವಾರ್ಯತೆಯಿದೆ. ವಾರ್ಷಿಕ ಪರೀಕ್ಷೆ-2 ಪ್ರಾರಂಭದ ದಿನಾಂಕ ಮುಂದೂಡುವ ಸಾಧ್ಯತೆಯಿರುವುದರಿಂದ ಮೌಲ್ಯಮಾಪನವನ್ನು ಸ್ವಲ್ಪ ತಡ ಮಾಡಿ, ಫ‌ಲಿತಾಂಶದ ದಿನವನ್ನು ಸ್ವಲ್ಪ ಮುಂದೂಡುವ ಬಗ್ಗೆಯೂ ಚರ್ಚೆ ನಡೆದಿದೆ.

ಬಹಿಷ್ಕಾರ ಕೈಬಿಟ್ಟ ಉಪನ್ಯಾಸಕರ ಸಂಘ
ದ್ವಿತೀಯ ಪಿಯುಸಿಯ ಅಂತಿಮ ಪರೀಕ್ಷೆಯನ್ನು ಕೆಎಸ್‌ಇಎಬಿಯಿಂದ ಹಿಂದೆಗೆದುಕೊಂಡು ಪದವಿಪೂರ್ವ ಶಿಕ್ಷಣ ಇಲಾಖೆಗೆ ನೀಡಬೇಕು. ಪಪೂ ಕಾಲೇಜಿನ ಉಪ ನಿರ್ದೇಶಕರ ಜವಾಬ್ದಾರಿಯನ್ನು ಜಿಪಂ ಸಿಇಒಗಳಿಂದ ಹಿಂಪಡೆದುಕೊಳ್ಳಬೇಕು ಮುಂತಾದ ಬೇಡಿಕೆಗಳನ್ನು ಮುಂದಿಟ್ಟು ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಉಪನ್ಯಾಸಕರ ಸಂಘ ಚಿಂತನೆ ನಡೆಸಿತ್ತು. ಈಗ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಮೌಲ್ಯಮಾಪನ ಬಹಿಷ್ಕಾರದ ತೀರ್ಮಾನದಿಂದ ಹಿಂದೆ ಸರಿಯಲು ಸಂಘ ನಿರ್ಧರಿಸಿದೆ.

ಮಾ.23ರಂದು ಮೊದಲ ಹಂತ ಮತ್ತು ಮಾ. 25ರಂದು ಎರಡನೇ ಹಂತದ ಮೌಲ್ಯಮಾಪನ ಆರಂಭಗೊಳ್ಳಲಿದೆ. ಪರೀಕ್ಷಾ ಕೇಂದ್ರ ಮತ್ತು ಮೌಲ್ಯಮಾಪಕರ ಸಂಖ್ಯೆ ಬಹಿರಂಗ ಪಡಿಸಲು ಸಾಧ್ಯವಿಲ್ಲ. ಆದಷ್ಟು ತ್ವರಿತವಾಗಿ ಫ‌ಲಿತಾಂಶ ನೀಡುವುದು ನಮ್ಮ ಉದ್ದೇಶ.
-ಎಚ್‌.ಎನ್‌.ಗೋಪಾಲಕೃಷ್ಣ, ನಿರ್ದೇಶಕ, ಕೆಎಸ್‌ಇಎಬಿ

-ಎನ್‌.ಎಸ್‌.ರಾಕೇಶ್‌

ಟಾಪ್ ನ್ಯೂಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

15

UV Fusion: ಜೀವನವನ್ನು ಪ್ರೀತಿಸೋಣ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.