ಕಲ್ಯಾಣ ಮಂಟಪಗಳಿಗೆ ನೀಡಿರುವ ಮುಂಗಡ ಹಣವನ್ನು ಹಿಂತಿರುಗಿಸಲು ಆದೇಶ
Team Udayavani, Jun 11, 2020, 4:51 PM IST
ಬೆಂಗಳೂರು: ಈ ಬಾರಿ ಮದುವೆ ಮುಂತಾದ ಶುಭ ಸಮಾರಂಭಗಳಿಗಾಗಿ ಕಲ್ಯಾಣ ಮಂಟಪಗಳಿಗೆ ಜನರು ನೀಡಿರುವ ಮುಂಗಡ ಹಣವನ್ನು ಹಿಂತಿರುಗಿಸಬೇಕು ಎಂದು ಬೆಂಗಳೂರು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಈ ವರ್ಷ ಕೋವಿಡ್-19 ಲಾಕ್ ಡೌನ್ ಕಾರಣದಿಂದ ಮುಂಜಾಗ್ರತಾ ಕ್ರಮವಾಗಿ ಅಗತ್ಯ ಸೇವೆಗಳನ್ನು ಹೊರತು ಪಡಿಸಿ ಉಳಿದ ಸಾರ್ವಜನಿಕ ಸೇವೆಗಳ ಮೇಲೆ ನಿರ್ಬಂಧ ಹೇರಲಾಗಿತ್ತು. ಇದಕ್ಕೂ ಮೊದಲು ಮದುವೆ ಮುಂತಾದ ಶುಭ ಕಾರ್ಯಗಳಿಗಾಗಿ ಬಹಳಷ್ಟು ಮಂದಿ ಕಲ್ಯಾಣ ಮಂಟಪಗಳನ್ನು ನಿಗಧಿ ಪಡಿಸಿದ್ದರು. ಇದೇ ಕಾರಣಕ್ಕಾಗಿ ಮುಂಗಡ ಹಣವನ್ನೂ ಪಾವತಿ ಮಾಡಿದ್ದರು.
ಲಾಕ್ ಡೌನ್ ಆದ ಕಾರಣ ಕಲ್ಯಾಣ ಮಂಟಪಗಳಲ್ಲಿ ಸಮಾರಂಭಗಳು ನಡೆಯದ ಕಾರಣ ಬೆಂಗಳೂರು ಜಿಲ್ಲಾ ವ್ಯಾಪ್ತಿಯಲ್ಲಿ ಕಲ್ಯಾಣ ಮಂಟಪಗಳು ಮುಂಗಡ ಹಣವನ್ನು ಮರುಪಾವತಿ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ.
ಕಲ್ಯಾಣ ಮಂಟಪ ಮಾಲೀಕರು ಮುಂಗಡ ಹಣ ಮರುಪಾವತಿ ಮಾಡದೇ ಇರುವ ಬಗ್ಗೆ ಈಗಾಗಲೇ ದೂರುಗಳು ಕೇಳಿ ಬಂದಿದೆ. ಸಾರ್ವಜನಿಕರು ಸಂದಾಯ ಮಾಡಿದ ಹಣದಲ್ಲಿ 5% ತೆರಿಗೆ ಕಡಿತ ಮಾಡಿ ಉಳಿದ ಹಣವನ್ನು ಹಿಂತುರಿಗಿಸಬೇಕು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State government: ರಾಜ್ಯ ಸರಕಾರಕ್ಕೆ ಎನ್ಸಿಬಿ ನೋಟಿಸ್?
Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ