ಹೆಸ್ಕಾಂನಲ್ಲಿ 86ಕೋಟಿ ರೂ. ಅವ್ಯವಹಾರ ಪತ್ತೆ: 20 ಅಧಿಕಾರಿಗಳ ಅಮಾನತಿಗೆ ಆದೇಶ


Team Udayavani, Jan 26, 2022, 6:48 PM IST

ಹೆಸ್ಕಾಂನಲ್ಲಿ 86ಕೋಟಿ ರೂ. ಅವ್ಯವಹಾರ ಪತ್ತೆ: 20 ಅಧಿಕಾರಿಗಳ ಅಮಾನತಿಗೆ ಆದೇಶ

ಬೆಂಗಳೂರು :  ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ (ಹೆಸ್ಕಾಂ ) ವ್ಯಾಪ್ತಿಯ ಅಥಣಿ ವಿಭಾಗದಲ್ಲಿ ನಡೆದ ಕಾಮಗಾರಿಗಳಲ್ಲಿ ನಡೆದ ಅವ್ಯವಹಾರ ಸಂಬಂಧ ತನಿಖೆ ನಡೆಸಿರುವ ಇಂಧನ ಇಲಾಖೆ ಅಕ್ರಮಕ್ಕೆ ಕಾರಣರಾದ 20 ಅಧಿಕಾರಿಗಳನ್ನು ಅಮಾನತುಗೊಳಿಸಿದೆ. ಏಳು ಜನರಿಗೆ ವರ್ಗಾವಣೆ ಶಿಕ್ಷೆ ನೀಡಿದೆ.

ಸುಮಾರು 86 ಕೋಟಿ ರೂ. ಮೊತ್ತದ ಅವ್ಯವಹಾರಕ್ಕೆ ಅಧಿಕಾರಿಗಳು ಕಾರಣರಾಗಿದ್ದು, ಇದರಿಂದ ಇಲಾಖೆಗೆ ಆಥಿಕ ನಷ್ಟವಾಗುವ ಜತೆಗೆ ಸಾರ್ವಜನಿಕರಿಗೆ ಅಗತ್ಯವಾದ ಕಾಮಗಾರಿಗಳ ಗುಣಮಟ್ಟದಲ್ಲೂ ನ್ಯೂನ್ಯತೆ ಸೃಷ್ಟಿಯಾಗಿತ್ತು. ಈ ಸಂಬಂಧ ತನಿಖಾ ತಂಡ ನೀಡಿದ ವರದಿಯ ಶಿಫಾರಸಿನ ಅನ್ವಯ ಹೆಚ್ಚುವರಿ ಕಾರ್ವನಿರ‍್ವಾಹಕ ಎಂಜಿನಿಯರ್ ಸೇರಿ 20 ಜನರನ್ನು ಅಮಾನತುಗೊಳಿಸುವಂತೆ ಕನ್ನಡ-ಸಂಸ್ಕೃತಿ ಮತ್ತು ಇಂಧನ ಇಲಾಖೆ ಸಚಿವ ವಿ.ಸುನೀಲ್ ಕುಮಾರ್  ಆದೇಶ ನೀಡಿದ್ದಾರೆ.

2018ರಿಂದ  2021ರ ಅವಧಿಯಲ್ಲಿ ನಡೆದ ಯುಎನ್ಐಪಿ, ಕಾಪೆಕ್ಸ್, ಗಂಗಾ ಕಲ್ಯಾಣ, ನೀರು ಸರಬರಾಜು, ಓಟಿಎಂ, ಪ್ರಧಾನಮಂತ್ರಿ ಗ್ರಾಮೀಣ ವಿದ್ಯುದೀಕರಣ ಯೋಜನೆ ಸೇರಿದಂತೆ ನಾಗರಿಕರಿಕರಿಗೆ ನೇರವಾಗಿ ಸಂಬಂಧಪಟ್ಟ ಕಾಮಗಾರಿಗಳಲ್ಲಿ ಅವ್ಯವಹಾರ ಎಸಗಿರುವುದು ಇಲಾಖೆ ನಡೆಸಿದ ಆಂತರಿಕ ತನಿಖೆಯಿಂದ ಸ್ಪಷ್ಟವಾಗಿದೆ.

ನಡೆದಿದ್ದೇನು ? :

2018ರಿಂದ 2021ರ ಅವಧಿಗೆ ಅನ್ವಯವಾಗುವಂತೆ ಹೆಸ್ಕಾಂನ ಅಥಣಿ ವಿಭಾಗದಲ್ಲಿ ನಾನಾ ಕಾಮಗಾರಿಗಳಿಗೆ ಸಂಬಂಧಪಟ್ಟಂತೆ ಟೆಂಡರ್ ಕರೆಯಲಾಗಿತ್ತು. ಆದರೆ ಇದರಲ್ಲಿ ಅವ್ಯವಹಾರವಾಗಿದೆ. ಸಂಸ್ಥೆಗೆ  ಆರ್ಥಿಕ ನಷ್ಟವುಂಟು ಮಾಡಲಾಗುತ್ತಿದೆ ಎಂದು ಸಾರ್ವಜನಿಕರು ಹಾಗೂ ಅನೇಕ ಸಂಘಟನೆಗಳಿಂದ ದೂರು ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ತಾಂತ್ರಿಕ ನಿರ್ದೇಶಕ, ಹಣಕಾಸು ಅಧಿಕಾರಿಗಳ ತಂಡ ಆಗಷ್ಟ್  14ರಂದು ಸ್ಥಳ ಪರಿಶೀಲನೆ ನಡೆಸಿದಾಗ ಮೇಲ್ನೋಟಕ್ಕೆ ಅವ್ಯವಹಾರ ನಡೆದಿರುವುದು ಖಾತ್ರಿಯಾಗಿತ್ತು. ಈ ಹಿನ್ನೆಲೆಯಲ್ಲಿ ಶಾಖಾವಾರು ವರದಿ ನೀಡುವಂತೆ ಸೂಚನೆ ನೀಡಿದ್ದರ ಜತೆಗೆ ಆಂತರಿಕ ತನಿಖೆಗೆ ಸೂಚನೆ ನೀಡಲಾಗಿತ್ತು.

ತನಿಖಾ ಸಂರ‍್ಭದಲ್ಲಿ ಅಧಿಕಾರಿಗಳ ಕೈವಾಡದಿಂದಲ್ಲೇ ಅವ್ಯವಹಾರ ಹಾಗೂ ನಷ್ಟವುಂಟಾಗಿರುವುದು ದೃಢಪಟ್ಟಿದೆ. ಒಟ್ಟಾರೆಯಾಗಿ 29.72ಕೋಟಿ ರೂ.ನ್ನು ಕಾಮಗಾರಿ ನಿರ್ವಹಣೆ ಮಾಡದೇ ಹಣ ಪಾವತಿ ಮಾಡಿರುವ ಗಂಭೀರ ಲೋಪ ಪತ್ತೆಯಾಗಿದೆ. ಜತೆಗೆ ಇದರಿಂದಾಗಿ ಇಲಾಖೆಗೆ 57.16ಕೋಟಿ ರೂ. ನಿಯಮ ಬಾಹಿರವಾಗಿ ವೆಚ್ಚವಾಗಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ.

ಕ್ರಮ :

ಈ ಹಗರಣಕ್ಕೆ ಕಾರಣರಾದ ಅಥಣಿ ವಿಭಾಗದ ಪ್ರಭಾರಿ ಕಾರ್ಯನಿರ್ವಾಹಕ ಎಂಜಿನಿಯರ್, ನಾಲ್ವರು ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್, 12 ಶಾಖಾಧಿಕಾರಿಗಳು, ಒಬ್ಬ ಲೆಕ್ಕಾಧಿಕಾರಿ, 1 ಸಹಾಯಕ ಲೆಕ್ಕಾಧಿಕಾರಿ ಹಾಗೂ ಒಬ್ಬ ಕೇಸ್ ವರ‍್ಕರ್ ಸೇರಿ 20 ಜನರನ್ನು ಅಮಾನತುಗೊಳಿಸುವಂತೆ ಸಚಿವ ಸುನೀಲ್ ಕುಮಾರ್ ನೀಡಿದ ಸೂಚನೆ ಅನ್ವಯ ಹೆಸ್ಕಾಂ ಆದೇಶ ಹೊರಡಿಸಿದೆ. ಅವ್ಯವಹಾರಕ್ಕೆ ಪರೋಕ್ಷವಾಗಿ ಸಹಕರಿಸಿದ 1ಲೆಕ್ಕಾಧಿಕಾರಿ, ನಾಲ್ವರು ಕಿರಿಯ ತಾಂತ್ರಿಕ ಸಹಾಯಕರು, 1ಹಿರಿಯ ಸಹಾಯಕ ಹಾಗೂ ಒಬ್ಬ ಕೇಸ್  ವರ‍್ಕರನ್ನು ಬೇರೆಡೆಗೆ ವರ‍್ಗಾಯಿಸಲಾಗಿದ್ದು, ಪ್ರಕರಣದ ಬಗ್ಗೆ ಇನ್ನಷ್ಟು ತನಿಖೆ ನಡೆಸುವಂತೆ ಸೂಚನೆ ನೀಡಲಾಗಿದೆ.

ಇಂಧನ ಇಲಾಖೆಯಲ್ಲಿ ಯಾವುದೇ ಕಾರಣಕ್ಕೂ ಅವ್ಯವಹಾರ ನಡೆಸುವುದಕ್ಕೆ ಅವಕಾಶ ನೀಡುವುದಿಲ್ಲ. ರಾಜ್ಯದ ಯಾವುದೇ ಮೂಲೆಯಲ್ಲಿ ಈ ಬಗೆಯ ಘಟನೆಗಳು ನಡೆದರೆ ಅದನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರುವಂತೆ ನಾನು ಸಾರ‍್ವಜನಿಕರಲ್ಲಿ ಮನವಿ ಮಾಡುತ್ತೇನೆ. ನಾಗರಿಕರು ಹಾಗೂ ಸಾರ‍್ವಜನಿಕ ಸಂಸ್ಥೆಗಳ ನೆರವಿನೊಂದಿಗೆ ಇಂಧನ ಇಲಾಖೆಯ ಎಲ್ಲ ಹಂತಗಳಲ್ಲೂ ಪಾರದರ್ಶಕತೆ ತರುವುದಕ್ಕೆ ಪ್ರಮಾಣಿಕ ಪ್ರಯತ್ನ ನಡೆಸುತ್ತೇನೆ. ಭ್ರಷ್ಟಾಚಾರ ಹಾಗೂ ಅವ್ಯವಹಾರಕ್ಕೆ ಪ್ರೇರಣೆ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ ನಿಶ್ಚಿತ. -ವಿ.ಸುನೀಲ್ ಕುಮಾರ್, ಕನ್ನಡ-ಸಂಸ್ಕೃತಿ ಮತ್ತು ಇಂಧನ ಸಚಿವ

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.