ಐದು ಬಾರಿ ಸಂಸದರಾಗಿ ಗೆಲುವು… ಆಸ್ಕರ್ ಕರಾವಳಿ ಪ್ರದೇಶದ ಜನಪ್ರಿಯ ರಾಜಕಾರಣಿಯಾಗಿದ್ರು…
ಬರೋಬ್ಬರಿ 26 ವರ್ಷಗಳ ಕಾಲ ಆಸ್ಕರ್ ಅವರು ಎಐಸಿಸಿಯ ಕಾರ್ಯಕಾರಿ ಸಮಿತಿ ಸದಸ್ಯರಾಗಿದ್ದರು.
Team Udayavani, Sep 13, 2021, 3:41 PM IST
ಮಣಿಪಾಲ: ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಜನಪ್ರಿಯ ರಾಜಕಾರಣಿಯಾಗಿದ್ದವರು ಆಸ್ಕರ್ ಫೆರ್ನಾಂಡಿಸ್ (80ವರ್ಷ). ಉಡುಪಿಯ ಬ್ರಹ್ಮಗಿರಿಯಲ್ಲಿರುವ ಮನೆಯಲ್ಲಿ ಸದಾ ಜನಜಂಗುಳಿಯಿಂದ ತುಂಬಿರಲು ಕಾರಣ ಆಸ್ಕರ್ ಫೆರ್ನಾಂಡಿಸ್. ಸತತ ಐದು ಬಾರಿ ಉಡುಪಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಸಂಸದರಾಗಿ ಆಯ್ಕೆಯಾಗಿದ್ದವರು ಆಸ್ಮರ್ ಫೆರ್ನಾಂಡಿಸ್.
1980ರಲ್ಲಿ ನಡೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಆಸ್ಕರ್ ಫೆರ್ನಾಂಡಿಸ್ ಮೊದಲ ಬಾರಿ ಕಾಂಗ್ರೆಸ್ ಪಕ್ಷದ ಟಿಕೆಟ್ ನಿಂದ ಸ್ಪರ್ಧಿಸುವ ಮೂಲಕ ಲೋಕಸಭೆಗೆ ಆಯ್ಕೆಯಾಗಿದ್ದರು. ಆ ಬಳಿಕ ಆಸ್ಕರ್ ಸತತವಾಗಿ 1984, 1989, 1991 ಹಾಗೂ 1996ರವರೆಗೂ ಸತತವಾಗಿ ಉಡುಪಿ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರು.
1998ರಲ್ಲಿ ಆಸ್ಕರ್ ಫೆರ್ನಾಂಡಿಸ್ ರಾಜ್ಯಸಭೆಗೆ ಆಯ್ಕೆಯಾಗಿದ್ದು, 2004ರಲ್ಲಿಯೂ ರಾಜ್ಯಸಭೆಗೆ ಪುನರಾಯ್ಕೆಗೊಂಡಿದ್ದರು. ಗಾಂಧಿ ಕುಟುಂಬದ ನಿಕಟವರ್ತಿಯಾಗಿದ್ದ ಆಸ್ಕರ್ ಫೆರ್ನಾಂಡಿಸ್ ಕೇಂದ್ರ ಸಾರಿಗೆ, ರಸ್ತೆ ಹಾಗೂ ಕಾರ್ಮಿಕ ಖಾತೆ ಸಚಿವರಾಗಿದ್ದರು. ಯುಪಿಎ ಅವಧಿಯಲ್ಲಿಯೂ ಸಚಿವರಾಗಿದ್ದರು. ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುವ ಕಾಂಗ್ರೆಸ್ ಪಕ್ಷದ ಸದಸ್ಯರಲ್ಲಿ ಇವರು ಕೂಡಾ ಒಬ್ಬರಾಗಿದ್ದರು. ಅಷ್ಟೇ ಅಲ್ಲ ಆಲ್ ಇಂಡಿಯಾ ಕಾಂಗ್ರೆಸ್ ಸಮಿತಿಯ ಕೇಂದ್ರ ಚುನಾವಣಾ ಮಂಡಳಿಯ ಅಧ್ಯಕ್ಷರಾಗಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿಯೂ ಆಸ್ಕರ್ ಫೆರ್ನಾಂಡಿಸ್ ಕಾರ್ಯ ನಿರ್ವಹಿಸಿದ್ದರು.
ರಾಜೀವ್ ಗಾಂಧಿ ಪ್ರಧಾನಿಯಾಗಿದ್ದ ವೇಳೆ ಸಂಸದೀಯ ಕಾರ್ಯದರ್ಶಿಯಾಗಿದ್ದರು. ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರದಲ್ಲಿ ಆಸ್ಕರ್ ಫೆರ್ನಾಂಡಿಸ್ ಅವರು ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವರಾಗಿದ್ದರು. ಅನಿವಾಸಿ ಭಾರತೀಯ ವ್ಯವಹಾರಗಳು, ಯುವ ಮತ್ತು ಕ್ರೀಡಾ ವ್ಯವಹಾರ ಹೀಗೆ ಅನೇಕ ಮಹತ್ವದ ಹುದ್ದೆಗಳನ್ನು ಆಸ್ಕರ್ ಫೆರ್ನಾಂಡಿಸ್ ಅಲಂಕರಿಸಿದ್ದರು.
1987ರಿಂದ 1992ರವರೆಗೆ ಆಸ್ಕರ್ ಫೆರ್ನಾಂಡಿಸ್ ಕೆಪಿಸಿಸಿ ಅಧ್ಯಕ್ಷರಾಗಿದ್ದರು. ಆಸ್ಕರ್ ಅವರು ಕಾರ್ಮಿಕ ಸಚಿವರಾಗಿದ್ದ ಸಂದರ್ಭದಲ್ಲಿ ಉಡುಪಿಗೆ ಪ್ರಾವಿಡೆಂಟ್ ಫಂಡ್ ನ ರೀಜನಲ್ ಕಚೇರಿ ತೆರೆಯಲು ಅವಕಾಶವಾಗಿತ್ತು. ಬರೋಬ್ಬರಿ 26 ವರ್ಷಗಳ ಕಾಲ ಆಸ್ಕರ್ ಅವರು ಎಐಸಿಸಿಯ ಕಾರ್ಯಕಾರಿ ಸಮಿತಿ ಸದಸ್ಯರಾಗಿದ್ದರು. ಲೋಕಸಭಾ ಸದಸ್ಯರಾಗಿದ್ದ ವೇಳೆ ಆಸ್ಕರ್ ಅವರು ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಅಧ್ಯಕ್ಷರಾಗಿದ್ದರು. ಸುದೀರ್ಘ 45 ವರ್ಷಗಳ ಕಾಲದ ಅವಧಿಯಲ್ಲಿ ರಾಜಕೀಯ ಜೀವನ ಹಾಗೂ ಅವರ ಸಾಧನೆಯನ್ನು ಪರಿಗಣಿಸಿ ನೆಲ್ಸನ್ ಮಂಡೇಲಾ ಪ್ರಶಸ್ತಿ, ಮಂಗಳೂರು ವಿವಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿತ್ತು. ಆಸ್ಕರ್ ಅವರು ಮೌತ್ ಆರ್ಗನ್ ನುಡಿಸುವುದರಲ್ಲಿ ನಿಪುಣರಾಗಿದ್ದರಷ್ಟೇ ಅಲ್ಲ, ಈಜುಪಟು ಕೂಡಾ ಆಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ