ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿರುದ್ಧ ಆಕ್ರೋಶ
Team Udayavani, Jul 30, 2019, 3:00 AM IST
ಬೆಂಗಳೂರು: ಆರ್ಥಿಕತೆಗೆ ಸಂಬಂಧಿಸಿದ ವಿವಿಧ ಕೋರ್ಸ್ಗಳನ್ನು ವಿಶ್ವದರ್ಜೆ ಗುಣಮಟ್ಟದಲ್ಲಿ ನೀಡುವ ಉದ್ದೇಶದಿಂದ ಆರಂಭಿಸಿರುವ ಬೆಂಗಳೂರು ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿದ್ಯಾರ್ಥಿಗಳಿಗೆ ಸೂಕ್ತವಾಗಿ ಸ್ಪಂದಿಸುತ್ತಿಲ್ಲ ಎಂಬ ಆರೋಪ ಕೇಳಿಬರುತ್ತಿದೆ.
ವಿದ್ಯಾರ್ಥಿಗಳ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ನೇಮಕಾತಿಗೆ ಸಂಬಂಧಿಸಿದಂತೆ ಬೇರೆ ಬೇರೆ ರಾಜ್ಯಗಳಿಂದ ಹಾಗೂ ಕರ್ನಾಟಕದ ಬೇರೆ ಬೇರೆ ಜಿಲ್ಲೆಗಳಿಂದ ಬರಬೇಕಿರುವ ವಿದ್ಯಾರ್ಥಿಗಳಿಗೆ ಸೂಕ್ತ ಮಾಹಿತಿ ರವಾನೆ ಮಾಡುತ್ತಿಲ್ಲ ಎಂದು ಅಭ್ಯರ್ಥಿಯೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಗಳವಾರ(ಜು. 30) ಇಂಟಿಗ್ರೇಟೆಡ್ ಎಂ.ಎಸ್ಸಿ ಕೋರ್ಸ್ಗೆ ದಾಖಲಾತಿಗೆ ಸಂಬಂಧಿಸಿದಂತೆ ಒರಿಯಂಟೇಷನ್ ಹಮ್ಮಿಕೊಳ್ಳಲಾಗಿದೆ ಎಂದು ಸೋಮವಾರ ಸಂಜೆ ಇ-ಮೇಲ್ ಮಾಡಿದ್ದಾರೆ. ಇದು ಬೆಂಗಳೂರು ಹೊರವಲಯ ಹಾಗೂ ಬೇರೆ ಜಿಲ್ಲೆ, ರಾಜ್ಯಗಳಿಂದ ಬರಬೇಕಿರುವ ವಿದ್ಯಾರ್ಥಿಗಳಿಗೆ ಸಾಕಷ್ಟು ಸಮಸ್ಯೆಯಾಗುತ್ತಿದೆ.
ವಿದ್ಯಾರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಸೇರಿಕೊಳ್ಳಬಾರದು ಎಂಬ ದುರುದ್ದೇಶದಿಂದ ಆಡಳಿತ ಮಂಡಳಿಯವರೇ ಹೀಗೆ ಮಾಡುತ್ತಿದ್ದಾರೆ ಎಂದು ಇನ್ನೋರ್ವ ಅಭ್ಯರ್ಥಿ ಆರೋಪಿಸಿದರು. ಈ ಸಂಸ್ಥೆಯನ್ನು ಲಂಡನ್ ಸ್ಕೂಲ್ ಆಫ್ ಎಕಾನಾಮಿಕ್ಸ್ ಮಾದರಿಯಲ್ಲಿ ರಚನೆ ಮಾಡಿ, ಅಲ್ಲಿನ ಗುಣಮಟ್ಟದ ಶಿಕ್ಷಣವನ್ನೇ ನೀಡಬೇಕು ಎಂಬ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರ ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಾಮಿಕ್ಸ್ ಆರಂಭಿಸಿತು.
ಆದರೆ, ಈವರೆಗೂ ಸೂಕ್ತ ಕಟ್ಟಡದ ವ್ಯವಸ್ಥೆ ಮಾಡಿಕೊಟ್ಟಿಲ್ಲ. ಅಲ್ಲಿರುವ ವಿದ್ಯಾರ್ಥಿಗಳಿಗೆ ಯಾವುದೇ ಸೌಲಭ್ಯವೂ ಇಲ್ಲ. ಆಡಳಿತ ಮಂಡಳಿ ಇದ್ಯಾವುದನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ನೊಂದ ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು