ವಿಷಪ್ರಸಾದ ಸಂತ್ರಸ್ತರಿಗೆ ಪರಿಹಾರ: ಸಚಿವ ಶೆಟ್ಟಿ ನಡೆಗೆ ಆಕ್ರೋಶ
Team Udayavani, Dec 18, 2018, 10:57 AM IST
ಮೈಸೂರು: ಹನೂರಿನ ಸುಳ್ವಾಡಿ ವಿಷ ಪ್ರಸಾದ ಸಂತ್ರಸ್ತರಿಗೆ ಪರಿಹಾರ ಧನ ವಿತರಿಸುವಲ್ಲಿ ಚಾಮರಾಜನಗರ ಉಸ್ತುವಾರಿ ಸಚಿವ ಪುಟ್ಟರಂಗ ಶೆಟ್ಟಿ ಅವರ ಧೋರಣೆಗೆ ಆಕ್ರೋಶ ವ್ಯಕ್ತವಾಗಿದೆ.
ಸರ್ಕಾರದ ಪ್ರತಿನಿಧಿಗಳು ಸಂತ್ರಸ್ತರ ಬಳಿ ತೆರಳಿ ಪರಿಹಾರ ನೀಡುವುದು ಸಾಮಾನ್ಯ. ಆದರೆ ಸಚಿವ ಪುಟ್ಟರಂಗ ಶೆಟ್ಟಿ ಅವರು ಹನೂರಿನ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಪರಿಹಾರ ಧನ ವಿತರಿಸಲು ಕಾರ್ಯಕ್ರಮ ಆಯೋಜಿಸಿದ್ದಾರೆ.
ಮರಣಮೃದಂಗದಿಂದ ತೀವ್ರ ನೊಂದಿರುವ ಸಂತ್ರಸ್ತರು 50 ಕಿ.ಮೀ ದೂರಕ್ಕೆ ಬಂದು ಪರಿಹಾರ ಪಡೆಯಬೇಕಾಗಿದೆ. ಇದೇ ವಿಚಾರಕ್ಕೆ ಸಂಬಂಧಿಸಿ ಆಕ್ರೋಶ ಹೊರ ಹಾಕಲಾಗಿದೆ.
ಮಧ್ಯಾಹ್ನ ಕಾರ್ಯಕ್ರಮ ನಿಗದಿಯಾಗಿದ್ದು, ಜನ ಆಕ್ರೋಶ ಹೊರ ಹಾಕುತ್ತಿದ್ದು ಸಚಿವರು ಸತ್ತವರ ಮನೆಗೆ ಹೋಗಬೇಕೋ? ಸತ್ತವರ ಮನೆಯವರು ಸಚಿವರ ಬಳಿಗೆ ಹೋಗಬೇಕೋ ಎಂದು ಕಿಡಿ ಕಾರುತ್ತಿದ್ದಾರೆ.
ಸಚಿವರು ಪರಿಹಾರ ವಿತರಿಸಿದ ಬಳಿಕ ಗ್ರಾಮಕ್ಕೆ ತೆರಳುತ್ತಾರೋ , ಸಂತ್ರಸ್ತರನ್ನು ಪ್ರವಾಸಿ ಮಂದಿರಕ್ಕೆ ಕರೆದೊಯ್ಯಲು ಸರ್ಕಾರದ ವತಿಯಿಂದ ಏನಾದರು ವ್ಯವಸ್ಥೆ ಮಾಡುತ್ತಾರೋ ಎನ್ನುವುದನ್ನು ಕಾದು ನೋಡಬೇಕಾಗಿದೆ.
ಕೆ.ಆರ್.ಆಸ್ಪತ್ರೆಗೆ ಭೇಟಿ
ಸಚಿವ ಪುಟ್ಟರಂಗ ಶೆಟ್ಟಿ ಅವರು ಕೆ.ಆರ್.ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವರ ಯೋಗಕ್ಷೇಮ ವಿಚಾರಿಸಿದರು.
ಸಂಪೂರ್ಣ ಗುಣಮುಖರಾಗುವ ವರೆಗೆ ಯಾರನ್ನೂ ಆಸ್ಪತ್ರೆಯಿಂದ ಬಿಡುಗಡೆ ಮಾಡಬೇಡಿ ಎಂದು ವೈದ್ಯರಿಗೆ ಸೂಚನೆ ನೀಡಿದ್ದಾರೆ.
ಜಿಲ್ಲೆಗಳ ವಿವಿಧ ಆಸ್ಪತ್ರೆಗಳಲ್ಲಿ 101 ಜನರನ್ನು ದಾಖಲಿಸಿಕೊಂಡಿದ್ದು, ತೀವ್ರ
ನಿಗಾಘಟಕಗಳಲ್ಲಿ 45 ಮಂದಿ, ವೆಂಟಿಲೇಟರ್ಗಳಲ್ಲಿ 24 ಮಂದಿಗೆ ಚಿಕಿತ್ಸೆ
ಮುಂದುವರಿಸಲಾಗಿದ್ದು, 56 ಮಂದಿಯನ್ನು ವಾರ್ಡ್ ಗೆ ಸ್ಥಳಾಂತರಿಸಲಾಗಿದೆ . ಸಾವಿನ ಸಂಖ್ಯೆ 14 ಕ್ಕೇರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು