ರಮೇಶ ಜಾರಕಿಹೊಳಿ ವಿರುದ್ಧ ಭುಗಿಲೆದ್ದ ಆಕ್ರೋಶ
Team Udayavani, Jan 1, 2020, 3:05 AM IST
ಬೆಳಗಾವಿ: ಮರಾಠಿ ಭಾಷಿಕ ಮತಗಳನ್ನು ಸೆಳೆದುಕೊಳ್ಳುವಲ್ಲಿ ಕನ್ನಡ ಅಸ್ಮಿತೆಗೆ ಧಕ್ಕೆ ತರುವ ನಿಟ್ಟಿನಲ್ಲಿ ಭಾಷಾ ರಾಜಕಾರಣ ಮಾಡುತ್ತಿರುವ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರನ್ನು ಬಿಜೆಪಿ ಯಿಂದ ಉಚ್ಚಾಟಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯ ಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.
ಚನ್ನಮ್ಮ ವೃತ್ತದಲ್ಲಿ ರಮೇಶ ಜಾರಕಿ ಹೊಳಿ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತ ಪಡಿಸಿದ ಕಾರ್ಯಕರ್ತರು, ಭಾಷಾ ವಿಷ ಬೀಜ ಬಿತ್ತುವ ಮೂಲಕ ಕನ್ನಡಿಗರನ್ನು ಎತ್ತಿ ಕಟ್ಟುವ ಕೆಲಸ ನಡೆದಿದೆ. ನೀಚ ರಾಜಕಾರಣ ಮಾಡಲು ಹೊರಟಿರುವ ಶಾಸಕ ರಮೇಶ ನಾಡದ್ರೋಹ ಮಾಡಿ ದ್ದಾರೆ. ಕರ್ನಾಟಕದಿಂದ ಆಯ್ಕೆಯಾ ದರೂ ಪದೇಪದೆ ಕನ್ನಡಿಗರ ವಿರುದ್ಧ ನೀಡು ತ್ತಿರುವ ಹೇಳಿಕೆಗಳಿಂದ ಅವಮಾನ ವಾಗುತ್ತಿದೆ ಎಂದು ದೂರಿದರು.
ಭಾಷಾ ಕಿಡಿ ಹೊತ್ತಿಸಿ ತಮ್ಮ ರಾಜ ಕೀಯ ಬೇಳೆ ಬೇಯಿಸಿಕೊಳ್ಳುತ್ತಿರುವ ನಮ್ಮ ರಾಜಕಾರಣಿಗಳಿಗೆ ರಾಜ್ಯದ ಜನತೆ ಪಾಠ ಕಲಿಸಬೇಕು. ಕೂಡಲೇ ಮುಖ್ಯಮಂತ್ರಿ ಗಳು ರಮೇಶ ಜಾರಕಿಹೊಳಿಯನ್ನು ಉಚ್ಚಾಟಿಸಬೇಕು. ಭಾರತೀಯ ದಂಡ ಸಂಹಿತೆ 120 ಬಿ ಅಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ
Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ