Bengaluru 1,500 ಕ್ಕೂ ಹೆಚ್ಚು ರೈಲು ಪ್ರಯಾಣಿಕರ ಪರದಾಟ ; ಸರಕಾರದ ನೆರವು
Team Udayavani, Jun 4, 2023, 6:24 PM IST
ಬೆಂಗಳೂರು: ಒಡಿಶಾದಲ್ಲಿ ಭೀಕರ ರೈಲುಗಳ ದುರಂತದ ನಂತರ ಬೆಂಗಳೂರಿನ ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ 1,500 ಕ್ಕೂ ಹೆಚ್ಚು ಪ್ರಯಾಣಿಕರು ಸಿಲುಕಿಕೊಂಡಿದ್ದಾರೆ.
ರೈಲುಗಳು ರದ್ದಾದ ಕಾರಣ ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ಹೆಚ್ಚಿನ ಸಂಖ್ಯೆಯ ಕಾರ್ಮಿಕರು ಸಿಲುಕಿಕೊಂಡಿದ್ದಾರೆ. ಸಾವಿರಾರು ಮಂದಿ ಪರದಾಡುತ್ತಿದ್ದಂತೆ ಕಾರ್ಮಿಕ ಇಲಾಖೆ ಮತ್ತು ಬೆಂಗಳೂರು ನಾಗರಿಕ ಸಂಸ್ಥೆ ಭಾನುವಾರ ರೈಲು ನಿಲ್ದಾಣದಲ್ಲಿ ಸಿಲುಕಿರುವ ಪ್ರಯಾಣಿಕರಿಗೆ ಆಹಾರ, ನೀರು ಮತ್ತು ಮೊಬೈಲ್ ಶೌಚಾಲಯಗಳನ್ನು ವ್ಯವಸ್ಥೆ ಮಾಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ದೇಶನದ ಮೇರೆಗೆ, ಒಡಿಶಾ, ಜಾರ್ಖಂಡ್, ಬಿಹಾರ, ಪಶ್ಚಿಮ ಬಂಗಾಳ ಮತ್ತು ಇತರ ಈಶಾನ್ಯ ರಾಜ್ಯಗಳಿಗೆ ರೈಲುಗಳು ರದ್ದಾದ ಕಾರ್ಮಿಕರು ಮತ್ತು ಪ್ರಯಾಣಿಕರಿಗೆ ಆಹಾರ ಮತ್ತು ನೀರು ಸೇರಿದಂತೆ ಮೂಲ ಸೌಕರ್ಯಗಳನ್ನು ಒದಗಿಸಲು ಸರ್ಕಾರಿ ಇಲಾಖೆಗಳು ಕೈಜೋಡಿಸಿವೆ.ರೈಲ್ವೆ ನಿಲ್ದಾಣದಲ್ಲಿ ಸಿಲುಕಿರುವ ಪ್ರಯಾಣಿಕರಿಗೆ ಸೇವೆ ಸಲ್ಲಿಸಲು ವಿವಿಧ ಸಾಮಾಜಿಕ ಸಂಘಟನೆಗಳು ಕೂಡ ಸೇರಿಕೊಂಡಿವೆ.