ಮೂರೂವರೆ ವರ್ಷದಲ್ಲಿ ಎಲ್ಲೆ ಮೀರಿ ಅಕಾಡೆಮಿ ಸೇವೆ :ಎಂ.ಎಸ್.ಮೂರ್ತಿ
Team Udayavani, Aug 11, 2017, 11:59 AM IST
ಬೆಂಗಳೂರು: “ಅರ್ಜಿ ಹಾಕಿ ಬಂದಂತಹ ಅಧ್ಯಕ್ಷ ನಾನಲ್ಲ. ನನಗೆ ಸಿಕ್ಕ ಅವಕಾಶವನ್ನು ತುಂಬಾ ಯಶಸ್ವಿಯಾಗಿ ನಿರ್ವಹಿಸಿದ್ದೇನೆ. ಜಾತ್ಯತೀತ, ಧರ್ಮಾತೀತವಾಗಿ ಪ್ರಾಂತೀಯ ಎಲ್ಲೆ ಮೀರಿ ಕೆಲಸ ಮಾಡಿದ್ದೇನೆ’ ಎಂದು ಲಲಿತಕಲಾ ಅಕಾಡೆಮಿ ಅಧ್ಯಕ್ಷ ಎಂ.ಎಸ್.ಮೂರ್ತಿ ಹೇಳಿದರು.
ಲಲಿತಕಲಾ ಅಕಾಡೆಮಿ ಅಧ್ಯಕ್ಷರಾಗಿ ಆ.13ರಂದು ಪದತ್ಯಾಗ ಮಾಡಲಿರುವ ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. “ಕಳೆದ 50 ವರ್ಷಗಳಲ್ಲಿ ಆಗದಷ್ಟು ಕಾರ್ಯಕ್ರಮಗಳನ್ನು ಮೂರೂವರೆ ವರ್ಷದಲ್ಲಿ ಮಾಡಿದ್ದೇವೆ. ಸಾವಿರಾರು ಅವಕಾಶ ವಂಚಿತ ಕಲಾವಿದರಿಗೆ ಮೊದಲ ಬಾರಿಗೆ ಅಕಾಡೆಮಿಯು ವಿವಿಧ ಅವಕಾಶ ನೀಡಿದೆ. ಪ್ರತಿಭೆಗಳನ್ನು ಗುರುತಿಸಿ ಅವಕಾಶ ನೀಡುವ ಉದ್ದೇಶದಿಂದ ರಾಜ್ಯದ ಉದ್ದಗಲಕ್ಕೂ ಸುಮಾರು 1 ಲಕ್ಷ ಕಿ.ಮೀ. ಪ್ರವಾಸ ಮಾಡಿದ್ದೇನೆ’ ಎಂದು ತಿಳಿಸಿದರು.
ನಗರದ ಮಲ್ಲತ್ತಹಳ್ಳಿಯಲ್ಲಿರುವ ಕಲಾಗ್ರಾಮದಲ್ಲಿ ಗ್ರಾಫಿಕ್ ಕಲಾ ಕೇಂದ್ರಕ್ಕೆ ಸಚಿವೆ ಉಮಾಶ್ರೀಯವರು ಶಂಕುಸ್ಥಾಪನೆ ನೆರವೇರಿಸಿದ್ದು, ಲೋಕೋಪಯೋಗಿ ಇಲಾಖೆಗೆಯಿಂದ ಹಣ ಸಂದಾಯವಾಗಿದೆ, ಮುಂಬರುವ ಅಕಾಡೆಮಿ ಅಧ್ಯಕ್ಷರು ಮುತುವರ್ಜಿ ವಹಿಸಿ ಶೀಘ್ರವೇ ಗ್ರಾಫಿಕ್ ಕಲಾಕೇಂದ್ರ ನಿರ್ಮಿಸಿ ಲೋಕಾರ್ಪಣೆ ಮಾಡಬೇಕು. ಇದಲ್ಲದೇ ಮೂರೂವರೆ ವರ್ಷದಲ್ಲಿ ಹಲವಾರು ವಿಚಾರ ಸಂಕಿರಣ, ಕಲಾಕಮ್ಮಟಗಳು, ಕಾರ್ಯಾಗಾರ, ನೇಪಥ್ಯ ಕಲಾಕಮ್ಮಟ ಇತ್ಯಾದಿಗಳನ್ನು ಯಶಸ್ವಿಯಾಗಿ ನೆರವೇರಿಸಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ
Politics: ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್
2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ
Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ
SSLC Result: ಮೇ.9 ರಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ
MUST WATCH
ಹೊಸ ಸೇರ್ಪಡೆ
ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು
Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ
Charmadi Ghat; ಎರಡನೇ ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷ
Politics: ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್
2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ