ಜಿಲ್ಲೆಗಳಿಗೆ ಆಮ್ಲಜನಕ ಪೂರೈಕೆ: ನೀತಿ ರೂಪಿಸಲು ಆದೇಶ
Team Udayavani, May 7, 2021, 6:23 AM IST
ಬೆಂಗಳೂರು: ರಾಜ್ಯದ ಜಿಲ್ಲೆಗಳಿಗೆ ಆಮ್ಲಜನಕ ಪೂರೈಕೆಗೆ ಸಂಬಂಧಿಸಿ ಸ್ಪಷ್ಟ ನೀತಿ ಇಲ್ಲದಿರುವುದಕ್ಕೆ ಸರಕಾರವನ್ನು ತರಾಟೆಗೆ ತೆಗೆದು ಕೊಂಡಿರುವ ಹೈಕೋರ್ಟ್, ತತ್ಕ್ಷಣವೇ ಮಾರ್ಗಸೂಚಿ ರೂಪಿಸುವಂತೆ ಆದೇಶಿಸಿದೆ.
ಕೋವಿಡ್-19 ನಿರ್ವಹಣೆ ಮತ್ತು ಚಿಕಿತ್ಸೆಗೆ ಸಂಬಂಧಿಸಿ ಸಲ್ಲಿಕೆಯಾ ಗಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾ| ಎ.ಎಸ್. ಓಕ್ ಹಾಗೂ ನ್ಯಾ| ಅರವಿಂದ ಕುಮಾರ್ ಅವರಿದ್ದ ವಿಭಾ ಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.
ಚಾಮರಾಜನಗರದಲ್ಲಿ 24 ಸೋಂಕಿತರ ಸಾವಿಗೆ ಸ್ಪಷ್ಟ ಮಾರ್ಗಸೂಚಿ ಇಲ್ಲ ದಿರುವುದೇ ಕಾರಣ ಎಂದು ನ್ಯಾಯಪೀಠ ಅಭಿಪ್ರಾಯ ಪಟ್ಟಿತು.
ನೂರು ಮೆಟ್ರಿಕ್ ಟನ್ ಆಮ್ಲಜನಕ :
ಅಡ್ವೊಕೇಟ್ ಜನರಲ್ಪ್ರಭುಲಿಂಗ ನಾವದಗಿ ವಾದ ಮಂಡಿಸಿ, ನ್ಯಾಯಾಲಯದ ನಿರ್ದೇಶನದಂತೆ ಕೇಂದ್ರ ಸರಕಾರ ಬುಧವಾರ 100 ಮೆಟ್ರಿಕ್ ಟನ್ ಆಮ್ಲಜನಕ ಹಂಚಿಕೆ ಮಾಡಿದ್ದು, ಆ ಪೈಕಿ 60 ಮೆಟ್ರಿಕ್ ಟನ್ ಬಳ್ಳಾರಿಯಿಂದ ಮತ್ತು 40 ಮೆಟ್ರಿಕ್ ಟನ್ ಒಡಿಶಾದ ಕಳಿಂಗಾ ನಗರದಿಂದ ಪಡೆಯಲಾಗಿದೆ ಎಂದರು.
ಕೇಂದ್ರ ಸರಕಾರ 28 ಪಿಎಎಸ್ ಆಕ್ಸಿಜನ್ ಘಟಕಗಳನ್ನು ಮಂಜೂರು ಮಾಡಿದೆ. ಒಂದು ಘಟಕದಿಂದ ಕನಿಷ್ಠ 15 ರಿಂದ 20 ಹಾಸಿಗೆಗಳಿಗೆ ಆಕ್ಸಿಜನ್ ಪೂರೈಸಬಹುದು. ರಾಜ್ಯವೂ 40 ಪಿಎಎಸ್ಗಳಿಗೆ ಬೇಡಿಕೆ ಸಲ್ಲಿಸಿದೆ. ಒಟ್ಟಾರೆ ಈ ಮಾಸಾಂತ್ಯಕ್ಕೆ 68 ಪಿಎಎಸ್ ಆಮ್ಲಜನಕ ಘಟಕಗಳು ಕಾರ್ಯಾರಂಭಿಸಲಿವೆ ಎಂದರು.
ಅಲ್ಲದೆ ಬಹ್ರೈನ್ನಿಂದ 20 ಮೆಟ್ರಿಕ್ ಟನ್ ಮತ್ತು ಐಒಸಿಯಿಂದ 20 ಮೆಟ್ರಿಕ್ ಟನ್ ಆಮ್ಲಜನಕ ರಾಜ್ಯಕ್ಕೆ ಬರುತ್ತಿದೆ. 5 ಖಾಲಿ ಟ್ಯಾಂಕರ್ಗಳನ್ನು ವಿಮಾನದ ಮೂಲಕ ಒಡಿಶಾಗೆ ಕಳುಹಿಸಲಾಗಿದ್ದು, ತಲಾ 74 ಟನ್ ಸಾಮರ್ಥ್ಯದ ಈ ಟ್ಯಾಂಕರ್ 48 ಗಂಟೆಗಳಲ್ಲಿ ರಾಜ್ಯಕ್ಕೆ ಆಮ್ಲಜನಕವನ್ನು ತರಲಿವೆ. ರಾಜ್ಯದಲ್ಲಿ ಉತ್ಪಾದನೆಯಾಗುವ ಆಮ್ಲಜನಕವನ್ನು ಇಲ್ಲೇ ಬಳಸುವ ಬಗ್ಗೆ ರಾಜ್ಯದ ಸಚಿವರು, ಕೇಂದ್ರ ಸಚಿವರೊಂದಿಗೆ ಸಮಾಲೋಚಿಸಿ ದ್ದಾರೆ ಎಂದು ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
MUST WATCH
ಹೊಸ ಸೇರ್ಪಡೆ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil