ಸುಧಾ ಮಂಗಲೋತ್ಸವದಂದೇ ಪದ್ಮಪ್ರಶಸ್ತಿ ಘೋಷಣೆ
Team Udayavani, Jan 26, 2020, 3:00 AM IST
ಉಡುಪಿ: ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥರು ನವೆಂಬರ್ ಕೊನೆಯ ವಾರದಲ್ಲಿ ತಮ್ಮ 39ನೆಯ ಸುಧಾಮಂಗಲೋತ್ಸವವನ್ನು ಕೋಲಾರ ಜಿಲ್ಲೆಯ ಮುಳುಬಾಗಿಲಿನ ಶ್ರೀಪಾದರಾಜರ ಸನ್ನಿಧಾನದಲ್ಲಿ ನಡೆಸುವುದಾಗಿ ನಿಶ್ಚಯಿಸಿದ್ದರು. ಇದೀಗ ಸುಧಾಮಂಗಲೋತ್ಸವ ಉದ್ಘಾಟನೆಯ ಸಮಯದಲ್ಲಿಯೇ ಶ್ರೀಪಾದರಿಗೆ ಪದ್ಮವಿಭೂಷಣ ಪ್ರಶಸ್ತಿಯನ್ನು ಪ್ರಕಟಿಸಲಾಯಿತು.
ಸುಧಾಮಂಗಲೋತ್ಸವ ಶನಿವಾರ ಸಂಜೆ ಉದ್ಘಾಟನೆಗೊಂಡಿತು. ಪದ್ಮವಿಭೂಷಣ ಪ್ರಶಸ್ತಿ ಘೋಷಣೆಯಾಗುವಾಗ ಸಭಾ ಕಾರ್ಯಕ್ರಮ ನಡೆಯುತ್ತಿತ್ತು. ಈ ದಿನವನ್ನು ಸ್ವತ: ಶ್ರೀವಿಶ್ವೇಶತೀರ್ಥರು ನಿಗದಿಪಡಿಸಿದ್ದು ಮಾತ್ರವಲ್ಲದೆ ಮಠದ ವತಿಯಿಂದ ಅವರಾಗಿ ನಿಗದಿಪಡಿಸಿದ ಕಾರ್ಯಕ್ರಮ ಇದುವೇ ಕೊನೆಯದ್ದು. ಎರಡು ಗೌರವ ಡಾಕ್ಟರೇಟ್ ಪದವಿ ಅವರಿಗೆ ಸಿಕ್ಕಿದ್ದರೂ ಡಾ|ಎಂದು ಹಾಕಿಕೊಳ್ಳದ ಶ್ರೀಪಾದರಿಗೆ ಈಗ ಪದ್ಮವಿಭೂಷಣ ಪ್ರಶಸ್ತಿ ದೊರಕಿದೆ.
ಪ್ರಥಮ ರಾಷ್ಟ್ರಪತಿ ಬಾಬುರಾಜೇಂದ್ರ ಪ್ರಸಾದರ ಸಂಪರ್ಕ ಹೊಂದಿದ್ದ ಶ್ರೀಪಾದರಿಗೆ ಈಗಿನ 14ನೆಯ ರಾಷ್ಟ್ರಪತಿ ರಾಮನಾಥ ಕೋವಿಂದರು ಉಡುಪಿಗೆ ಬಂದು 2018ರ ಡಿ. 27ರಂದು ಗೌರವಿಸಿದ್ದರು. ಇದೀಗ ಕೋವಿಂದರೇ ಶ್ರೀಪಾದರಿಗೆ ಮರಣೋತ್ತರವಾಗಿ ಪದ್ಮವಿಭೂಷಣ ಪ್ರಶಸ್ತಿಯನ್ನು ಪ್ರದಾನ ಮಾಡುವ ಯೋಗ ಕೂಡಿ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ